ಪ್ರಯಾಣಿಕರು ಬಸ್ ನಿಲ್ದಾಣಗಳಲ್ಲಿ ಸ್ವಚ್ಚತೆ ಕಾಪಾಡಿ- ಕುರುಬರ

ಸಪ್ತಸಾಗರ ವಾರ್ತೆ, ವಿಜಯಪುರ,ಜ.13: ಜಿಲ್ಲಾ ಕೇಂದ್ರ ಬಸ್ ನಿಲ್ದಾಣ ಹಾಗೂ ಸ್ಯಾಟಲೈಟ್ ಬಸ್ ನಿಲ್ದಾಣ ಸೇರಿದಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದ ವ್ಯಾಪ್ತಿಗೆ ಒಟ್ಟು 26 ಬಸ್ ನಿಲ್ದಾಣಗಳು ಒಳಪಡುತ್ತಿವೆ.ವಿಭಾಗದ ಬಸ್ ನಿಲ್ದಾಣಗಳ ಸ್ವಚ್ಚತೆ ಹಾಗೂ ನಿಲ್ದಾಣದಲ್ಲಿ ಕುಡಿಯುವ ನೀರು, ಶೌಚಾಲಯಗಳ ಸಮರ್ಪಕ ನಿರ್ವಹಣೆಗೆ ಕ್ರಮ ತೆಗದುಕೊಳ್ಳಲಾಗಿದ್ದು,ಪ್ರಯಾಣಿಕರು ಬಸ್ ನಿಲ್ದಾಣಗಳಲ್ಲಿ ಸ್ವಚ್ಛತೆ ಕಾಪಾಡುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಅವರು ಮನವಿ ಮಾಡಿದ್ದಾರೆ.ಈ ಕುರಿತು ಪ್ರಕಟಣೆ…

Read More

ಸಾರಿಗೆ ನೌಕರರ ಅನಿರ್ದಿಷ್ಟ ಮುಷ್ಕರ: ಪ್ರಯಾಣಿಕರ ಪರದಾಟ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 5:ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಸಾರಿಗೆ ನೌಕರರು ಇಂದಿನಿಂದ ಅನಿರ್ದಿಷ್ಟ ಮುಷ್ಕರ ಆರಂಭಿಸಿದ್ದರಿಂದ ರಾಜ್ಯದ ಎಲ್ಲೆಡೆಯಂತೆ ವಿಜಯಪುರ ಜಿಲ್ಲೆಯಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು ಪ್ರಯಾಣಿಕರು ಪರದಾಡುವಂತಾಗಿದೆ.ನಿನ್ನೆಯಷ್ಟೇ ಸಾರಿಗೆ ನೌಕರರ ಮುಖಂಡರ ಜೊತೆಗೆ ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಮಾತುಕತೆಗಳು ವಿಫಲವಾಗಿದ್ದರಿಂದ ಸಾರಿಗೆ ಮುಷ್ಕರ ಇಂದಿನಿಂದ ಆರಂಭಗೊಂಡಿದೆ.ಬೆಳಿಗ್ಗೆ 6 ಗಂಟೆಯಿಂದಲೇ ಸಾರಿಗೆ ಮುಷ್ಕರ ಆರಂಭವಾಗಿದ್ದರಿಂದ ವಿಜಯಪುರ ಜಿಲ್ಲೆಯ ಯಾವುದೇ ಬಸ್ ನಿಲ್ದಾಣದಲ್ಲಿ ಬಸ್ ಓಡಾಟ ಕಂಡು ಬರಲಿಲ್ಲ. ವಿಜಯಪುರ…

Read More

ಬಸ್ ಪಲ್ಟಿ: ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 4: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಹಲವರಿಗೆ ಸಣ್ಣ ಪುಟ್ಟ ಗಾಯಗಳಾದ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಮನ್ನಾಪುರ ಬಳಿ ಸೋಮವಾರ ಸಂಭವಿಸಿದೆ.ಸಿಂದಗಿಯಿಂದ ಹೊನ್ನಳ್ಳಿಗೆ ತೆರಳುತ್ತಿದ್ದ ಬಸ್ ಹದಗೆಟ್ಟ ರಸ್ತೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣ ಹಾನಿಯಾಗಿಲ್ಲ. ಬಸ್‌ನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಗಾಯಾಳುಗಳನ್ನು ಸಿಂದಗಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಸಿಂದಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More