ವಿಜಯಪುರದಲ್ಲಿ ಬರ ಅಧ್ಯಯನಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ, ಪರಿಶೀಲನೆ
ಸಪ್ತಸಾಗರ ವಾರ್ತೆ,ವಿಜಯಪುರ, ಜು.14: ರಾಜ್ಯದಲ್ಲಿ ಉಂಟಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಅಧ್ಯಯನ ಮಾಡಲು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಂಗಳವಾರ ವಿಜಯಪುರ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು. ರೈತರನ್ನು ಭೇಟಿ ಮಾಡಿ ಬೆಳೆ ಹಾನಿ, ನೀರಿನ ಸಮಸ್ಯೆ ಹಾಗೂ ಕೃಷಿ ಸಂಕಷ್ಟದ ಕುರಿತು ಮಾಹಿತಿ ಸಂಗ್ರಹಿಸಿದರು.ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಜೆಡಿಎಸ್ ರಚಿಸಿರುವ ವಿಶೇಷ ಅಧ್ಯಯನ ತಂಡದ ನೇತೃತ್ವದಲ್ಲಿ ಈ ಪ್ರವಾಸ ನಡೆಯಿತು. ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ರೈತರೊಂದಿಗೆ…


