ನರೇಗಾ ಕಾಮಗಾರಿ ಸ್ಥಳಕ್ಕೆ ಪ್ರಕಾಶ ವಡ್ಡರ ಭೇಟಿ
ಸಪ್ತಸಾಗರ ವಾರ್ತೆ,ವಿಜಯಪುರ, ಮೇ 8 :ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರಳದಿನ್ನಿ ಗ್ರಾಮದ ಸಮೀಪ ಬಸಿಗಾಲುವೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ್ ಅವರು ಭೇಟಿ ನೀಡಿ ಪರಿಶೀಲಿಸಿದರು.ಇದೇ ಸಂದರ್ಭದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರ ಮಸ್ಟರ್ ರೂಲ್ ಹಾಗೂ ಫೋಟೊ ಆಧಾರಿತ ಹಾಜರಾತಿ ಪರಿಶೀಲಿಸಿದರು.ಕೂಲಿಕಾರರೊಂದಿಗೆ ಸಂವಾದ ನಡೆಸಿದ ಅವರು, ಈ ಯೋಜನೆಯಡಿ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು.ಹೂಳೆತ್ತುವ ಕಾಯಕದಲ್ಲಿ ಮಗ್ನರಾಗಿದ್ದ ಕೂಲಿಕಾರರು ತಮ್ಮ ಕೆಲಸದ…


