ಪ್ರಿಯಾಂಕ್ ಖರ್ಗೆ ವಿರುದ್ದ ಹೇಳಿಕೆ: ಜಿಗಜಿಣಗಿಗೆ ರಾಜು ಆಲಗೂರ ಎಚ್ಚರಿಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 22:ಆರ್‌ಎಸ್‌ಎಸ್ ಕುರಿತು ರಾಜ್ಯದ ಗೃಹ ಸಚಿವ ಪ್ರಿಯಾಂಕಾ ಖರ್ಗೆ ಅವರು ನೀಡಿರುವ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿರುವ ಮಾಜಿ ಶಾಸಕ ರಾಜು ಆಲಗೂರ ಅವರು, ಈ ವಿಚಾರದಲ್ಲಿ ಮಾಜಿ ಸಂಸದ ರಮೇಶ ಜಿಗಜಿಣಗಿ ನೀಡಿರುವ ಪ್ರತಿಕ್ರಿಯೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.ಪತ್ರಿಕಾ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಅವರು, ರಾಜ್ಯದ ನೂತನ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ದೇಶದಲ್ಲಿರುವ ಎಲ್ಲ ಸಂಘ-ಸಂಸ್ಥೆಗಳು ನೋಂದಣಿ ಮಾಡಿಕೊಂಡಿರುವಾಗ ಆರ್‌ಎಸ್‌ಎಸ್ ಏಕೆ ನೋಂದಣಿ ಮಾಡಿಕೊಳ್ಳಬಾರದು ಎಂದು ಪ್ರಶ್ನೆ ಎತ್ತಿರುವುದು ಸಂವಿಧಾನಬದ್ಧ ಹಕ್ಕಾಗಿದೆ…

Read More

ನೀರಿಗಾಗಿ ಖಾಲಿ ಕೊಡಗಳೊಂದಿಗೆ ತೆಗ್ಗೆಹಳ್ಳಿ ಮಹಿಳೆಯರ ಪ್ರತಿಭಟನೆ

ಸಪ್ತಸಾಗರ ವಾರ್ತೆ,ಇಂಡಿ, ಜೂ. 20: ತಾಲೂಕಿನ ತೆಗ್ಗೆಹಳ್ಳಿ ಗ್ರಾಮದ ಹೊಸ ಊರಿನಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ನೂರಾರು ಮಹಿಳೆಯರು ಖಾಲಿ ಕೊಡಗಳೊಂದಿಗೆ ಆಡಳಿತ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.ತೆಗ್ಗೆಹಳ್ಳಿ ಗ್ರಾಮದ ಹೊಸ ಊರಿನಲ್ಲಿ ಸುಮಾರು 300 ಕುಟುಂಬಗಳು ವಾಸವಾಗಿದ್ದು, ಕುಡಿಯುವ ನೀರಿಗಾಗಿ ಕೇವಲ ಒಂದು ಬಾವಿಯನ್ನೇ ಅವಲಂಬಿಸಬೇಕಾಗಿದೆ. ಈ ಬಾವಿಯಿಂದ ದಿನಕ್ಕೆ ಕೇವಲ 15 ನಿಮಿಷಗಳ ಕಾಲ ಮಾತ್ರ ನೀರು ಪೂರೈಕೆಯಾಗುತ್ತಿದೆ. ನಂತರ ನೀರಿನ ಅಗತ್ಯಕ್ಕಾಗಿ ಗ್ರಾಮಸ್ಥರು ಸುತ್ತಮುತ್ತಲಿನ ತೋಟಗಳಿಗೆ ತೆರಳಿ…

Read More

ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಖಂಡಿಸಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ಆಕ್ರೋಶ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 19:ಇಲ್ಲಿನ ಜಿಲ್ಲಾಸ್ಪತ್ರೆಯ ಖಂಡಿಸಿ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ಮಂಗಳವಾರ ಪ್ರತಿಭಟನೆ ನಡೆಸಿದೆ.ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ತೀವ್ರ ಅವ್ಯವಸ್ಥೆಯಿಂದ ರೋಗಿಗಳು ದುರಂತ ಅನುಭವಿಸುತ್ತಿದ್ದಾರೆ. ಪ್ರತಿದಿನ 2,000 ರಿಂದ 3,000ಕ್ಕೂ ಹೆಚ್ಚು ಹೊರ ರೋಗಿಗಳು ಇಂಡಿ, ಮುದ್ದೇಬಿಹಾಳ, ಸಿಂದಗಿ ತಾಲ್ಲೂಕುಗಳಿಂದ, ಬಾಗಲಕೋಟೆ , ಬೆಳಗಾವಿ ಜಿಲ್ಲೆಗಳಿಂದ ಹಾಗೂ ಮಹಾರಾಷ್ಟ್ರದ ಸಾಂಗ್ಲಿ ಮತ್ತು ಜತ್ತ ಜಿಲ್ಲೆಗಳಿಂದ ಬರುತ್ತಿದ್ದರೂ ಸಹ, ಆಸ್ಪತ್ರೆಯಲ್ಲಿ ಕನಿಷ್ಠ ಮೂಲಭೂತ ವ್ಯವಸ್ಥೆಯನ್ನೂ ಕಲ್ಪಿಸಲಾಗಿಲ್ಲ ಎಂದು ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ…

Read More

ಕಾರ್ಮಿಕ ಕಾಯಿದೆ ವಿರುದ್ಧ ಕರಾಳ ದಿನಾಚರಣೆ: ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಏ. 1 : ನಾಲ್ಕು ಕಾರ್ಮಿಕ ಕಾಯಿದೆಗಳ ವಿರುದ್ದ 2025ರ ಏಪ್ರಿಲ್ ಒಂದರಂದು ಕರಾಳ ದಿನ ಆಚರಿಸಲು ಕೇಂದ್ರ ಕಾರ್ಮಿಕ ಸಂಘಟನೆಗಳು, ಸ್ವತಂತ್ರ ಕ್ಷೇತ್ರೀಯ ಮಹಾಸಂಘಗಳು ಮತ್ತು ಸಂಘಗಳ ಜಂಟಿ ವೇದಿಕೆಯು ಕರೆ ನೀಡಿದರ ಹಿನ್ನೆಲೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಮುಂದೆ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ವತಿಯಿಂದ ಕರಾಳ ದಿನ ಆಚರಿಸಲಾಯಿತು.ಈ ಸಂದರ್ಭದಲ್ಲಿ ಸಿಐಟಿಯು ಸಂಚಾಲಕ ಲಕ್ಷ್ಮಣ ಹಂದ್ರಾಳ ಮಾತನಾಡಿ, ಏಪ್ರಿಲ್ ಒಂದರಂದೇ ಕೇಂದ್ರ ಸರ್ಕಾರ ನಾಲ್ಕು…

Read More

101 ನೇ ದಿನಕ್ಕೆ ಕಾಲಿಟ್ಟ ಅನಿರ್ದಿಷ್ಟ ಧರಣಿ

ಸಪ್ತಸಾಗರ ವಾರ್ತೆ ವಿಜಯಪುರ,ಡಿ. 27:ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಹೋರಾಟ ಸಮಿತಿ ಕೈಗೊಂಡ ಅನಿರ್ದಿಷ್ಟ ಧರಣಿ ಸತ್ಯಾಗ್ರಹ 101ನೇ ದಿನಕ್ಕೆ ಕಾಲಿಟ್ಟಿದೆ.ವಿಜಯಪುರದ ಮೂಲ ನಿವಾಸಿ ಅಶೋಕ ಲೋಣಿ (ಕನ್ನಡಪರ ಹೋರಾಟಗಾರರು) ಕೆಜಿಎಫ್ ದಿಂದ ಆಗಮಿಸಿ, ಇಂದು ಇಡೀ ದಿನ ಧರಣಿಯಲ್ಲಿ ಭಾಗವಹಿಸಿ ಬೆಂಬಲ ವ್ಯಕ್ತ ಪಡಿಸಿ ಮಾತನಾಡಿ,ಸರ್ಕಾರ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಮಾತ್ರ ಸ್ಥಾಪಿಸಬೇಕು. ಯಾರ ಹಿತಕ್ಕಾಗಿ ಈ ಪಿಪಿಪಿ ಅನ್ನುವ ಮಾದರಿ ವಿಜಯಪುರ ಜಿಲ್ಲೆಯ ಜನರ ಮೇಲೆ ಹೇರುತ್ತಿದ್ದಾರೆ.ವಿಜಯಪುರ…

Read More

ಸರಕಾರಿ ವೈದ್ಯಕೀಯ ಕಾಲೇಜು ಹೋರಾಟ: ಡಿ. 15 ರಿಂದ ಅಹೋರಾತ್ರಿ ಧರಣಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 14 : ಡಿ.15ರಿಂದ ಸರಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಕೈಗೊಳ್ಳಲು ಹೋರಾಟಗಾರರು ನಿರ್ಧರಿಸಿದ್ದಾರೆ.ವಿಜಯಪುರ ನಗರದ ಡಾ. ಬಿಆರ್ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲೆಗೆ ಸರ್ಕಾರಿ ವೇದಿಕೆಯ ಮಹಾವಿದ್ಯಾಲಯ ಸ್ಥಾಪನೆಗಾಗಿ ಆಗ್ರಹಿಸಿ ಸರ್ಕಾರದ ಉದ್ದೇಶಿತ ಖಾಸಗಿಕರಣವನ್ನು ವಿರೋಧಿಸಿ ನಡೆಯುತ್ತಿರುವ ಧರಣಿ ಭಾನುವಾರ 88ನೇ ದಿನ ಪೂರೈಸಿದ್ದು, ಸರ್ಕಾರ ಜಿಲ್ಲೆಯ ಹೋರಾಟಗಾರರು ಹಾಗೂ ಜನರ ಬೇಡಿಕೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಹೋರಾಟ ಸಮಿತಿ ಪ್ರಮುಖರು ಇಂದು…

Read More

ಬಿಜೆಪಿ ಪ್ರತಿಭಟನೆ ಮಾಡಬೇಕಿರುವುದು ಕೇಂದ್ರ ಸರ್ಕಾರದ ವಿರುದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ ಬೆಳಗಾವಿ, ಡಿ.9:“ರಾಜ್ಯಕ್ಕೆ ಅನ್ಯಾಯ ಆಗಿರುವುದು ಕೇಂದ್ರ ಸರ್ಕಾರದಿಂದ. ಹೀಗಾಗಿ ಬಿಜೆಪಿಯು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.ಬೆಳಗಾವಿ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.ರಾಜ್ಯ ಸರ್ಕಾರ ವಿರುದ್ಧ ಬಿಜೆಪಿಯ ಪ್ರತಿಭಟನೆ ಬಗ್ಗೆ ಕೇಳಿದಾಗ “ಕಬ್ಬು, ಮೆಕ್ಕೆಜೋಳ, ಸಕ್ಕರೆ, ಎಥನಾಲ್ ಸೇರಿದಂತೆ ಪ್ರತಿ ವಿಚಾರದಲ್ಲಿ ಅನ್ಯಾಯ ಆಗಿರುವುದು ಕೇಂದ್ರ ಸರ್ಕಾರದಿಂದ. ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ನೀಡಬೇಕಾದ ಅನುದಾನ…

Read More

ಸರ್ಕಾರಿ ಮೆಡಿಕಲ್‌ ಕಾಲೇಜು: ಹೋರಾಟಗಾರರ ಜೊತೆ ಸಭೆ ನಿಗದಿಗೆ ಸಿಎಂಗೆ ಸಚಿವ ಶಿವಾನಂದ ಪಾಟೀಲ ಪತ್ರ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 6 : ಖಾಸಗಿ ಸಹಭಾಗಿತ್ವದ (ಪಿಪಿಪಿ) ಮಾದರಿಗೆ ಬದಲಾಗಿ ಪೂರ್ಣ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸಬೇಕೆಂದು ಆಗ್ರಹಿಸಿ ವಿಜಯಪುರದಲ್ಲಿ ಸೆಪ್ಟೆಂಬರ್‌ 18 ರಿಂದ ನಿರಂತರವಾಗಿ ಹೋರಾಟ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಹೋರಾಟಗಾರರ ಬೇಡಿಕೆ ಆಲಿಸಿ, ಚರ್ಚಿಸಲು ಸೂಕ್ತ ದಿನಾಂಕ ನಿಗದಿಪಡಿಸುವಂತೆ ಜವಳಿ,‌ ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಸಚಿವ ಶಿವಾನಂದ…

Read More

ಮೆಡಿಕಲ್ ಕಾಲೇಜ್ : ತಲೆ ಮೇಲೆ ಕಲ್ಲು ಹೊತ್ತು ಪ್ರತಿಭಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 3: ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಗರದ ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಬುಧವಾರ 77ನೇ ದಿನಕ್ಕೆ ಕಾಲಿಟ್ಟಿದೆ.ಡಿಸೆಂಬರ್ 1 ರಂದು ವಿಜಯಪುರ ನಗರದಲ್ಲಿ ನಡೆದ ಜನಾಕ್ರೋಶ ಮೆರವಣಿಗೆ ಸಂಪೂರ್ಣ ಯಶಸ್ವೀಯಾಗಿದ್ದು, ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ಮೆರವಣಿಗೆಯಲ್ಲಿ ಸಚಿವರ, ಶಾಸಕರ ಪ್ರತಿಕೃತಿ ದಹನ ಮಾಡಿದ ಹಿನ್ನಲೆ ಇಂದು ಪಿಂಡ ಪ್ರದಾನ ಮಾಡಲು ಮುಂದಾದಾಗ, ಪೊಲೀಸ್ ಮತ್ತು ಸಚಿವ ಎಂ.ಬಿ. ಪಾಟೀಲ್ ಅವರ ಒತ್ತಡಕ್ಕೆ ಹೋರಾಟಗಾರರು ಖಂಡಿಸಿದ್ದಾರೆ.ವಿಜಯಪುರ ಜಿಲ್ಲೆಯ ಜನತೆಯ…

Read More

ಮೆಡಿಕಲ್ ಕಾಲೇಜು ಹೋರಾಟ 76 ನೇ ದಿನಕ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 2: ಸರ್ಕಾರಿ ಮೆಡಿಕಲ್ ಕಾಲೇಜಿಗೆ ಅಗ್ರಹಿಸಿ ಹೋರಾಟ ಸಮಿತಿಯಿಂದ ಕೈಗೊಂಡ ಅನಿರ್ದಿಷ್ಟ ಧರಣಿ ಮಂಗಳವಾರ 76ನೇ ದಿನಕ್ಕೆ ಕಾಲಿಟ್ಟಿದ್ದು, ಈ ಧರಣಿಗೆ ಹ್ಯೂಮನ್ ರೈಟ್ಸ್ ಜಸ್ಟಿಸ್ ಅಸೋಸಿಯೇಷನ್ ವಿಜಯಪುರ ಜಿಲ್ಲಾ ಘಟಕ ಬೆಂಬಲ ವ್ಯಕ್ತಪಡಿಸಿದೆ.ಧರಣಿಯನ್ನು ಉದ್ದೇಶಿಸಿ ರಾಜ್ಯ ಕೋಅರ್ಡಿನೇಟರ್ ಆನಂದ ಔದಿ ಮಾತನಾಡಿ, ಸರ್ಕಾರದ ಪ್ರಭಾವಿ ಸಚಿವರು ಈ ವಿಷಯದಲ್ಲಿ ಮುತುವರ್ಜಿ ವಹಿಸದೆ ಇರುವುದು ತಪ್ಪು. ಇದನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ. ಕೂಡಲೇ ನಮ್ಮ ಸಚಿವರು ಮುಖ್ಯಮಂತ್ರಿಗಳ ಮನವೊಲಿಸಿ ಸರ್ಕಾರಿ ವೈದ್ಯಕೀಯ…

Read More