ಐತಿಹಾಸಿಕ ಸ್ಮಾರಕಗಳಲ್ಲಿ ಸರ್ಕಾರಿ ಕಚೇರಿಗಳ ಠಿಕಾಣೆ! ವಿಜಯಪುರದ ಪರಂಪರೆಗೆ ಯಾರು ಕಾವಲು?

ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ ವಿಜಯಪುರ, ಜು. 12:ವಿಶ್ವದ ನಕ್ಷೆಯಲ್ಲಿ ತನ್ನದೇ ಆದ ಸ್ಥಾನ ಪಡೆದಿರುವ ಐತಿಹಾಸಿಕ ನಗರ ವಿಜಯಪುರದಲ್ಲಿ ಗೋಲ್ ಗುಂಬಜ್, ಇಬ್ರಾಹಿಂ ರೋಜಾ, ಬಾರಾಕಮಾನ್ ಸೇರಿದಂತೆ 80ಕ್ಕೂ ಹೆಚ್ಚು ಐತಿಹಾಸಿಕ ಸ್ಮಾರಕಗಳಿವೆ. ಆದರೆ ಪರಂಪರೆಯ ಪ್ರತೀಕಗಳಾಗಿರಬೇಕಾದ ಹಲವು ಐತಿಹಾಸಿಕ ಕಟ್ಟಡಗಳು ಇಂದು ಸರ್ಕಾರಿ ಕಚೇರಿಗಳಾಗಿ ಬಳಕೆಯಾಗುತ್ತಿರುವುದು ಪರಂಪರೆ ಸಂರಕ್ಷಣೆ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಗಂಭೀರ ಚರ್ಚೆಗೆ ಕಾರಣವಾಗಿದೆ.ವಿಜಯಪುರದ ಬಹುತೇಕ ಐತಿಹಾಸಿಕ ಪಾರಂಪರಿಕ ಕಟ್ಟಡಗಳಲ್ಲಿ ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಖಜಾನೆ ಕಚೇರಿ, ಭೂದಾಖಲೆ (ಸರ್ವೇ/ಭೂಮಾಪನ) ಇಲಾಖೆ,…

Read More

ಪ್ರತಿಯೊಬ್ಬರು ಸಸಿಯನ್ನು ನೆಟ್ಟು ಪರಿಸರ ಸಂರಕ್ಷಿಸಿ- ಡಾ. ರವೀಂದ್ರ ಬೆಳ್ಳಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 12:ಪರಿಸರ ರಕ್ಷಣೆ ಜವಾಬ್ದಾರಿ ಪ್ರತಿಯೊಬ್ಬರ ಹೊಣೆಯಾಗಿದ್ದು, ಪ್ರತಿಯೊಬ್ಬರು ಸಸಿಯನ್ನು ನೆಟ್ಟು, ಪೋಷಣೆ ಮಾಡಿ, ಪರಿಸರ ಸಂರಕ್ಷಣೆ ಮಾಡಬೇಕೆಂದು ಕೃಷಿ ಮಹಾವಿದ್ಯಾಲಯ ನಿವೃತ್ತ ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಹೇಳಿದರು.ನಗರದ ಸುಲ್ತಾನ ಡೈಮಂಡ್ಸ್ ಅಂಡ್ ಗೋಲ್ಡ್ ಶೋರೂಮ್ ವತಿಯಿಂದ ಹಮ್ಮಿಕೊಂಡ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.ಪರಿಸರ ಸಂರಕ್ಷಣೆ ಮತ್ತು ವಿನಾಶ ಮನುಕುಲದಿಂದ ಮಾತ್ರ ಸಾಧ್ಯ. ಇಂದು ಗಿಡ ಮರಗಳ ಕಟಾವಿನಿಂದ ಪರಿಸರ ಹಾಳಾಗುತ್ತಿದೆ. ಇದರ ಪರಿಣಾಮವಾಗಿ ಬಿರುಬಿಸಿಲು, ಬಿರುಗಾಳಿ,…

Read More

ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ವಿಶ್ವಪರಿಸರ ದಿನಾಚರಣೆ: ಸಸಿ ನೆಟ್ಟುಪರಿಸರ ಸಂರಕ್ಷಣೆಗೆ ವಿದ್ಯಾರ್ಥಿನಿಯರ ಸಂಕಲ್ಪ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 5:ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಕೋಶದವತಿಯಿಂದ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ವಿಶ್ವವಿದ್ಯಾನಿಲಯ ಆವರಣದಲ್ಲಿ ಸಸಿ ನೆಡುವ ಅಭಿಯಾನ ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿನಿಯರು ಸ್ವಯಂಪ್ರೇರಿತರಾಗಿಸಸಿಗಳನ್ನು ನೆಡುವ ಮೂಲಕ ಹಸಿರು ಪರಿಸರ ನಿರ್ಮಾಣಕ್ಕೆ ತಮ್ಮಬದ್ಧತೆಯನ್ನು ವ್ಯಕ್ತಪಡಿಸಿದರು.ಇದೇ ವೇಳೆ ಪರಿಸರ ಸಂರಕ್ಷಣೆಯಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು.ಮುಖ್ಯ ಅತಿಥಿಯಾಗಿ ಮಾತನಾಡಿದ ಉದ್ಯಮಿ ಹಾಗೂ ಸಾಮಾಜಿಕ ಚಿಂತಕಬಸಂತಕುಮಾರ ಪಾಟೀಲ, “ಪ್ರತಿಯೊಬ್ಬ ಪ್ರಜೆಯೂ ಒಂದೊಂದುಮರವನ್ನು ನೆಟ್ಟರೆ ನಮ್ಮ ದೇಶ ನಂದನವನದಂತೆ ಕಂಗೋಳಿಸುತ್ತದೆ.ಪರಿಸರ…

Read More

ಪರಿಸರ ರಕ್ಷಣೆಗಾಗಿ ಪಣ ತೊಡೋಣ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, ಜೂ. 5: ಪ್ರಕೃತಿ ನಮಗೆ ಬದುಕಲು ಬೇಕಾದ ಗಾಳಿ, ನೀರು, ಆಹಾರ, ನೆರಳನ್ನು ನೀಡಿದೆ. ಪರಿಸರ ಹಾಳಾದರೆ ಮಾನವನ ಅಸ್ತಿತ್ವವೇ ಪ್ರಶ್ನಾರ್ಥಕವಾಗುತ್ತದೆ. “ಇಂದಿನ ಮರ, ನಾಳಿನ ಜೀವ” ಎಂಬ ಧ್ಯೇಯವಾಕ್ಯದೊಂದಿಗೆ ನಾವೆಲ್ಲರೂ ಪರಿಸರ ರಕ್ಷಣೆಗಾಗಿ ಪಣ ತೊಡೋಣ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಶುಕ್ರವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸಸಿ ನೆಟ್ಟು ಅವರು ಮಾತನಾಡಿದರು.ಇಂದಿನ ಮಕ್ಕಳಿಗೆ ಪ್ರಕೃತಿಯ ಮಹತ್ವ ತಿಳಿಸಿಕೊಟ್ಟು, ಸ್ವಚ್ಛತೆಯ ಅಭ್ಯಾಸ ಕಲಿಸುವುದು…

Read More

ರಾಹುಲ್ ಗಾಂಧಿಯಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಗೆ ಚಳವಳಿ ಆರಂಭವಾಗಿದೆ: ಸಿ.ಎಂ

ಸಪ್ತಸಾಗರ ವಾರ್ತೆ,ಬೆಂಗಳೂರು ಆ.8:ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ. ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ಲೋಕಸಭಾ ಚುನಾವಣೆಯಲ್ಲಿ ನಡೆದ ಚುನಾವಣಾ ಅಕ್ರಮ ಮತ್ತು ಮತಗಳ್ಳತನ ವಿರೋಧಿಸಿ ಫ್ರೀಡಂಪಾರ್ಕ್ ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದರು.ಚುನಾವಣಾ ಆಯೋಗ ಬಿಜೆಪಿಯ ಶಾಖಾ ಕಚೇರಿ ಆಗಿದೆ. ಮತಗಳ್ಳತನದ ವಿರುದ್ಧಕರ್ನಾಟಕ ರಾಜ್ಯದಿಂದ ಆರಂಭವಾಗಿರುವ ಪ್ರತಿಭಟನಾ ಅಭಿಯಾನ ಇಡೀ ದೇಶಾದ್ಯಂತ ವ್ಯಾಪಿಸಲಿದೆ. ರಾಹುಲ್ ಗಾಂಧಿಯವರು ಸಂಪೂರ್ಣವಾಗಿ ಅಧ್ಯಯನ…

Read More

ಮಕ್ಕಳ ಹಕ್ಕುಗಳ ರಕ್ಷಣೆಗೆ ಮುಂದಾಗಿ- ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 25:ಮಕ್ಕಳ ರಕ್ಷಣೆ ಮತ್ತು ಅವರ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರ ವಿವಿಧ ಇಲಾಖೆಗಳ ಮೂಲಕ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಮಕ್ಕಳ ರಕ್ಷಣೆಗೆ ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಅವರು ಹೇಳಿದರು.ಮಕ್ಕಳ ನಿರ್ದೇಶನಾಲಯ ಬೆಂಗಳೂರು, ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಿವಿಧ ಭಾಗಿದಾರ…

Read More