ಕೊಲೆ ಆರೋಪಿಗಳಿಬ್ಬರ ಮೇಲೆ ಪೊಲೀಸರಿಂದ ಗುಂಡಿನ ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15:ನಿನ್ನೆಯಷ್ಟೇ ನಗರದಲ್ಲಿ ನಡೆದ ಸುಶೀಲ್ ಕಾಳೆ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಹಿಡಿಯಲು ಹೋದಾಗ ಪೊಲೀಸರ ಮೇಲೆ ಕಲ್ಲು, ಕಂಟ್ರಿ ಪಿಸ್ತೂಲ್ ನಿಂದ ಆರೋಪಿಗಳು ದಾಳಿ ನಡೆಸಿದಾಗ ಪೊಲೀಸರು ಪ್ರತಿಯಾಗಿ ಆರೋಪಿಗಳಿಬ್ಬರ ಮೇಲೆ ಗುಂಡು ಹಾರಿಸಿದ್ದು, ಅವರ ಕಾಲುಗಳಿಗೆ ಗಾಯಗಳಾದ ಘಟನೆ ಮಂಗಳವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಇಟ್ಟಂಗಿಹಾಳ ರಸ್ತೆಯಲ್ಲಿ ನಡೆದಿದೆ.ಆಕಾಶ ಕಲ್ಲವ್ವಗೋಳ (24), ಸುಭಾಸ ಬಗಲಿ (20) ಗಾಯಗೊಂಡ ಆರೋಪಿಗಳು.ಇಬ್ಬರು ಆರೋಪಿಗಳಿಗೆ ಕಾಲಿಗೆ ಗುಂಡು ತಗಲಿದ್ದು, ಆರೋಪಿಗಳನ್ನು ಜಿಲ್ಲಾ…

Read More

ವಿಜಯಪುರದಲ್ಲಿ ಹಾಡ ಹಗಲೆ ಯುವಕನ ಬರ್ಬರ ಹತ್ಯೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 14:ಯುವಕನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ನಗರದ ಎಸ್. ಎಸ್. ರಸ್ತೆಯ ಎಸ್. ಎಸ್. ಕಾಂಪ್ಲೆಕ್ಸ್ ನಲ್ಲಿ ಇರುವ ಅಮರ ವರ್ಷಿಣಿ ಸರಕಾರಿ ಬ್ಯಾಂಕಿನಲ್ಲಿ ನಡೆದಿದೆ.ಸುಶೀಲ್ ಕಾಳೆ (43) ಕೊಲೆಗೀಡಾದ ಯುವಕ.ಬ್ಯಾಂಕಿನಲ್ಲಿದ್ದ ಈ ಯುವಕನ ಮೇಲೆ ಮಾರಾಕಸ್ತ್ರಗಳಿಂದ ನಾಲ್ವರು ಹಲ್ಲೆ ಮಾಡಿದ್ದು ತೀವ್ರವಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ. ತಕ್ಷಣ ಆತನನ್ನು ಚಿಕಿತ್ಸೆಗಾಗಿ ನಗರದ ಬಿ ಎಲ್ ಡಿ ಇ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಂತಾಜನಕ ಸ್ಥಿತಿಯಲ್ಲಿದ್ದ…

Read More

ನಾಳೆ ಇಂಡಿಗೆ ಸಿಎಂ, ಡಿಸಿಎಂ ಭೇಟಿ: ಪೂರ್ವಭಾವಿ ಸಿದ್ಧತೆ ಪರಿಶೀಲಿಸಿದ ಡಿಸಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ,ಜು.13:ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಯ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಜು. 14 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಆಗಮಿಸಲಿರುವ ಹಿನ್ನಲೆಯಲ್ಲಿ ಜುಲೈ 13ರ ಭಾನುವಾರ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು, ಹಿರಿಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ,‌ಕೈಗೊಂಡಿರುವ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು.ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಆಗಮನ ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಈ ಕಾರ್ಯಕ್ರಮದ ಸಂದರ್ಭದಲ್ಲಿ…

Read More

ಮನಗೂಳಿ ಕ್ಯಾನರಾ ಬ್ಯಾಂಕ್ ಕಳ್ಳತನ ಪ್ರಕರಣ: ಮತ್ತೆ 12 ಜನರ ಬಂಧನ, 39 ಕೆಜಿ ಬಂಗಾರ ಹಾಗೂ 1.16 ಕೋಟಿ ನಗದು ಜಫ್ತು

ಸಪ್ತಸಾಗರ ವಾರ್ತೆ ವಿಜಯಪುರ, ಜು. 11: ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 12 ಜನರನ್ನು ಬಂಧಿಸಲಾಗಿದ್ದು, ಇದುವರೆಗೆ ಬಂದಿದ್ದರ ಸಂಖ್ಯೆ 15ಕ್ಕೇರಿದೆ ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಚೇತನಕುಮಾರ ರಾಠೋಡ ತಿಳಿಸಿದ್ದಾರೆ.ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ಪೊಲೀಸರು 3 ಆರೋಪಿಗಳನ್ನು ಬಂಧಿಸಿದ್ದಾರೆ. ಅವರು ನೀಡಿದ ಮಾಹಿತಿಯನ್ನು ಆಧರಿಸಿಪ್ರಕರಣದ ಮತ್ತೆ 12 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.ಮೇ 25ರಂದು ಮನಗೂಳಿ ಕೆನರಾ…

Read More