ದೇವಾಲಯದ ಗಂಟೆಗಳಿಗಿಂತ ಶಾಲೆಯ ಗಂಟೆಗಳ ಸಂಖ್ಯೆ ಹೆಚ್ಚಾದಾಗಲೇ ಬಡ ಮಕ್ಕಳಿಗೆ ಅವಕಾಶಗಳು ಸಿಗುತ್ತವೆ – ಶ್ರೀನಾಥ ಪೂಜಾರಿ
ಸಪ್ತಸಾಗರ ವಾರ್ತೆ, ವಿಜಯಪುರ, ಜ. 28:ವಿಜಯಪುರ ನಗರದಲ್ಲಿರುವ ಖಾಸಗಿ ಸಂಸ್ಥೆಯಾದ ಶ್ರೀ ಸಾಯಿರಾಮ್ ಗ್ರಂಥಾಲಯದಲ್ಲಿ ಓದಿ ವಿವಿಧ ಸರ್ಕಾರಿ ಉದ್ಯೋಗಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.ಶ್ರೀ ಸಾಯಿರಾಮ್ ಗ್ರಂಥಾಲಯದಲ್ಲಿ ಅಭ್ಯಾಸ ಮಾಡಿಕೊಂಡು ರಾಜ್ಯ ಹಾಗೂ ಕೇಂದ್ರ ಸರ್ಕಾರದ CISF, BSF ಸೇರಿದಂತೆ ವಿವಿಧ ಇಲಾಖೆಗಳ ಸರ್ಕಾರಿ ಉದ್ಯೋಗಗಳನ್ನು ಪಡೆದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವ ಕಾರ್ಯವನ್ನು ಗ್ರಂಥಾಲಯದ ಮುಖ್ಯಸ್ಥರಾದ ಹುಚ್ಚಪ್ಪ ಅವರು ಮಾಡುತ್ತಿರುವುದು ಅತ್ಯಂತ ಶ್ಲಾಘನೀಯವಾಗಿದೆ.ಪ್ರತಿವರ್ಷದಂತೆ ಈ ವರ್ಷವೂ ಶ್ರೀ ಸಾಯಿರಾಮ್ ಗ್ರಂಥಾಲಯದಲ್ಲಿ ಓದಿದ…


