ಅ.6ರಂದು ಫೋನ್ ಇನ್ ಕಾರ್ಯಕ್ರಮ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 30: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ಪ್ರಯಾಣಿಕರ ಅಹವಾಲು- ಕುಂದುಕೊರತೆಗಳನ್ನು ಆಲಿಸಲು ಅಕ್ಟೋಬರ್ 6ರ ಮಧ್ಯಾಹ್ನ 3-30ರಿಂದ 4-30ರವರೆಗೆ ಫೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಮೊ : 6366423887ಗೆ ಸಾರ್ವಜನಿಕರು ಕರೆ ಮಾಡಿ ತಮ್ಮ ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಫೋನ್-ಇನ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರದಲ್ಲಿ ಪ್ರಪ್ರಥಮ ಬಾರಿಗೆ ರಾವಣ ದಹನ ಕಾರ್ಯಕ್ರಮ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 29: ಇಸ್ಕಾನ್ ವಿಜಯಪುರ ತಂಡದಿಂದ ಅಕ್ಟೊಬರ್ 1 ರಂದು ನಗರದ ಕಿತ್ತೂರು ರಾಣಿ ಚೆನ್ನಮ್ಮ ಸಭಾಭವನದಲ್ಲಿ ಸಾಯಂಕಾಲ 5:30ಕ್ಕೆ ದಸರಾ ಉತ್ಸವ ಹಮ್ಮಿಕೊಳ್ಳಲಾಗಿದೆ.ಈ ಕಾರ್ಯಕ್ರಮವನ್ನು ಇಸ್ಕಾನ್ ಹುಬ್ಬಳ್ಳಿ ಧಾರವಾಡ ಇವರ ಮಾರ್ಗದರ್ಶನದಲ್ಲಿ ಆಯೋಜಿಸಲಾಗಿದೆ.ಶ್ರೀ ರಾಮ ದೇವರ ಅಭಿಷೇಕ, ಭಕ್ತರಿಂದ ಹರಿನಾಮ ಸಂಕೀರ್ತನೆ, ಪಲ್ಲಕಿ ಉತ್ಸವ, ಭರತನಾಟ್ಯ, ಮಕ್ಕಳಿಂದ ವಿವಿಧ ವೇಷಭೂಷಣ ಸ್ಪರ್ಧೆ ನಂತರದಲ್ಲಿ ಪ್ರಪ್ರಥಮವಾಗಿ ವಿಜಯಪುರದಲ್ಲಿ 35 ಅಡಿ ರಾವಣ ದಹನ ಕಾರ್ಯಕ್ರಮ ನಡೆಯಲಿದೆ.ಹೆಚ್ಚಿನ ಮಾಹಿತಿಗಾಗಿ ಮೊ.9036329108 / 9743231256 ಸಂಪರ್ಕಿಸಬಹುದು…

Read More

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ Infosys Springboard ಸಿ.ಎಸ್.ಆರ್.‌ ಕಾರ್ಯಕ್ರಮ ದಡಿ ಪತ್ರಕರ್ತರ ತರಬೇತಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ.16:ಕರ್ನಾಟಕ ಮಾಧ್ಯಮ ಅಕಾಡೆಮಿಯು Infosys Springboard ಸಿ.ಎಸ್.ಆರ್.‌ ಕಾರ್ಯಕ್ರಮದಡಿ ಪತ್ರಕರ್ತರ ತರಬೇತಿಗೆ ಅರ್ಜಿ ಆಹ್ವಾನಿಸಿದೆ.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ 5 ವರ್ಷ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಗಣಿಸಿರುವ ರಾಜ್ಯಮಟ್ಟದ ಪತ್ರಿಕೆಗಳು ಹಾಗೂ ಇಲಾಖೆಯಡಿ ನೋಂದಾಯಿತ ಉಪಗ್ರಹ ಸುದ್ದಿ ವಾಹಿನಿಗಳ ಸಂಪಾದಕರು ಶಿಫಾರಸು ಮಾಡುವ ಪತ್ರಕರ್ತರನ್ನು ತರಬೇತಿಗೆ ಪರಿಗಣಿಸಲಾಗುವುದು. ಈ ಕುರಿತು ಸಂಪಾದಕರನ್ನು ನೇರವಾಗಿ ಸಂಪರ್ಕಿಸಲಾಗುವುದು.ಆಸಕ್ತ…

Read More

ಬಿಎಲ್ ಡಿಇ ಎಸ್.ಎಸ್.ಎಂ ಔಷಧಿಯ ಮಹಾವಿದ್ಯಾಲಯದಲ್ಲಿ ದೃಷ್ಟಿಕೋನ ಕಂಕಣ ಕಾರ್ಯಕ್ರಮ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 16: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಎಸ್.ಎಂ ಔಷಧಿಯ ಮಹಾವಿದ್ಯಾಲಯ ಮತ್ತು ಸಂಶೋಧನೆ ಕೇಂದ್ರದಲ್ಲಿ ನೂತನ ವಿದ್ಯಾರ್ಥಿಗಳಿಗಾಗಿ ದೃಷ್ಟಿಕೋನ ಕಾರ್ಯಕ್ರಮ ಕಂಕಣ- 2025 ಶನಿವಾರ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಬೆಳಗಾವಿಯ ಐ.ಸಿ.ಎಂ.ಆರ್ ಎನ್.ಐ.ಟಿ.ಎಂನ ಡಾ. ಬನಪ್ಪ ಉಂಗೆರ ಮಾತನಾಡಿ, ಫಾರ್ಮಾ ಪದವೀಧರರಿಗೆ ಭವಿಷ್ಯದಲ್ಲಿ ಹೊಸ ಔಷಧ ಅನ್ವೇಷಣೆ ಮತ್ತು ಸೂತ್ರೀಕರಣ ವಿನ್ಯಾಸ ಹಾಗೂ ಕ್ಲಿನಿಕಲ್ ಸಂಶೋಧನೆಯಲ್ಲಿ ವಿಪುಲ ಅವಕಾಶಗಳಿದ್ದು, ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.ಬಿ. ಫಾರ್ಮ್ಸ್ ಸಂಯೋಜಕ ಡಾ. ಶ್ರೀಧರಕುಮಾರ ಬಿರಾದಾರ ಮತ್ತು…

Read More