ಕರ್ತವ್ಯನಿರತ ಕೆಎಸ್ಆರ್ಟಿಸಿ ನಿರ್ವಾಹಕನ ಕತ್ತು ಹಿಸುಕಿ ಅಮಾನುಷ ಹಲ್ಲೆ
ಸಪ್ತಸಾಗರ ವಾರ್ತೆ,ವಿಜಯಪುರ, ಆ.1: ಕರ್ತವ್ಯ ನಿರ್ವಹಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿರ್ವಾಹಕನ ಮೇಲೆ ಇಬ್ಬರು ದುಷ್ಕರ್ಮಿಗಳು ಬಸ್ನ್ನು ಮಧ್ಯ ರಸ್ತೆಯಲ್ಲೇ ತಡೆದು ಅಮಾನುಷವಾಗಿ ಹಲ್ಲೆ ನಡೆಸಿ, ಕುತ್ತಿಗೆ ಹಿಸುಕಿ ಅರೆಪ್ರಜ್ಞಾಹೀನಗೊಳಿಸಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕಲಹಳ್ಳಿ ಸಮೀಪ ಶನಿವಾರ ನಡೆದಿದೆ.ಮದರಿ–ಕನ್ನೊಳ್ಳಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸಾರಿಗೆ ಬಸ್ನ್ನು ಆರೋಪಿಗಳು ತಡೆದು ನಿರ್ವಾಹಕ ಮಲ್ಲಪ್ಪ ಲಮಾಣಿ ಅವರೊಂದಿಗೆ ಕ್ಷುಲ್ಲಕ ವಿಚಾರಕ್ಕೆ ಜಗಳ ಆರಂಭಿಸಿದರು. ಮಾತಿನ ಚಕಮಕಿ ತೀವ್ರಗೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಿಗಳು ಏಕಾಏಕಿ ಹಲ್ಲೆಗೆ ಮುಂದಾದರು. ನಿರ್ವಾಹಕ…


