ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು

ಸಪ್ತಸಾಗರ ವಾರ್ತೆ, ವಿಜಯಪುರ, ಏ. 14:ದುಷ್ಕರ್ಮಿಗಳು ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಗುಂಡು ಹಾರಿಸಿ ಭೀಕರವಾಗಿ ಹತ್ಯೆ ಮಾಡಿದ ದುರ್ಘಟನೆ ನಗರ ಹೊರ ವಲಯದ ಅಲಿಯಾಬಾದ ಬಳಿ ನಡೆದಿದೆ.ಗ್ರಾ.ಪಂ ಸದಸ್ಯ ರಾಜು ಕುರಿ ಎಂಬುವರು ಗುಂಡೇಟಿಗೆ ಬಲಿಯಾಗಿದ್ದಾರೆ.ದುಷ್ಕರ್ಮಿಗಳು ರಾಜುನ ಮೇಲೆ 6 ಸುತ್ತು ಗುಂಡು ಹಾರಿಸಿ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಹಳೆಯ ವೈಷಮ್ಯ ಹತ್ಯೆಗೆ ಕಾರಣ ಇರಬಹುದು ಎಂದು ಶಂಕಿಸಲಾಗಿದೆಪಾಂಗರುನ ದೊಡ್ಡಿ ನಿವಾಸಿಯಾಗಿದ್ದ ರಾಜು ಕುರಿಯು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು…

Read More

ಜಿಲ್ಲಾ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ ಪೊಲೀಸರು ನೊಂದವರ ಭರವಸೆಯ ಆಶಾಕಿರಣ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆಗೆ ಹಗಲಿರುಳು ಶ್ರಮಿಸುವ ಪೊಲೀಸರ ಕಾರ್ಯ ಅನನ್ಯ: ಜಿಲ್ಲಾಧಿಕಾರಿ ಡಾ. ಆನಂದ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 2: ವರ್ಷದುದ್ದಕ್ಕೂ ಸದಾ ಒತ್ತಡದ ಮಧ್ಯೆಯೇ ಕಾರ್ಯನಿರ್ವಹಿಸುವ ಮೂಲಕ ಸಾರ್ವಜನಿಕರ ನೆಮ್ಮದಿಯ ಜೀವನಕ್ಕಾಗಿ, ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಪೊಲೀಸರು ನಿಭಾಯಿಸುವ ಕರ್ತವ್ಯಕ್ಕೆ ಬೆಲೆ ಕಟ್ಟಲಾಗದು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಪೊಲೀಸರ ಕಾರ್ಯವನ್ನು ಬಣ್ಣಿಸಿದರು.ಜಿಲ್ಲಾ ಪೊಲೀಸ್ ಇಲಾಖೆಯಿಂದ ಇಲ್ಲಿನ ಪೊಲಿಸ್ ಕವಾಯತು ಮೈದಾನದಲ್ಲಿ ಗುರುವಾರ ಬೆಳಿಗ್ಗೆ ಹಮ್ಮಿಕೊಂಡಿದ್ದ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಸದಾ ಸಮಾಜದ ಒಳಿತಿಗಾಗಿ ಯಾವ ಪ್ರತಿಫಲಾಪೇಕ್ಷೆಯಿಲ್ಲದೇ ಹಗಲಿರುಳು ಶ್ರಮಿಸುವ ಪೊಲೀಸರು…

Read More

ದೆಹಲಿ ಪೊಲೀಸ್ ನೋಟೀಸ್ ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಸಿಎಂ ಡಿ.ಕೆ. ಶಿವಕುಮಾರ

ಸಪ್ತಸಾಗರ ವಾರ್ತೆ ದೆಹಲಿ, ಡಿ.16:“ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ ಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.ದೆಹಲಿ ಪೊಲೀಸರ ನೋಟೀಸ್ ಗೆ ಉತ್ತರ ನೀಡುವ ಬಗ್ಗೆ ಕೇಳಿದಾಗ, “ಸೋಮವಾರ ದೆಹಲಿ ಪೊಲೀಸರಿಗೆ ಉತ್ತರ ನೀಡಲು ನಿರ್ಧರಿಸಿದ್ದೆ. ಆದರೆ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಶೇಷ ವಿಮಾನದಲ್ಲಿ ದಾವಣಗೆರೆಗೆ ತೆರಳುತ್ತಿದ್ದು, ಅಧಿವೇಶನ ಮುಗಿದ ಬಳಿಕ ಉತ್ತರ…

Read More

ಪೊಲೀಸರ ಗುಂಡೇಟಿಗೆ ರೌಡಿಶೀಟರ್ ಬಲಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 18:ಪರಾರಿಯಾಗಲು ಯತ್ನಿಸಿದ ರೌಡಿಶೀಟರ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದು, ರೌಡಿಶೀಟರ್ ತೀವ್ರವಾಗಿ ಗಾಯಗೊಂಡು ಮೃತಪಟ್ಟ ಘಟನೆಜಿಲ್ಲೆಯ ಸಿಂದಗಿ ತಾಲೂಕಿನ ರಾಂಪೂರ ಬಳಿ ಶನಿವಾರ ಬೆಳಗ್ಗೆ ನಡೆದಿದೆ.ಯುನಸ್ ಇಕ್ಲಾಸ್ ಪಟೇಲ್ (35) ಮೃತಪಟ್ಟ ರೌಡಿಶೀಟರ್.ನಿನ್ನೆ ಓರ್ವನಿಗೆ ಚಾಕೂ ತೋರಿಸಿ 25 ಸಾವಿರ ಹಣ ಯುನಸ್ ದರೋಡೆ ಮಾಡಿದ್ದ.ನಂತರ ಆತನು ಸ್ಕೂಟಿ ಸಹ ದರೋಡೆ ಮಾಡಿ ಪರಾರಿಯಾಗಿದ್ದ.ಈ ಕುರಿತು ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಯುನಸ್ ಆತನ ಸ್ವಗ್ರಾಮ ಆಲಮೇಲ…

Read More

ವಿಜಯಪುರ ಜಿಲ್ಲೆಯಲ್ಲಿ ಜೋಡಿ ಕೊಲೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 13:ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ಹಳೆಯ ವೈಷಮ್ಯ ಹಿನ್ನೆಲೆ ಬರ್ಬರವಾಗಿ ಕೊಲೆ ನಡೆದಿದೆ.ಸಾಗರ ಬೆಳುಂಡಗಿ (25), ಇಸಾಕ್ ಖರೇಷಿ (24) ಕೊಲೆಗಿಡಾದ ವ್ಯಕ್ತಿಗಳು.ಕಳೆದ ಎರಡು ವರ್ಷಗಳ ಹಿಂದೆ ಕೊಲೆಗೀಡಾದ ವ್ಯಕ್ತಿಗಳು ಅದೇ ಊರಿನ ಈರನಗೌಡ ಎಂಬಾತನ ಮೇಲೆ ಹಲ್ಲೆ ನಡೆಸಿದ್ದರು. ಈರನಗೌಡ ಆಸ್ಪತ್ರೆಯಲ್ಲಿ ಕೆಲದಿನ ದಾಖಲಾಗಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದ. ಈ ದ್ವೇಷದ ಕಾರಣ ಈ ಇಬ್ಬರ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಘಟನಾ ಸ್ಥಳಕ್ಕೆ ಹಿರಿಯ ಪೋಲಿಸ್ ಅಧಿಕಾರಿಗಳು ಭೇಟಿ…

Read More

ಅಕ್ರಮ ಪಡಿತರ ಅಕ್ಕಿ ವಶ: ಪೊಲೀಸರ ದಾಳಿ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 14:ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ಯನ್ನು ಪೊಲೀಸರು ಲಾರಿ ಸಮೇತ ವಶಪಡಿಸಿಕೊಂಡಿದ್ದಾರೆ.ಖಚಿತ ಮಾಹಿತಿಯನ್ನು ಆಧರಿಸಿ ನಗರದ ವಿಜಯಾ ಟಾಯರ್ಸ್ ಮುಖ್ಯ ರಸ್ತೆಯಲ್ಲಿ ಪೊಲೀಸರು ಆಹಾರ ಇಲಾಖೆ ಜೊತೆಗೆ ಹಠಾತ್ ದಾಳಿ ನಡೆಸಿ 4,76,310 ಮೌಲ್ಯದ 210.43 ಕ್ವಿಂಟಲ್ ಅಕ್ಕಿ ಹಾಗೂ 5 ಲಕ್ಷ ಮೌಲ್ಯದ ಅಶೋಕ ಲೇಲ್ಯಾಂಡ್ ಲಾರಿ ವಶಪಡಿಸಿಕೊಳ್ಳಲಾಗಿದೆ. ಆರೋಪಿತರಾದ ಅಥಣಿ ತಾಲೂಕಿನ ಆಜೂರ ಗ್ರಾಮದ ಗಜಾನನ ಮಕಾಳೆ, ಅಥಣಿ ತಾಲೂಕಿನ ಗಣೇಶವಾಡಿ ನಿವಾಸಿ ಮಾರುತಿ ದೊಡಮನಿ, ಬೆಳಗಾವಿ ಆಝಾದ…

Read More

ದೇವರನಿಂಬರಗಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಮೇಲೆ ಗುಂಡಿನ ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 3:ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.ಭೀಮನಗೌಡ ಬಿರಾದಾರ ಎಂಬುವರ ಮೇಲೆ ನಾಲ್ವರು ಮುಸುಕಧಾರಿ ದುಷ್ಕರ್ಮಿಗಳು ಮೂರು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.ಬಿರಾದಾರನಿಗೆ ತಲೆ ಹಾಗೂ ಎದೆಗೆ ಗುಂಡು ತಗುಲಿದ್ದು, ಈತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಗಾಯಾಳು ಬಿರಾದಾರ ಈತನು ಭೀಮಾತೀರದ ಮಹಾದೇವ ಬೈರಗೊಂಡ ಪರಮಾಪ್ತ ಹಾಗೂ ಬಲಗೈ ಭಂಟನಾಗಿದ್ದ ವ್ಯಕ್ತಿ.ಬಿರಾದಾರ ದೇವರ ನಿಂಬರಗಿ ಗ್ರಾಮದ ಕಟಿಂಗ್ ಶಾಪ್ ನಲ್ಲಿ ಕಟಿಂಗ್…

Read More

ಅಕ್ರಮ ಸಿಲಿಂಡರ್ ಅಡ್ಡೆ ಮೇಲೆ ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 27:ನಗರದ ಅತಾವುಲ್ಲಾ ಚೌಕ್ ಹತ್ತಿರ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಗಳಿಂದ ಆಟೋಗಳಿಗೆ ರೀಪಿಲ್ ಮಾಡುತ್ತಿರುವ ಸ್ಥಳದ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಬುಧವಾರ ದಾಳಿ ಮಾಡಿ ಅಕ್ರಮ ಸಿಲಿಂಡರ್ ಗಳನ್ನು ವಶಪಡಿಸಿಕೊಂಡರು.1 ತುಂಬಿದ ಅಡುಗೆ ಅನಿಲ ಸಿಲಿಂಡರ್ ಹಾಗೂ 3 ಖಾಲಿ ಸಿಲಿಂಡರ್ ಗಳನ್ನು, ಮತ್ತು ರಿಪಿಲ್ ಮಾಡಲು ಬಳಸುತ್ತಿದ್ದ ಮೋಟಾರು ಮತ್ತು ತೂಕದ ಯಂತ್ರವನ್ನು ವಶಪಡಿಸಿಕೊಂಡು ಗೋಲ್ ಗುಂಬಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ಕುಂಚಗನೂರ ಗ್ರಾಮದ ಬಳಿ ರೈತ ಮೊಸಳೆಗೆ ಹೇಗೆ ಬಲಿಯಾದ ಗೊತ್ತಾ?

ಸಪ್ತಸಾಗರ ವಾರ್ತೆ,ವಿಜಯಪುರ, ಆ. 23:ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಚಗನೂರ ಗ್ರಾಮದ ಬಳಿ ರೈತನೊಬ್ಬ ಕೃಷ್ಣಾ ನದಿಯಲ್ಲಿ ಮೊಸಳೆಗೆ ಬಲಿಯಾದ ಅವಘಡ ಶನಿವಾರ ಸಂಭವಿಸಿದೆ.ರೈತ ಮೊಸಳೆಗೆ ಹೇಗೆ ಬಲಿಯಾದ ಎಂಬ ಡಿಟೇಲ್ಸ್ ಇಲ್ಲಿದೆ ನೋಡಿ.ಮುದ್ದೇಬಿಹಾಳ ತಾಲೂಕಿನ ಕುಂಚಗನೂರ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿಎತ್ತುಗಳ ಮೈ ತೊಳೆಯಲು ಹೋಗಿದ್ದಖಾಸಪ್ಪ‌ ಕಂಬಳಿ (38) ಎಂಬುವನನ್ನು ಮೊಸಳೆ ಎಳೆದುಕೊಂಡು ಹೋಗಿದೆ.ರೈತ ಖಾಸಪ್ಪ ಎತ್ತುಗಳ ಮೈ ತೊಳೆಯುವಲ್ಲಿ ಮೈ ಮರೆತಿದ್ದ. ಇದೇ ವೇಳೆ ಹಸಿವಿನಿಂದ ಚಡಪಡಿಸುತ್ತಿದ್ದ ಮೊಸಳೆ ಬೇಟೆಗಾಗಿ ಹೊಂಚು ಹಾಕಿ ಕಾಯುತ್ತಿತ್ತು. ತಡ…

Read More

8 ರೌಡಿಶೀಟರ್ ಗಡಿಪಾರು

ಸಪ್ತಸಾಗರ ವಾರ್ತೆ ವಿಜಯಪುರ, ಆ. 20:ಜಿಲ್ಲೆಯಲ್ಲಿ ಮುಂಬರುವ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಯ್ದುಕೊಂಡು ಬರುವ ಹಿನ್ನೆಲೆಯಲ್ಲಿ ಎಂಟು ಜನ ರೌಡಿಶೀಟರ್ ಗಳನ್ನು ವಿವಿಧ ಜಿಲ್ಲೆಗಳಿಗೆ ಗಡಿಪಾರು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.ಕೊಲೆ, ಕೊಲೆಗೆ ಯತ್ನ, ಆಯುಧ ಕಾಯ್ದೆ, ದೊಂಬಿ, ಹಲ್ಲೆ, ಕನ್ನಾ ಕಳವು ಮುಂತಾದ ಅಪರಾಧಿಕ ಪ್ರಕರಣಗಳಲ್ಲಿ ಈ ರೌಡಿ ಶೀಟರ್ ಗಳು ಭಾಗಿಯಾಗಿದ್ದರು.ಇನ್ನು 19 ಜನ ರೌಡಿ ಶೀಟರ್ ಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಲು…

Read More