ಪತ್ರಕರ್ತರ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿಯಾಗಲಿ: 183ನೇ ಪತ್ರಿಕಾ ದಿನಾಚರಣೆಯಲ್ಲಿ ಒಕ್ಕೊರಲಿನ ಆಗ್ರಹ
ಸಪ್ತಸಾಗರ ವಾರ್ತೆ,ಬೆಂಗಳೂರು, ಜು. 23:ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕಾರಂಗ ಇಂದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಒತ್ತಡ, ವೃತ್ತಿ ಅಸ್ಥಿರತೆ, ಭದ್ರತೆಯ ಕೊರತೆ ಹಾಗೂ ಡಿಜಿಟಲ್ ಯುಗದ ಹೊಸ ಸವಾಲುಗಳನ್ನು ಎದುರಿಸುತ್ತಿದೆ. ಪತ್ರಕರ್ತರ ಸುರಕ್ಷತೆ, ಸಾಮಾಜಿಕ ಭದ್ರತೆ ಹಾಗೂ ವೃತ್ತಿಪರ ಹಕ್ಕುಗಳನ್ನು ಖಾತರಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಶೀಘ್ರವೇ ಪತ್ರಕರ್ತರ ರಕ್ಷಣೆಗೆ ಪ್ರತ್ಯೇಕ ಕಾನೂನು ಜಾರಿಗೊಳಿಸಬೇಕು ಎಂದು 183ನೇ ಪತ್ರಿಕಾ ದಿನಾಚರಣೆ ಅಂಗವಾಗಿ ನಡೆದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಒತ್ತಾಯಿಸಲಾಯಿತು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ…


