ನಾಳೆ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿದತ್ತಕ ಯೋಜನೆ ಹಾಗೂ ಗೌರವ ಸಮರ್ಪಣೆ
ಸಪ್ತಸಾಗರ ವಾರ್ತೆ,ವಿಜಯಪುರ, ಆ.8: ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಗೌರವಿಸುವ ಉದ್ದೇಶದಿಂದ ಸಿರಿಗನ್ನಡ ವೇದಿಕೆ ವತಿಯಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿದತ್ತಕ ಯೋಜನೆ ಹಾಗೂ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಆ.9ರಂದು ಬೆಳಗ್ಗೆ 10.30ಕ್ಕೆ ನಗರದ ಶ್ರೀ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ.ಡಾ. ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ಸಂಯೋಜನಾಧಿಕಾರಿ ಡಾ. ವಿ.ಡಿ. ಐಹೊಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ಸಾಹಿತಿ ಹಾಗೂ ಚಿಂತಕ ಡಾ. ಸಂಗಮೇಶ ಮೆತ್ರಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಾಧಕರಿಗೆ ಗೌರವ…


