
ಕಾಯಕ ಶರಣರ ತತ್ವಾದರ್ಶಗಳು ಸರ್ವಕಾಲಕ್ಕೂ ಪ್ರಸ್ತುತ: ಪಿ.ಜಿ. ಪವಾರ
ಸಪ್ತಸಾಗರ ವಾರ್ತೆ,ವಿಜಯಪುರ, ಆ. 9:ತಮ್ಮ ಬದುಕಿನ ಮೂಲಕವೇ ಕಾಯಕ ತತ್ವಗಳನ್ನು 12ನೇ ಶತಮಾನದಲ್ಲಿಯೇ ಜಗತ್ತಿಗೆ ಸಾರಿದ ಶರಣರು ಆದರ್ಶ ವಿಚಾರಗಳು ನಮಗೆ ದಾರದೀಪವಾಗಿದೆ ಎಂದು ಚುನಾವಣಾ ತಹಶೀಲ್ದಾರ ಪಿ.ಜಿ.ಪವಾರ ಅವರು ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶ್ರೀ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಶರಣರು ತಮ್ಮ ವಚನಗಳ ಮೂಲಕ ಈ ಸಮಾಜಕ್ಕೆ ಬಹು ದೊಡ್ಡ ಕೊಡುಗೆ ನೀಡಿದ್ದಾರೆ. ಶರಣರ…