ಮಾನವ ಜನ್ಮ ಸಾರ್ಥಕತೆಗೆ ಶರಣರ ತತ್ವ ಅಗತ್ಯ- ಚನ್ನಮಲ್ಲಿಕಾರ್ಜುನ ಶ್ರೀಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಜು. 29:ಮನುಷ್ಯ ಆಧ್ಯಾತ್ಮಿಕ ಆಚರಣೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಜೀವನ ಸಾರ್ಥಕ ಮಾಡಿಕೊಳ್ಳಬೇಕು ಎಂದು ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಸೋಮವಾರ ಸಂಜೆ ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಮಹಾಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪುರಾಣ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಾನವ ಜನ್ಮ ಸಾರ್ಥಕತೆಗೆ ಬಸವಾದಿ ಶರಣರ ತತ್ವ, ಸದ್ವಿಚಾರ, ಧ್ಯಾನ, ತಪಸ್ಸು, ಉಪಾಸನೆ, ಭಜನೆ, ಸಂಕೀರ್ತನೆ ಮಾಡುವುದರಿಂದ ಪ್ರಾಪಂಚಿಕ ಜಂಜಡ ದೂರವಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ ಎಂದರು.ಪುರಾಣಿಕರಾದ ಉಮರಾಣಿಯ…

Read More