ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯ: ಪ್ರೊ. ದೊಡ್ಡಣ್ಣ ಬಜಂತ್ರಿ
ಸಪ್ತಸಾಗರ ವಾರ್ತೆ,ತಿಕೋಟಾ, ಆ.5: ರಾಷ್ಟ್ರಧ್ವಜವು ಭಾರತದ ಸ್ವಾತಂತ್ರ್ಯ, ತ್ಯಾಗ, ಶಾಂತಿ, ಸತ್ಯ ಹಾಗೂ ಸಮೃದ್ಧಿಯ ಪ್ರತೀಕವಾಗಿದ್ದು, ಅದಕ್ಕೆ ಗೌರವ ಸಲ್ಲಿಸುವುದೇ ನಿಜವಾದ ದೇಶಸೇವೆ ಎಂದು ಪ್ರೊ. ದೊಡ್ಡಣ್ಣ ಬಜಂತ್ರಿ ಹೇಳಿದರು.ಪಟ್ಟಣದ ಬಿ.ಎಲ್.ಡಿ.ಇ. ನ್ಯೂ ಆರ್ಟ್ಸ್ ಕಾಲೇಜಿನಲ್ಲಿ ದಲಿತ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ವಿಜಯಪುರದ ಅಧ್ಯಕ್ಷ ರವಿ ಕಿತ್ತೂರ ಹಾಗೂ ವಿಭಾಗೀಯ ಸಂಯೋಜಕ ಮೋಹನ ಕಟ್ಟಿಮನಿ ಅವರ ಆಯೋಜನೆಯಲ್ಲಿ, ಮಹಾವಿದ್ಯಾಲಯದ ಐಕ್ಯೂಎಸಿ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಭಾರತ ಸೇವಾದಳ ವಿಜಯಪುರ ಇವರ ಸಹಯೋಗದಲ್ಲಿ ರಾಷ್ಟ್ರಧ್ವಜ…


