ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯ: ಪ್ರೊ. ದೊಡ್ಡಣ್ಣ ಬಜಂತ್ರಿ

ಸಪ್ತಸಾಗರ ವಾರ್ತೆ,ತಿಕೋಟಾ, ಆ.5: ರಾಷ್ಟ್ರಧ್ವಜವು ಭಾರತದ ಸ್ವಾತಂತ್ರ್ಯ, ತ್ಯಾಗ, ಶಾಂತಿ, ಸತ್ಯ ಹಾಗೂ ಸಮೃದ್ಧಿಯ ಪ್ರತೀಕವಾಗಿದ್ದು, ಅದಕ್ಕೆ ಗೌರವ ಸಲ್ಲಿಸುವುದೇ ನಿಜವಾದ ದೇಶಸೇವೆ ಎಂದು ಪ್ರೊ. ದೊಡ್ಡಣ್ಣ ಬಜಂತ್ರಿ ಹೇಳಿದರು.ಪಟ್ಟಣದ ಬಿ.ಎಲ್.ಡಿ.ಇ. ನ್ಯೂ ಆರ್ಟ್ಸ್ ಕಾಲೇಜಿನಲ್ಲಿ ದಲಿತ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ವಿಜಯಪುರದ ಅಧ್ಯಕ್ಷ ರವಿ ಕಿತ್ತೂರ ಹಾಗೂ ವಿಭಾಗೀಯ ಸಂಯೋಜಕ ಮೋಹನ ಕಟ್ಟಿಮನಿ ಅವರ ಆಯೋಜನೆಯಲ್ಲಿ, ಮಹಾವಿದ್ಯಾಲಯದ ಐಕ್ಯೂಎಸಿ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಭಾರತ ಸೇವಾದಳ ವಿಜಯಪುರ ಇವರ ಸಹಯೋಗದಲ್ಲಿ ರಾಷ್ಟ್ರಧ್ವಜ…

Read More

ವಿಜಯಪುರ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 4:ವಿಜಯಪುರ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಜಿಲ್ಲೆ ಎಂದು ಘೋಷಿಸಿ, ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಅಖಿಲ ಕರ್ನಾಟಕ ರೈತ ಸಂಘ (ರಿ) ರಾಜ್ಯ ಘಟಕ ಆಗ್ರಹಿಸಿದೆ.ಮಂಗಳವಾರ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದ ಕಾರಣ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು,…

Read More

ಮಹಿಳೆಯರಿಗೆ ಶೂನ್ಯ ಸ್ಥಾನ, ವಿಜಯಪುರಕ್ಕೂ ನಿರಾಸೆ: ಸಚಿವ ಸಂಪುಟ ವಿಸ್ತರಣೆ ವಿರುದ್ಧ ಆಪ್ ವಾಗ್ದಾಳಿ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 4: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಹಿಳೆಯರಿಗೆ ಒಂದೇ ಒಂದು ಸಚಿವ ಸ್ಥಾನವನ್ನೂ ನೀಡದಿರುವುದು, ಭ್ರಷ್ಟಾಚಾರದ ಆರೋಪ ಎದುರಿಸಿದ್ದ ನಾಯಕರಿಗೆ ಮತ್ತೆ ಅವಕಾಶ ಕಲ್ಪಿಸಿರುವುದು ಹಾಗೂ ವಿಜಯಪುರ ಜಿಲ್ಲೆಗೆ ಹೆಚ್ಚುವರಿ ಪ್ರಾತಿನಿಧ್ಯ ನೀಡದಿರುವುದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯವನ್ನು ಬಯಲಿಗೆಳೆದಿದೆ ಎಂದು ಆಮ್ ಆದ್ಮಿ ಪಕ್ಷದ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆರೋಪಿಸಿದರು.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಸಬಲೀಕರಣದ ಬಗ್ಗೆ ವೇದಿಕೆಗಳಲ್ಲಿ ಮಾತನಾಡುವ ಕಾಂಗ್ರೆಸ್, ಅಧಿಕಾರ ಹಂಚಿಕೆಯ ಸಂದರ್ಭದಲ್ಲಿ ಮಹಿಳೆಯರನ್ನು ಸಂಪೂರ್ಣವಾಗಿ…

Read More

ಕೆಎಸ್‌ಸಿಎ ಅಂಡರ್-19 ಇಂಟರ್ ಝೋನಲ್ ಟಿ-20ಗೆ ವಿಜಯಪುರದ ತನೂಶ್ರೀ ಇಜೇರಿ ಆಯ್ಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 4:ವಿಜಯಪುರದ ಪ್ರತಿಭಾವಂತ ಯುವ ಕ್ರಿಕೆಟಿಗರಾದ ತನೂಶ್ರೀ ಇಜೇರಿ ಅವರು 2026–27ನೇ ಸಾಲಿನ ಕೆಎಸ್‌ಸಿಎ ಅಂಡರ್-19 ಮಹಿಳಾ ಇಂಟರ್ ಝೋನಲ್ ಟಿ-20 ಪಂದ್ಯಾವಳಿಯ ಕಂಬೈನ್ಡ್ ಮೊಫಸ್ಸಿಲ್ XI ತಂಡಕ್ಕೆ ಆಯ್ಕೆಯಾಗಿದ್ದಾರೆ. ಪಂದ್ಯಾವಳಿಯು ಆಗಸ್ಟ್ 6ರಿಂದ 12ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ.ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕೆಎಸ್‌ಸಿಎ ಮಹಿಳಾ ಇಂಟರ್ ಮೊಫಸ್ಸಿಲ್ ಪಂದ್ಯಾವಳಿಯಲ್ಲಿ ರಾಯಚೂರು ವಲಯ ಮಹಿಳಾ ತಂಡವನ್ನು ಪ್ರತಿನಿಧಿಸಿದ ತನೂಶ್ರೀ ಅವರು ಆಲ್‌ರೌಂಡ್ ಪ್ರದರ್ಶನ ನೀಡಿ ಆಯ್ಕೆ ಸಮಿತಿಯ ಗಮನ ಸೆಳೆದಿದ್ದಾರೆ.ಎಡಗೈ ಆರಂಭಿಕ ಬ್ಯಾಟರ್ ಹಾಗೂ ಎಡಗೈ…

Read More

ಸಚಿವ ಸ್ಥಾನ ಅತೃಪ್ತಿ: ರಾಜೀನಾಮೆ ಕೊಟ್ಟರೆ ಕ್ಷಣದಲ್ಲೇ ಅಂಗೀಕಾರ – ಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಆ. 4: ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ರಾಜೀನಾಮೆ ನೀಡಲು ಮುಂದಾಗಿರುವ ಶಾಸಕರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ನೀಡಿದ್ದಾರೆ. “ರಾಜೀನಾಮೆ ಕೊಡುವವರನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಯಾರಾದರೂ ರಾಜೀನಾಮೆ ನೀಡಿದರೆ ಕ್ಷಣದಲ್ಲೇ ಅಂಗೀಕರಿಸುತ್ತೇನೆ. ರಾಜಕೀಯದಲ್ಲಿ ತಾಳ್ಮೆ ಅತ್ಯಂತ ಮುಖ್ಯ, ಪಕ್ಷವೇ ಮೊದಲ ಆದ್ಯತೆ” ಎಂದು ಹೇಳಿದರು.ಸದಾಶಿವನಗರ ನಿವಾಸದ ಬಳಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಈ ಹಿಂದೆ ನನಗೂ, ಪರಮೇಶ್ವರ್ ಅವರಿಗೂ ಧರಂಸಿಂಗ್ ಹಾಗೂ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವ…

Read More

ಆಗಸ್ಟ್ 5ರಿಂದ 20ರವರೆಗೆ 10 ಕೋಟಿ ಜನರಿಂದ ವ್ಯಸನಮುಕ್ತ ಪ್ರತಿಜ್ಞೆ ಅಭಿಯಾನ: ರಾಜಯೋಗಿನಿ ಬಿ.ಕೆ. ಸರೋಜಾ

ಸಪ್ತಸಾಗರ ವಾರ್ತೆ,ವಿಜಯಪುರ, ಜು.30:ಮಾದಕ ವ್ಯಸನವು ವ್ಯಕ್ತಿಯ ಜೀವನವಷ್ಟೇ ಅಲ್ಲ, ಕುಟುಂಬ ಮತ್ತು ಸಮಾಜದ ಭವಿಷ್ಯವನ್ನೂ ಹಾಳು ಮಾಡುವ ಗಂಭೀರ ಸಾಮಾಜಿಕ ಪಿಡುಗಾಗಿದ್ದು, ಪ್ರತಿಯೊಬ್ಬರೂ ವ್ಯಸನಮುಕ್ತ ಜೀವನಕ್ಕೆ ಸಂಕಲ್ಪ ಮಾಡಬೇಕು ಎಂದು ವಿಜಯಪುರ ಬ್ರಹ್ಮಕುಮಾರಿ ಸೇವಾಕೇಂದ್ರದ ಸಂಚಾಲಕಿ ರಾಜಯೋಗಿನಿ ಬಿ.ಕೆ. ಸರೋಜಾ ಕರೆ ನೀಡಿದರು.ತಿಕೋಟಾ ತಾಲ್ಲೂಕಿನ ಲೋಹಗಾಂವ ಗ್ರಾಮದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಆಶ್ರಮದಲ್ಲಿ ಗುರುಪೂರ್ಣಿಮೆ ಹಾಗೂ ವ್ಯಸನಮುಕ್ತ ಪ್ರತಿಜ್ಞಾ ವಿಧಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಲೋಹಗಾಂವ ಹಿರೇಮಠದ ಅಲ್ಲಮಪ್ರಭು ಮಹಾರಾಜರು ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿ, ಇಂದಿನ…

Read More

ಚನ್ನಮ್ಮ ದೇವೇಗೌಡರಿಗೆ ಜೆಡಿಎಸ್ ಜಿಲ್ಲಾ ಘಟಕದಿಂದ ಭಾವಪೂರ್ಣ ಶ್ರದ್ಧಾಂಜಲಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು.19:ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ದಿವಂಗತ ಚನ್ನಮ್ಮ ದೇವೇಗೌಡ ಅವರಿಗೆ ವಿಜಯಪುರ ಜೆಡಿಎಸ್ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಕಾರ್ಯಾಲಯದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮೌನಾಚರಣೆ ನಡೆಸಿ, ದಿವಂಗತರ ಆತ್ಮಕ್ಕೆ ಶಾಂತಿ ಕೋರಿದರು.ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಹಿರಿಯ ಮುಖಂಡ ಪಂಚಪ್ಪ ಕಲಬುರ್ಗಿ, ಚನ್ನಮ್ಮ ದೇವೇಗೌಡ ಅವರು ಸರಳತೆ, ಸೌಜನ್ಯ ಹಾಗೂ ಕುಟುಂಬ ಮೌಲ್ಯಗಳ ಪ್ರತೀಕವಾಗಿದ್ದರು ಎಂದು ಸ್ಮರಿಸಿದರು. ದೇವೇಗೌಡರ ರಾಜಕೀಯ…

Read More

ಬರ ಪರಿಸ್ಥಿತಿ: ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಪೊಲೀಸರು 24 ಗಂಟೆಗಳ ಕಾಲ ಕೆಲಸ ಮಾಡಬೇಕು- ಸಿಎಂ ಡಿಕೆಶಿ

ಸಪ್ತಸಾಗರ ವಾರ್ತೆ,ಬೆಂಗಳೂರು, ಜುಲೈ 19:ಎಲ್ಲಾ ಯುವಕರ ಇಚ್ಛೆ ಹಾಗೂ ಮನವಿಯಂತೆ ಇಂದು ನಡೆಯಲಿರುವ ಫಿಫಾ ವಿಶ್ವಕಪ್ ಅಂತಿಮ ಪಂದ್ಯ ವೀಕ್ಷಣೆಗೆ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಬೆಳಗಿನ ಜಾವ 3.30 ರವರೆಗೆ ಕಾರ್ಯನಿರ್ವಹಿಸಲು ವಿಶೇಷ ಅನುಮತಿ ನೀಡಲಾಗಿದೆ. ಅಭಿಮಾನಿಗಳು ಫುಟ್ಬಾಲ್ ಅಭಿಮಾನಿಗಳು ಶಾಂತಿಯುತವಾಗಿ ವರ್ತಿಸಬೇಕು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.ವಿಧಾನಸೌಧದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.ಪೋಲಿಸರು ಎಲ್ಲೆಡೆ ಕ್ಯಾಮರಾಗಳನ್ನು ಅಳವಡಿಸಿದ್ದಾರೆ. ಯಾರೇ ಗೆಲ್ಲಲಿ, ಯುವಜನರು ತಾಳ್ಮೆಯನ್ನು ಕಳೆದುಕೊಳ್ಳದೆ ಪುಟ್ಬಾಲ್ ಆಟವನ್ನು ವೀಕ್ಷಿಸಬೇಕು ಎಂದು…

Read More

ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್ ಸಭೆ: ರಾಜ್ಯ ನಾಯಕರಿಗೆ ವರದಿ ಸಲ್ಲಿಕೆ – ಡಾ. ಅಂಜಲಿ ಲಿಂಬಾಳ್ಕರ್

ಸಪ್ತಸಾಗರ ವಾರ್ತೆ,ವಿಜಯಪುರ, ಜು.18:ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಜಿಲ್ಲೆಯಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಎಐಸಿಸಿ ಕಾರ್ಯದರ್ಶಿ, ಮಾಜಿ ಶಾಸಕಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗೀಯ ಎಸ್‌ಐಆರ್ ವೀಕ್ಷಕಿ ಡಾ. ಅಂಜಲಿ ಲಿಂಬಾಳ್ಕರ್ ಅಧ್ಯಕ್ಷತೆಯಲ್ಲಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಎಸ್. ಲೋಣಿ ನೇತೃತ್ವದಲ್ಲಿ ಸಭೆ ನಡೆಯಿತು.ಸಭೆಯಲ್ಲಿ ಜಿಲ್ಲೆಯ ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ತಮ್ಮ ಕ್ಷೇತ್ರಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ವೇಳೆ ಎದುರಾಗುತ್ತಿರುವ ಸಮಸ್ಯೆಗಳನ್ನು ವಿವರಿಸಿದರು. ಹಲವೆಡೆ ಬಿಎಲ್‌ಒಗಳು…

Read More

ಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯ.

ಸ್ವಇಚ್ಛೆಯಿಂದ ಭೂಮಿ ನೀಡುವವರಿಗೆ ಪರಿಹಾರ ಸಪ್ತಸಾಗರ ವಾರ್ತೆ,ಬೆಂಗಳೂರು, ಜು.15: “ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಸರ್ಕಾರವು ಯಾವುದೇ ರೈತರಿಂದ ಬಲವಂತವಾಗಿ ಜಮೀನು ಪಡೆಯುವುದಿಲ್ಲ. ಸ್ವಇಚ್ಛೆಯಿಂದ ಮುಂದೆ ಬಂದು ಭೂಮಿ ಕೊಟ್ಟವರಿಗೆ ಪರಿಹಾರ ನೀಡುತ್ತೇವೆ. ಈ ವಿಚಾರದಲ್ಲಿ ರೈತರ ಅಹವಾಲು, ಅಭಿಪ್ರಾಯ ಪಡೆಯಲು ಸಮಿತಿ ರಚಿಸಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ಮಾಧ್ಯಮಗೋಷ್ಠಿ ನಡೆಸಿ ಶಿವಕುಮಾರ್ ಅವರು ಮಾತನಾಡಿದರು. ಯಾವ ಪ್ರತಿಭಟನೆ ಅಗತ್ಯವಿಲ್ಲ, ನಿಮ್ಮ ಜಮೀನಿನಲ್ಲಿ ನೆಮ್ಮದಿಯಾಗಿರಿ “ಯಾರ ಆಸ್ತಿಯನ್ನು ನಾವು ಬಲವಂತವಾಗಿ…

Read More