ನರೇಗಾ ಕಾಮಗಾರಿ ಸ್ಥಳಕ್ಕೆ ಪ್ರಕಾಶ ವಡ್ಡರ ಭೇಟಿ: ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ
ಸಪ್ತಸಾಗರ ವಾರ್ತೆ,ವಿಜಯಪುರ, ಮೇ 18:ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅವರು ಸೋಮವಾರ ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಹಾಗೂ ಕಾರಜೊಳ ಗ್ರಾಪಂ ನರೇಗಾ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಮತ್ತು ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.ಹೊನಗನಹಳ್ಳಿ ಗ್ರಾಮದ ತುಂಗಾಬಾಯಿ ಬಿದರಿ ಇವರ ಹೊಲದಿಂದ ಪಾರ್ವತಿಬಾಯಿ ಪಾಟೀಲ್ ಇವರ ಹೊಲದವರೆಗೆ ಡೋಣಿ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.ನಂತರ ನರೇಗಾ ಕಾರ್ಮಿಕರೊಂದಿಗೆ ಸಮಾಲೋಚಿಸಿದ ಅವರು, ಎಲ್ಲ ಕೂಲಿಕಾರರು ಪ್ರತಿ ದಿನ ಬೆಳಿಗ್ಗೆ ಬೇಗನೆ ಆಗಮಿಸಿ…


