ಹೆಸ್ಕಾಂ ಗ್ರಾಮೀಣ ಉಪ ವಿಭಾಗವನ್ನು ಸ್ಥಳಾಂತರ ಮಾಡದಿರಲು ಮನವಿ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 12 : ಹೆಸ್ಕಾಂ ಗ್ರಾಮೀಣ ಉಪ ವಿಭಾಗವನ್ನು ಶಿವಗಿರಿಗೆ ಸ್ಥಳಾಂತರ ಮಾಡುವುದನ್ನು ತಡೆಹಿಡಿಯುವಂತೆ ಒತ್ತಾಯಿಸಿ ರೈತ ಭಾರತ ಪಕ್ಷದಿಂದ ಹೆಸ್ಕಾಂ ಅಧೀಕ್ಷಕ ಅಭಿಯಂತರ ಅವರ ಮೂಲಕ ಶುಕ್ರವಾರ ಹುಬ್ಬಳ್ಳಿ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.ಇದೇ ಸಂದರ್ಭದಲ್ಲಿ ನಾಗಠಾಣ ಮತಕ್ಷೇತ್ರದ ಶಾಸಕ ವಿಠ್ಠಲ್ ಕಟಕದೊಂಡ ಅವರಿಗೂ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಮಾತನಾಡಿ, ಹೊಸ ಕಟ್ಟಡವನ್ನು ಕಟ್ಟಿಸಿರುತ್ತೀರಿ ಅಂತ ಅಲ್ಲಿಗೆ ಗ್ರಾಮೀಣ ಉಪವಿಭಾಗವನ್ನು ಸ್ಥಳಾಂತರ…

Read More

ಸಮರ್ಪಣಾ ಭಾವನೆಯಿಂದ ಸೇವೆ ಸಲ್ಲಿಸಿ: ಪ್ರೊ. ಸಿ. ಎಸ್. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 8: ವಿದ್ಯಾರ್ಥಿಗಳು ಕಾನೂನು ಶಿಕ್ಷಣವನ್ನು ಶ್ರದ್ದೆಯಿಂದ ಅಧ್ಯಯನ ಮಾಡಿ ಸಮರ್ಪಣೆ ಮನೋಭಾವದಿಂದ ಸೇವೆ ಮಾಡುವ ಮೂಲಕ ನ್ಯಾಯ ಮತ್ತು ಸಮಗ್ರತೆಯನ್ನು ಎತ್ತಿ ಹಿಡಿಯಬೇಕು ಎಂದು ಬೆಂಗಳೂರಿನ ಕರ್ನಾಟಕ ಸಂಸದೀಯ ಸುಧಾರಣೆ ಸಂಸ್ಥೆ(ಕೆ.ಐ.ಎಲ್.ಪಿ.ಏ.ಆರ್) ನಿರ್ದೇಶಕ ಪ್ರೊ. ಸಿ. ಎಸ್. ಪಾಟೀಲ ಹೇಳಿದ್ದಾರೆ.ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಶಾಲೆಯಲ್ಲಿ ಬುಧವಾರ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಮಾತನಾಡಿ, ಕಾನೂನು ವಿದ್ಯಾರ್ಥಿಗಳು…

Read More

ಪಿಪಿಪಿ ಮಾದರಿ ಮೆಡಿಕಲ್ ಕಾಲೇಜ್ ಕೈ ಬಿಡಲು ಒತ್ತಾಯಮುಖ್ಯಮಂತ್ರಿ ಬಳಿ ನಿಯೋಗ ಹೋಗಲು ನಿರ್ಧಾರ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 5: ವಿಜಯಪುರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜ್ ಸ್ಥಾಪನೆ ಕೈ ಬಿಟ್ಟು ಪೂರ್ಣವಾಗಿ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಯ ಕೂಗು ದಿನದಿಂದ ದಿನಕ್ಕೆ ಬಲಗೊಳ್ಳುತ್ತಿದ್ದು, ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ವಿವಿಧ ಸಂಘಟನೆ, ರೈತ ಸಂಘಟನೆಗಳು ಸೇರಿದಂತೆ ಒಂದೇ ವೇದಿಕೆಯಡಿಯಲ್ಲಿ ಹೋರಾಟ ನಡೆಸಲು `ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಹೋರಾಟ ಸಮಿತಿ’ ಅಸ್ತಿತ್ವಕ್ಕೆ ಬಂದಿದ್ದು, ಈ ಸಮಿತಿ ನೇತೃತ್ವದಲ್ಲಿ ವಿಜಯಪುರ ಜಿಲ್ಲೆಗೆ ನಾಳೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಈ…

Read More

ಐತಿಹಾಸಿಕ ಸ್ಮಾರಕಗಳ ದುರಸ್ತಿಗೆ ಮಹಾ ನಿರ್ದೇಶಕರಿಗೆ ಕಲಾಲ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 1:ಗುಮ್ಮಟ ನಗರಿ ವಿಜಯಪುರದಲ್ಲಿ ಇತ್ತೀಚಿಗೆ ಸುರಿದ ಭಾರಿ ಮಳೆಯಿಂದಾಗಿ ಐತಿಹಾಸಿಕ ಸ್ಮಾರಕಗಳು ಹಾನಿಗೊಳಗಾಗಿದ್ದು ಅವುಗಳ ದುರಸ್ತಿ ಕಾರ್ಯ ಕೈಗೊಳ್ಳಬೇಕೆಂದು ಕಾಂಗ್ರೆಸ್ ಮುಖಂಡ ಡಿ.ಎಚ್. ಕಲಾಲ ಅವರುಕಾಂಗ್ರೆಸ್ ನಾಯಕ ಡಿ.ಎಚ್.ಕಲಾಲ್ ನವದೆಹಲಿಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ಮಹಾನಿರ್ದೇಶಕ ಯದುಬೀರ್ ಸಿಂಗ್ ರಾವತ್ ಅವರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದರು.ವಿಜಯಪುರದಲ್ಲಿ ಇತ್ತೀಚಿಗೆ ಸೇರಿದ ಭಾರಿ ಮಳೆಯಿಂದಾಗಿ ನಗರದಲ್ಲಿನ ಪ್ರಮುಖ ಐತಿಹಾಸಿಕ ಸ್ಮಾರಕಗಳು ಹಾನಿಗೀಡಾಗಿವೆ. ಅವುಗಳ ದುರಸ್ತಿ ಕಾರ್ಯವನ್ನು ಕೂಡಲೇ ಕೈಗೊಳ್ಳಬೇಕೆಂದು ಅವರು ಮನವಿಯಲ್ಲಿ…

Read More

ಮೂಲೆ ನಿವೇಶನ ಸಿಎಂ ಸಿದ್ಧರಾಮಯ್ಯ ಹಂಚಿಕೆ

ಸಪ್ತಸಾಗರ ವಾರ್ತೆ, ಮೈಸೂರು, ಆ. 31: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ತಮ್ಮ ನಿವಾಸದಲ್ಲಿ ಕಳೆದ 20 ವರ್ಷಗಳಿಂದ ಹಂಚಿಕೆಯಾಗದೆ ಬಾಕಿ ಉಳಿದಿದ್ದ ಮುಡಾದ 63 ಮೂಲೆ ನಿವೇಶನಗಳನ್ನು ಸರ್ಕಾರದ ವಿವಿಧ ಇಲಾಖೆಗಳಿಗೆ ಹಂಚಿಕೆ ಮಾಡಿ, ಆದೇಶ ಪ್ರತಿ ಹಸ್ತಾಂತರಿಸಿದರು.ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಕ್ಷಿತ್ ಉಪಸ್ಥಿತರಿದ್ದರು.

Read More

ಸಂದೇಶ್ ನಾಗರಾಜ್ ಯಾವುದೇ ಕ್ಷೇತ್ರದಲ್ಲಿದ್ದರೂ ಯಶಸ್ಸು ಸಾಧಿಸುತ್ತಾರೆ: ಸಿ.ಎಂ.ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ಬೆಂಗಳೂರು, ಆ. 31: ಸಂದೇಶ್ ನಾಗರಾಜ್ ಸ್ನೇಹಮಯಿ ವ್ಯಕ್ತಿತ್ವದವರಾಗಿದ್ದು ಯಾವುದೇ ಕ್ಷೇತ್ರದಲ್ಲಿದ್ದರೂ ಯಶಸ್ಸು ಅವರಿಗೆ ಸಿಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.ವಸ್ತು ಪ್ರದರ್ಶನ ಮೈದಾನದಲ್ಲಿ ನಡೆದ ವಿಧಾನ‌ ಪರಿಷತ್ ಮಾಜಿ ಸದಸ್ಯರಾದ ಚಿತ್ರ‌ ನಿರ್ಮಾಪಕ ಸಂದೇಶ್ ನಾಗರಾಜ್ ಅವರ 80ನೇ ವರ್ಷದ ಜನ್ಮ ದಿನ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.80 ವರ್ಷ ಪೂರೈಸಿ ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದಾರೆ. ಇವರು ಶತಾಯುಷಿ ಮಾತ್ರವಲ್ಲ, ಅದಕ್ಕಿಂತ ಹೆಚ್ಚು ಕಾಲ ಆರೋಗ್ಯಕರವಾಗಿ ಜೀವಿಸಲಿ ಎಂದು ಹಾರೈಸಿದರು.ರಾಜಕೀಯವಾಗಿ ಇಬ್ಬರೂ ಬೇರೆ ಬೇರೆ…

Read More

ವಿಜಯಪುರ ತಾಲೂಕು ರೈತ ಸಂಘದ ನೂತನ ಪದಾಧಿಕಾರಿಗಳ ನೇಮಕ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30: ತಾಲೂಕಿನ ಕರ್ನಾಟಕ ರಾಜ್ಯ ರೈತ ಸಂಘದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.ಮಹಾದೇವಪ್ಪ ತೇಲಿ (ಅಧ್ಯಕ್ಷ), ಜಯಸಿಂಗ್ ರಜಪೂತ ( ಪ್ರಧಾನ ಕಾರ್ಯದರ್ಶಿ) ಪ್ರಭುಲಿಂಗ ಕಾರಜೋಳ ( ಯುವ ಘಟಕ ಅಧ್ಯಕ್ಷ) ಅವರನ್ನು ಬೆಳಗಾವಿ ವಿಭಾಗದ ಉಪಾಧ್ಯಕ್ಷ ಬಸನಗೌಡ ಧರ್ಮಗೊಂಡ ಹಾಗೂ ರಾಜ್ಯ ಯುವ ಘಟಕದ ಸಂಚಾಲಕ ಸಿದ್ಧನಗೌಡ ಪಾಟೀಲ ಅವರು ಎಲ್ಲ ಪದಾಧಿಕಾರಿಗಳ ಸಮಕ್ಷಮದಲ್ಲಿ ಒಮ್ಮತದಿಂದ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ಅವೈಜ್ಞಾನಿಕ ಮೀಸಲಾತಿ ಕೈಬಿಡಿ, ಎಲ್ಲರಿಗೂ ಸಮಾನ ಮೀಸಲಾತಿ ನೀಡಿ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30 :ಒಳಮೀಸಲಾತಿ ವರ್ಗೀಕರಣ ಅವೈಜ್ಞಾನಿಕವಾಗಿದೆ. ಅವೈಜ್ಞಾನಿಕ ಒಳಮೀಸಲಾತಿ ರದ್ದುಗೊಳಿಸಿ, ಕಲ್ಪಿಸುವುದಾದರೆ ಎಲ್ಲರಿಗೂ ಸಮಾನವಾಗಿ ಮೀಸಲಾತಿ ನೀಡಿ ಎಂದು ಬಂಜಾರಾ, ಕೊರಚ, ಕೊರಮ, ಭೋವಿ ಸಮುದಾಯದ ಮುಖಂಡರು ಸರ್ಕಾರಕ್ಕೆ ಒತ್ತಾಯಿಸಿದರು.ವಿವಿಧ ಸಮಾಜ ಮುಖಂಡರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಸರ್ಕಾರಕ್ಕೆ ಒತ್ತಾಯಿಸಿದರು.ಈ ಎಲ್ಲ ಸಂದೇಶವನ್ನು ಸರ್ಕಾರಕ್ಕೆ ತಲುಪಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ ೧೦ ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂಬ ಮಾಹಿತಿಯನ್ನು ತಿಳಿಸಿದರು.ಮಾಜಿ ಶಾಸಕ ಮನೋಹರ ಐನಾಪೂರ, ಸ್ಪೃಶ್ಯ, ಅಸ್ಪೃಶ್ಯ ಎಂಬ…

Read More

ಶೀಘ್ರದಲ್ಲೇ ಹುಬ್ಬಳ್ಳಿಯಲ್ಲಿರಾಜ್ಯ ಮಟ್ಟದ ಅಹಿಂದ ವಿಚಾರ ಸಂಕಿರಣ:ಸೆ. 2ರಂದು ಪೂರ್ವಭಾವಿ ಸಭೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30: ಶೀಘ್ರದಲ್ಲೇ ಹುಬ್ಬಳ್ಳಿಯಲ್ಲಿ. ನಡೆಯಲಿರುವ ರಾಜ್ಯ ಮಟ್ಟದ ವಿಚಾರ ಸಂಕಿರಣದ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ಪೂರ್ವಭಾವಿ ಸಭೆ ಸೆ. 2ರಂದು ಬೆಳಗ್ಗೆ 11 ಗಂಟೆಗೆ ಆಲಮಟ್ಟಿ ಸರ್ಕ್ಯೂಟ್ ಹೌಸ್ ನಲ್ಲಿ ನಡೆಯಲಿದೆ.ಅಹಿಂದ ಶುರುವಿನಲ್ಲಿ ದುಡಿದವರು, ಜೊತೆಗೆ ನಡೆದವರು ಮತ್ತು ಈಗ ಅದರ ಆಶಯಗಳನ್ನು ಹೊತ್ತು ಸಾಗುತ್ತಿರುವವರು ಈ ಸಭೆಯಲ್ಲಿ ತಪ್ಪದೇ ಭಾಗವಹಿಸಬೇಕು ಎಂದು ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ ಅವರ ಕ್ರೀಡಾ ಸಾಧನೆ ಎಲ್ಲರಿಗೂ ಸ್ಪೂರ್ತಿ:ಕೋರಿ

ಸಪ್ತಸಾಗರ ವಾರ್ತೆ ವಿಜಯಪುರ, ಆ. 29: ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ ಅವರ ಕ್ರೀಡಾ ಸಾಧನೆ ಎಲ್ಲರಿಗೂ ಸ್ಪೂರ್ತಿಯಾಗಿದೆ ಎಂದು ಬಿ.ಎಲ್.ಡಿ.ಇ. ಸಂಸ್ಥೆಯ ಕ್ರೀಡಾ ವಿಭಾಗದ ನಿರ್ದೇಶಕ ಎಸ್.ಎಸ್. ಕೋರಿ ಹೇಳಿದ್ದಾರೆ.ಶುಕ್ರವಾರ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಬಿ.ಎಲ್.ಡಿ.ಇ. ಸಂಸ್ಥೆಯ ಶ್ರೀ. ಬಿ. ಎಂ. ಪಾಟೀಲ ಪಬ್ಲಿಕ್ ಸಿ.ಬಿ.ಎಸ್.ಇ ಶಾಲೆಯ ವತಿಯಿಂದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮಧುಮೇಹ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಕ್ರೀಡೆ ಮತ್ತು ಆರೋಗ್ಯ ಒಂದಕ್ಕೊಂದು ಪೂರಕವಾಗಿವೆ….

Read More