ಅಕ್ರಮ ಪಡಿತರ ಅಕ್ಕಿ ವಶ: ಪೊಲೀಸರ ದಾಳಿ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 14:ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ಯನ್ನು ಪೊಲೀಸರು ಲಾರಿ ಸಮೇತ ವಶಪಡಿಸಿಕೊಂಡಿದ್ದಾರೆ.ಖಚಿತ ಮಾಹಿತಿಯನ್ನು ಆಧರಿಸಿ ನಗರದ ವಿಜಯಾ ಟಾಯರ್ಸ್ ಮುಖ್ಯ ರಸ್ತೆಯಲ್ಲಿ ಪೊಲೀಸರು ಆಹಾರ ಇಲಾಖೆ ಜೊತೆಗೆ ಹಠಾತ್ ದಾಳಿ ನಡೆಸಿ 4,76,310 ಮೌಲ್ಯದ 210.43 ಕ್ವಿಂಟಲ್ ಅಕ್ಕಿ ಹಾಗೂ 5 ಲಕ್ಷ ಮೌಲ್ಯದ ಅಶೋಕ ಲೇಲ್ಯಾಂಡ್ ಲಾರಿ ವಶಪಡಿಸಿಕೊಳ್ಳಲಾಗಿದೆ. ಆರೋಪಿತರಾದ ಅಥಣಿ ತಾಲೂಕಿನ ಆಜೂರ ಗ್ರಾಮದ ಗಜಾನನ ಮಕಾಳೆ, ಅಥಣಿ ತಾಲೂಕಿನ ಗಣೇಶವಾಡಿ ನಿವಾಸಿ ಮಾರುತಿ ದೊಡಮನಿ, ಬೆಳಗಾವಿ ಆಝಾದ…

Read More

ದೇವರನಿಂಬರಗಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಮೇಲೆ ಗುಂಡಿನ ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 3:ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.ಭೀಮನಗೌಡ ಬಿರಾದಾರ ಎಂಬುವರ ಮೇಲೆ ನಾಲ್ವರು ಮುಸುಕಧಾರಿ ದುಷ್ಕರ್ಮಿಗಳು ಮೂರು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.ಬಿರಾದಾರನಿಗೆ ತಲೆ ಹಾಗೂ ಎದೆಗೆ ಗುಂಡು ತಗುಲಿದ್ದು, ಈತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಗಾಯಾಳು ಬಿರಾದಾರ ಈತನು ಭೀಮಾತೀರದ ಮಹಾದೇವ ಬೈರಗೊಂಡ ಪರಮಾಪ್ತ ಹಾಗೂ ಬಲಗೈ ಭಂಟನಾಗಿದ್ದ ವ್ಯಕ್ತಿ.ಬಿರಾದಾರ ದೇವರ ನಿಂಬರಗಿ ಗ್ರಾಮದ ಕಟಿಂಗ್ ಶಾಪ್ ನಲ್ಲಿ ಕಟಿಂಗ್…

Read More

ಅಕ್ರಮ ಸಿಲಿಂಡರ್ ಅಡ್ಡೆ ಮೇಲೆ ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 27:ನಗರದ ಅತಾವುಲ್ಲಾ ಚೌಕ್ ಹತ್ತಿರ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಗಳಿಂದ ಆಟೋಗಳಿಗೆ ರೀಪಿಲ್ ಮಾಡುತ್ತಿರುವ ಸ್ಥಳದ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಬುಧವಾರ ದಾಳಿ ಮಾಡಿ ಅಕ್ರಮ ಸಿಲಿಂಡರ್ ಗಳನ್ನು ವಶಪಡಿಸಿಕೊಂಡರು.1 ತುಂಬಿದ ಅಡುಗೆ ಅನಿಲ ಸಿಲಿಂಡರ್ ಹಾಗೂ 3 ಖಾಲಿ ಸಿಲಿಂಡರ್ ಗಳನ್ನು, ಮತ್ತು ರಿಪಿಲ್ ಮಾಡಲು ಬಳಸುತ್ತಿದ್ದ ಮೋಟಾರು ಮತ್ತು ತೂಕದ ಯಂತ್ರವನ್ನು ವಶಪಡಿಸಿಕೊಂಡು ಗೋಲ್ ಗುಂಬಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ಕುಂಚಗನೂರ ಗ್ರಾಮದ ಬಳಿ ರೈತ ಮೊಸಳೆಗೆ ಹೇಗೆ ಬಲಿಯಾದ ಗೊತ್ತಾ?

ಸಪ್ತಸಾಗರ ವಾರ್ತೆ,ವಿಜಯಪುರ, ಆ. 23:ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಚಗನೂರ ಗ್ರಾಮದ ಬಳಿ ರೈತನೊಬ್ಬ ಕೃಷ್ಣಾ ನದಿಯಲ್ಲಿ ಮೊಸಳೆಗೆ ಬಲಿಯಾದ ಅವಘಡ ಶನಿವಾರ ಸಂಭವಿಸಿದೆ.ರೈತ ಮೊಸಳೆಗೆ ಹೇಗೆ ಬಲಿಯಾದ ಎಂಬ ಡಿಟೇಲ್ಸ್ ಇಲ್ಲಿದೆ ನೋಡಿ.ಮುದ್ದೇಬಿಹಾಳ ತಾಲೂಕಿನ ಕುಂಚಗನೂರ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿಎತ್ತುಗಳ ಮೈ ತೊಳೆಯಲು ಹೋಗಿದ್ದಖಾಸಪ್ಪ‌ ಕಂಬಳಿ (38) ಎಂಬುವನನ್ನು ಮೊಸಳೆ ಎಳೆದುಕೊಂಡು ಹೋಗಿದೆ.ರೈತ ಖಾಸಪ್ಪ ಎತ್ತುಗಳ ಮೈ ತೊಳೆಯುವಲ್ಲಿ ಮೈ ಮರೆತಿದ್ದ. ಇದೇ ವೇಳೆ ಹಸಿವಿನಿಂದ ಚಡಪಡಿಸುತ್ತಿದ್ದ ಮೊಸಳೆ ಬೇಟೆಗಾಗಿ ಹೊಂಚು ಹಾಕಿ ಕಾಯುತ್ತಿತ್ತು. ತಡ…

Read More

8 ರೌಡಿಶೀಟರ್ ಗಡಿಪಾರು

ಸಪ್ತಸಾಗರ ವಾರ್ತೆ ವಿಜಯಪುರ, ಆ. 20:ಜಿಲ್ಲೆಯಲ್ಲಿ ಮುಂಬರುವ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಯ್ದುಕೊಂಡು ಬರುವ ಹಿನ್ನೆಲೆಯಲ್ಲಿ ಎಂಟು ಜನ ರೌಡಿಶೀಟರ್ ಗಳನ್ನು ವಿವಿಧ ಜಿಲ್ಲೆಗಳಿಗೆ ಗಡಿಪಾರು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.ಕೊಲೆ, ಕೊಲೆಗೆ ಯತ್ನ, ಆಯುಧ ಕಾಯ್ದೆ, ದೊಂಬಿ, ಹಲ್ಲೆ, ಕನ್ನಾ ಕಳವು ಮುಂತಾದ ಅಪರಾಧಿಕ ಪ್ರಕರಣಗಳಲ್ಲಿ ಈ ರೌಡಿ ಶೀಟರ್ ಗಳು ಭಾಗಿಯಾಗಿದ್ದರು.ಇನ್ನು 19 ಜನ ರೌಡಿ ಶೀಟರ್ ಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಲು…

Read More

ಯತ್ನಾಳ್ ಕಾರ್ ಅಡ್ಡಗಟ್ಟಿ ಕಪ್ಪು ಬಾವುಟ ಪ್ರದರ್ಶನ: ಯುವಕರನ್ನು ವಶಕ್ಕೆ ಪಡೆದ ಪೊಲೀಸರು

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 17: ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೀಡಿದ ಪ್ರಚೋದನೆಕಾರಿ ಹೇಳಿಕೆ ವಿರೋಧಿಸಿ ಒಂದು ಕೋಮಿನ ಯುವಕರು ಯತ್ನಾಳ್ ಕಾರಿಗೆ ಅಡ್ಡಗಟ್ಟಿ ಕಪ್ಪು ಬಟ್ಟೆ ಪ್ರದರ್ಶನ ನಡೆಸಿದ ಘಟನೆ ಭಾನುವಾರ ಆಲಮೇಲದಲ್ಲಿ ನಡೆದಿದೆ.ಇತ್ತೀಚೆಗೆ ಕೊಪ್ಪಳದಲ್ಲಿ ಯತ್ನಾಳ್ ಅವರು ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ಕೊಡುತ್ತೇವೆ ಎಂದು ಘೋಷಿಸುವ ಮೂಲಕ ವಿವಾದ ಹುಟ್ಟು ಹಾಕಿದ್ದರು.ಈ ಹೇಳಿಕೆ ವಿರೋಧಿಸಿ ಮುಸ್ಲಿಂ ಯುವಕರು ಯತ್ನಾಳ್ ಕಾರಿಗೆ ಅಡಗಟ್ಟಿ…

Read More

ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9:ವಿಜಯಪುರ ಮಹಾನಗರ ಪಾಲಿಕೆ 22ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರ ಚುನಾವಣೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಆ.11ರಂದು ವಿಜಯಪುರ ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಿಗೂ ಜಿಲ್ಲಾ ದಂಡಾಧಿಕಾರಿ ಡಾ. ಆನಂದ ಕೆ. ಅವರು ಆದೇಶ ಹೊರಡಿಸಿದ್ದಾರೆ.ಆ.11ರ ಬೆಳಿಗ್ಗೆ 6 ಗಂಟೆಯಿಂದ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರುತ್ತದೆ.ವಿಜಯಪುರ ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯ 200 ಮೀಟರ್ ಪ್ರದೇಶದಲ್ಲಿ ಶಸ್ತ್ರ,…

Read More

ತಾಳಿಕೋಟೆಯಲ್ಲಿ ಕಳ್ಳರ ಚಡ್ಡಿ ಗ್ಯಾಂಗ್ ಸಿಸಿ ಕ್ಯಾಮೆರಾದಲ್ಲಿ ಸೆರೆ: ಜನರಲ್ಲಿ ಆತಂಕ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 25:ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಚಡ್ಡಿ ಗ್ಯಾಂಗ್ ಕಾಣಿಸಿಕೊಂಡು ಜನರಲ್ಲಿ ಭಯದ ವಾತಾವರಣ ಮೂಡಿಸಿದೆ.ಈ ಹಿಂದೆ ವಿಜಯಪುರ ಜಿಲ್ಲೆಯಲ್ಲಿ ಚಡ್ಡಿ ಗ್ಯಾಂಗ್ ಜನರ ನಿದ್ರೆಗೆಡಿಸಿ ಭಯದ ವಾತಾವರಣ ಮೂಡಿಸಿತ್ತು. ಕೆಲವು ತಿಂಗಳುಗಳಿಂದ ಚಡ್ಡಿ ಗ್ಯಾಂಗ್ ಉಪಟಳ ಇಲ್ಲವಾಗಿ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಆದರೆ ಈಗ ಮತ್ತೆ ಜಿಲ್ಲೆಯ ತಾಳಿಕೋಟೆ ಪಟ್ಟಣದ ಗಣೇಶನಗರದಲ್ಲಿಚಡ್ಡಿ ಗ್ಯಾಂಗ್ ಕದೀಮರು ಬಾಲ ಬಿಚ್ಚಿದ್ದಾರೆ. ಈ ಕದೀಮರ ಚಲನವಲನ ಸಿಸಿ ಕೆಮೆರಾದಲ್ಲಿ ಸೆರೆಯಾಗಿದೆ.ಆರು ಜನರು ಇರುವ ಕಳ್ಳರ ಚಡ್ಡಿ ಗ್ಯಾಂಗ್…

Read More

ಬಾಲ್ಯ ವಿವಾಹ ತಡೆಗೆ ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸಿ- ಜಿಲ್ಲಾಧಿಕಾರಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಜು.17:ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಟ ಪದ್ಧತಿಯ ನಿರ್ಮೂಲನೆಗೆ ಸಾಕಷ್ಟು ಪ್ರಚಾರಗೊಳಿಸಿ ಜಾಗೃತಿ ಹಾಗೂ ಕಾನೂನಿನ ಅರಿವು ಮೂಡಿಸಲು ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚಿಸಿದರು.ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಲ್ಯ ವಿವಾಹ ನಿಷೇಧ, ಕೌಟುಂಬಿ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005, ನಿಯಮ 2006 ಹಾಗೂ ಪೋಕ್ಸೋ ಕಾಯ್ದೆಯ ಪರಿಶೀಲನಾ ಸಭೆಯ ಅಧ್ಯಕತೆ ವಹಿಸಿ ಮಾತನಾಡಿದ ಅವರು, ಬಾಲ್ಯ ವಿವಾಹ ನಿಷೇಧ ಕಾಯ್ದೆ,…

Read More

ಸುಶೀಲ್ ಕಾಳೆ ಕೊಲೆ ಪ್ರಕರಣ: ಮತ್ತೆ ನಾಲ್ವರು ಆರೋಪಿತರ ಬಂಧನ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 16:ಸುಶೀಲ್ ಕಾಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿತರನ್ನು ಬಂಧಿಸಲಾಗಿದೆ.ವಿಜಯಪುರದ ಭರತ್ ನಗರದ ಗೌತಮ ಹನಮಂತ ಆಲಮೇಲ್‌ಕರ (25),ದೇಗಿನಾಳ ಗ್ರಾಮದ ನಾರಾಯಣ ಗಣಪತಿ ಜಾಧವ (20), ಕೊಲ್ಹಾರ ತಾಲೂಕಿನ ಹನುಮಾಪುರ ಗ್ರಾಮದ ಬಸವರಾಜ ಮುನ್ನಾಳ( 20) ಹಾಗೂ ಬಾಗಲಕೋಟೆ ನವನಗರದ ಪ್ರಜ್ವಲ ಶರಣಪ್ಪ ಹಳಿಮನಿ (ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ) ಬಂಧಿತ ಆರೋಪಿತರು.ನಿನ್ನೆಯಷ್ಟೇ ಹಿಟ್ನಳ್ಳಿಯ ಹಾಲಿವಸ್ತಿ ಸಾಯಿ ಪಾರ್ಕ್ ನಿವಾಸಿ ವಿಠೋಬಾ ಕಲ್ಲವ್ವಗೋಳ (29), ಕೊಲ್ಹಾರ ತಾಲೂಕಿನ ನಾಗರದಿನ್ನಿ ಗ್ರಾಮದ…

Read More