ಬಸರಕೋಡ ಬಸವೇಶ್ವರ ದೇವಸ್ಥಾನ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು

₹52.70 ಲಕ್ಷ ಮೌಲ್ಯದ ಬೆಳ್ಳಿ ಮೂರ್ತಿ ಹಾಗೂ ವಸ್ತುಗಳ ವಶ – ಗುಜರಾತ್, ರಾಜಸ್ಥಾನದ ಮೂವರು ಆರೋಪಿಗಳ ಬಂಧನ ಸಪ್ತಸಾಗರ ವಾರ್ತೆ,ವಿಜಯಪುರ, ಆ.6: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಶ್ರೀ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದಿದ್ದ ಬಹುಚರ್ಚಿತ ಬೆಳ್ಳಿ ಮೂರ್ತಿ ಕಳ್ಳತನ ಪ್ರಕರಣವನ್ನು ವಿಜಯಪುರ ಜಿಲ್ಲಾ ಪೊಲೀಸರು ಭೇದಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿ ₹52.70 ಲಕ್ಷ ಮೌಲ್ಯದ ಕಳುವಾದ ಮೂರ್ತಿ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಸಂದೀಪ ಪಾಟೀಲ…

Read More

ಬರ ಪರಿಸ್ಥಿತಿ: ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಪೊಲೀಸರು 24 ಗಂಟೆಗಳ ಕಾಲ ಕೆಲಸ ಮಾಡಬೇಕು- ಸಿಎಂ ಡಿಕೆಶಿ

ಸಪ್ತಸಾಗರ ವಾರ್ತೆ,ಬೆಂಗಳೂರು, ಜುಲೈ 19:ಎಲ್ಲಾ ಯುವಕರ ಇಚ್ಛೆ ಹಾಗೂ ಮನವಿಯಂತೆ ಇಂದು ನಡೆಯಲಿರುವ ಫಿಫಾ ವಿಶ್ವಕಪ್ ಅಂತಿಮ ಪಂದ್ಯ ವೀಕ್ಷಣೆಗೆ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಬೆಳಗಿನ ಜಾವ 3.30 ರವರೆಗೆ ಕಾರ್ಯನಿರ್ವಹಿಸಲು ವಿಶೇಷ ಅನುಮತಿ ನೀಡಲಾಗಿದೆ. ಅಭಿಮಾನಿಗಳು ಫುಟ್ಬಾಲ್ ಅಭಿಮಾನಿಗಳು ಶಾಂತಿಯುತವಾಗಿ ವರ್ತಿಸಬೇಕು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.ವಿಧಾನಸೌಧದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.ಪೋಲಿಸರು ಎಲ್ಲೆಡೆ ಕ್ಯಾಮರಾಗಳನ್ನು ಅಳವಡಿಸಿದ್ದಾರೆ. ಯಾರೇ ಗೆಲ್ಲಲಿ, ಯುವಜನರು ತಾಳ್ಮೆಯನ್ನು ಕಳೆದುಕೊಳ್ಳದೆ ಪುಟ್ಬಾಲ್ ಆಟವನ್ನು ವೀಕ್ಷಿಸಬೇಕು ಎಂದು…

Read More

ರೌಡಿಶೀಟರ್ ಗಳ ಮನೆ ಪರಿಶೀಲನೆ ನಡೆಸಿದ ಪೊಲೀಸರು

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 10:ಪೊಲೀಸ ಇಲಾಖೆಯು ದಿನನಿತ್ಯದ ಕಾನೂನು ಸುವ್ಯವಸ್ಥೆ ಕಾಪಾಡಲು, ನಾಗರಿಕರ ಹಕ್ಕುಗಳನ್ನು ರಕ್ಷಿಸಲು ಮತ್ತು ಶಾಂತಿಯುತ ವಾತಾವರಣ ನಿರ್ಮಿಸುವ ಉದ್ದೇಶದಿಂದ ಠಾಣೆಗಳ ವ್ಯಾಪ್ತಿಯಲ್ಲಿ ಕಂಡು ಬರುವ ರೌಡಿ ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಿ, ಕ್ರಮಗಳನ್ನು ಕೈಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.ಸರ್ಕಾರವು ರೌಡಿ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ಕ್ರಮದ ಭಾಗವಾಗಿ ಠಾಣೆ/ ವೃತ್ತ ಮಟ್ಟದಲ್ಲಿ ‘ರೌಡಿ ನಿಗ್ರಹ ದಳ’ (Anti Rowdy Squad) ರಚಿಸಿ, ಕ್ರಮ ವಹಿಸಲು…

Read More

ಭೃಷ್ಟಾಚಾರ: ಕಾರ್ಮಿಕ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 16:ವಿಜಯಪುರ ಜಿಲ್ಲೆಯಲ್ಲಿನ ಕಾರ್ಮಿಕ ಅಧಿಕಾರಿ ಕಛೇರಿಯಲ್ಲಿ ವ್ಯಾಪಕವಾಗಿ ಅವ್ಯವಹಾರ ಮತ್ತು ಭೃಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಜಿಲ್ಲೆಯ ಕಾರ್ಮಿಕ ಇಲಾಖೆ ಕಚೇರಿ ಮೇಲೆ ದಾಳಿ ನಡೆಸಿ ಶೋಧನಾ ಕಾರ್ಯ ಕೈಗೊಂಡಿದ್ದಾರೆ.ಕಾರ್ಮಿಕ ಇಲಾಖೆಯಲ್ಲಿ ಅವ್ಯವಹಾರ ಹಾಗೂ ವ್ಯಾಪಕ ಭ್ರಷ್ಟಾಚಾರ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಕಾರಣ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕಾರ್ಮಿಕ ಇಲಾಖೆಯನ್ನು ಶೋಧನೆ ಮಾಡಲು ಶೋಧನಾ ವಾರಂಟ್ ಹೊರಡಿಸಿದ್ದು, ಹೀಗಾಗಿ ವಿಜಯಪುರ ಜಿಲ್ಲೆಯ…

Read More

ಹೊಸ ಬೀಟ್ ವ್ಯವಸ್ಥೆ ಜಾರಿ : ಮನೆ ಸುರಕ್ಷತೆಗೆ `ಆರಕ್ಷಕರ ಹೊಸ ಸೂತ್ರ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 11 :ಬೇಸಿಗೆ ರಜೆ, ಮದುವೆ ಮೊದಲಾದ ಶುಭ ಸಮಾರಂಭ, ಪ್ರವಾಸ ಹೀಗೆ ಅನೇಕ ಸಂದರ್ಭಗಳಲ್ಲಿ ಮನೆಗಳಿಗೆ ಕೀಲಿ ಹಾಕಿ ಹೋಗಬೇಕಾದ ಪ್ರಸಂಗ ಬರುತ್ತದೆ. ಇದನ್ನು ಬಳಸಿ ಕಳ್ಳರು ತಮ್ಮ ಕೈಚಳಕ ಪ್ರದರ್ಶಿಸುವುದುಂಟು. ಆದರೆ ಈಗ ಹೆದರಬೇಕಿಲ್ಲ. ಈ ಸಂದರ್ಭದಲ್ಲಿ ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಆರಕ್ಷಕ ಇಲಾಖೆ ಹೊಸ ಸೂತ್ರ ಅನುಸರಿಸಿದ್ದು, ಲಾಕ್ಡ್ ಹೌಸ್ ಬೀಟ್ ಸಿಸ್ಟಂ ಎನ್ನುವ ಹೊಸ ಯೋಜನೆಯನ್ನು ರೂಪಿಸಿದೆ.ಈ ನೂತನ ಯೋಜನೆ ಮೂಲಕ ವಿಶೇಷ ಸಹಾಯವಾಣಿ ಸಂಖ್ಯೆಯಾದ 8277970747 ಸಂಖ್ಯೆಗೆ…

Read More

ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು

ಸಪ್ತಸಾಗರ ವಾರ್ತೆ, ವಿಜಯಪುರ, ಏ. 14:ದುಷ್ಕರ್ಮಿಗಳು ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಗುಂಡು ಹಾರಿಸಿ ಭೀಕರವಾಗಿ ಹತ್ಯೆ ಮಾಡಿದ ದುರ್ಘಟನೆ ನಗರ ಹೊರ ವಲಯದ ಅಲಿಯಾಬಾದ ಬಳಿ ನಡೆದಿದೆ.ಗ್ರಾ.ಪಂ ಸದಸ್ಯ ರಾಜು ಕುರಿ ಎಂಬುವರು ಗುಂಡೇಟಿಗೆ ಬಲಿಯಾಗಿದ್ದಾರೆ.ದುಷ್ಕರ್ಮಿಗಳು ರಾಜುನ ಮೇಲೆ 6 ಸುತ್ತು ಗುಂಡು ಹಾರಿಸಿ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಹಳೆಯ ವೈಷಮ್ಯ ಹತ್ಯೆಗೆ ಕಾರಣ ಇರಬಹುದು ಎಂದು ಶಂಕಿಸಲಾಗಿದೆಪಾಂಗರುನ ದೊಡ್ಡಿ ನಿವಾಸಿಯಾಗಿದ್ದ ರಾಜು ಕುರಿಯು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು…

Read More

ಜಿಲ್ಲಾ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ ಪೊಲೀಸರು ನೊಂದವರ ಭರವಸೆಯ ಆಶಾಕಿರಣ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆಗೆ ಹಗಲಿರುಳು ಶ್ರಮಿಸುವ ಪೊಲೀಸರ ಕಾರ್ಯ ಅನನ್ಯ: ಜಿಲ್ಲಾಧಿಕಾರಿ ಡಾ. ಆನಂದ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 2: ವರ್ಷದುದ್ದಕ್ಕೂ ಸದಾ ಒತ್ತಡದ ಮಧ್ಯೆಯೇ ಕಾರ್ಯನಿರ್ವಹಿಸುವ ಮೂಲಕ ಸಾರ್ವಜನಿಕರ ನೆಮ್ಮದಿಯ ಜೀವನಕ್ಕಾಗಿ, ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಪೊಲೀಸರು ನಿಭಾಯಿಸುವ ಕರ್ತವ್ಯಕ್ಕೆ ಬೆಲೆ ಕಟ್ಟಲಾಗದು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಪೊಲೀಸರ ಕಾರ್ಯವನ್ನು ಬಣ್ಣಿಸಿದರು.ಜಿಲ್ಲಾ ಪೊಲೀಸ್ ಇಲಾಖೆಯಿಂದ ಇಲ್ಲಿನ ಪೊಲಿಸ್ ಕವಾಯತು ಮೈದಾನದಲ್ಲಿ ಗುರುವಾರ ಬೆಳಿಗ್ಗೆ ಹಮ್ಮಿಕೊಂಡಿದ್ದ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಸದಾ ಸಮಾಜದ ಒಳಿತಿಗಾಗಿ ಯಾವ ಪ್ರತಿಫಲಾಪೇಕ್ಷೆಯಿಲ್ಲದೇ ಹಗಲಿರುಳು ಶ್ರಮಿಸುವ ಪೊಲೀಸರು…

Read More

ದೆಹಲಿ ಪೊಲೀಸ್ ನೋಟೀಸ್ ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಸಿಎಂ ಡಿ.ಕೆ. ಶಿವಕುಮಾರ

ಸಪ್ತಸಾಗರ ವಾರ್ತೆ ದೆಹಲಿ, ಡಿ.16:“ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ ಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.ದೆಹಲಿ ಪೊಲೀಸರ ನೋಟೀಸ್ ಗೆ ಉತ್ತರ ನೀಡುವ ಬಗ್ಗೆ ಕೇಳಿದಾಗ, “ಸೋಮವಾರ ದೆಹಲಿ ಪೊಲೀಸರಿಗೆ ಉತ್ತರ ನೀಡಲು ನಿರ್ಧರಿಸಿದ್ದೆ. ಆದರೆ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಶೇಷ ವಿಮಾನದಲ್ಲಿ ದಾವಣಗೆರೆಗೆ ತೆರಳುತ್ತಿದ್ದು, ಅಧಿವೇಶನ ಮುಗಿದ ಬಳಿಕ ಉತ್ತರ…

Read More

ಪೊಲೀಸರ ಗುಂಡೇಟಿಗೆ ರೌಡಿಶೀಟರ್ ಬಲಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 18:ಪರಾರಿಯಾಗಲು ಯತ್ನಿಸಿದ ರೌಡಿಶೀಟರ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದು, ರೌಡಿಶೀಟರ್ ತೀವ್ರವಾಗಿ ಗಾಯಗೊಂಡು ಮೃತಪಟ್ಟ ಘಟನೆಜಿಲ್ಲೆಯ ಸಿಂದಗಿ ತಾಲೂಕಿನ ರಾಂಪೂರ ಬಳಿ ಶನಿವಾರ ಬೆಳಗ್ಗೆ ನಡೆದಿದೆ.ಯುನಸ್ ಇಕ್ಲಾಸ್ ಪಟೇಲ್ (35) ಮೃತಪಟ್ಟ ರೌಡಿಶೀಟರ್.ನಿನ್ನೆ ಓರ್ವನಿಗೆ ಚಾಕೂ ತೋರಿಸಿ 25 ಸಾವಿರ ಹಣ ಯುನಸ್ ದರೋಡೆ ಮಾಡಿದ್ದ.ನಂತರ ಆತನು ಸ್ಕೂಟಿ ಸಹ ದರೋಡೆ ಮಾಡಿ ಪರಾರಿಯಾಗಿದ್ದ.ಈ ಕುರಿತು ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಯುನಸ್ ಆತನ ಸ್ವಗ್ರಾಮ ಆಲಮೇಲ…

Read More

ವಿಜಯಪುರ ಜಿಲ್ಲೆಯಲ್ಲಿ ಜೋಡಿ ಕೊಲೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 13:ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ಹಳೆಯ ವೈಷಮ್ಯ ಹಿನ್ನೆಲೆ ಬರ್ಬರವಾಗಿ ಕೊಲೆ ನಡೆದಿದೆ.ಸಾಗರ ಬೆಳುಂಡಗಿ (25), ಇಸಾಕ್ ಖರೇಷಿ (24) ಕೊಲೆಗಿಡಾದ ವ್ಯಕ್ತಿಗಳು.ಕಳೆದ ಎರಡು ವರ್ಷಗಳ ಹಿಂದೆ ಕೊಲೆಗೀಡಾದ ವ್ಯಕ್ತಿಗಳು ಅದೇ ಊರಿನ ಈರನಗೌಡ ಎಂಬಾತನ ಮೇಲೆ ಹಲ್ಲೆ ನಡೆಸಿದ್ದರು. ಈರನಗೌಡ ಆಸ್ಪತ್ರೆಯಲ್ಲಿ ಕೆಲದಿನ ದಾಖಲಾಗಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದ. ಈ ದ್ವೇಷದ ಕಾರಣ ಈ ಇಬ್ಬರ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಘಟನಾ ಸ್ಥಳಕ್ಕೆ ಹಿರಿಯ ಪೋಲಿಸ್ ಅಧಿಕಾರಿಗಳು ಭೇಟಿ…

Read More