ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ವಿರೋಧಿಸಿ ಹೋರಾಟ ಸಮಿತಿ ಅಸ್ತಿತ್ವಕ್ಕೆ
ಸಪ್ತಸಾಗರ ವಾರ್ತೆ, ವಿಜಯಪುರ,ಆ. 28:ಜಿಲ್ಲೆಗೆ ಖಾಸಗಿ ಸಹಭಾಗಿತ್ವದಲ್ಲಿ ಆರಂಭಗೊಳ್ಳಲಿರುವ ವೈದ್ಯಕೀಯ ಮಹಾ ವಿದ್ಯಾಲಯಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಗುರುವಾರ ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲೆಯ ಸಾಹಿತಿಗಳು, ಚಿಂತಕರು, ದಲಿತ ಮತ್ತು ಕನ್ನಡಪರ ಹೋರಾಟಗಾರರು, ಕಾರ್ಮಿಕ, ವಿದ್ಯಾರ್ಥಿ ಯುವಜನ ಮಹಿಳಾ ಸಂಘಟನೆಯ ಮುಖಂಡರುಗಳು ಸಭೆ ಸೇರಿ ಖಾಸಗಿ ಸಹಭಾಗಿತ್ವವನ್ನು ವಿರೋಧಿಸಬೇಕು ಇದರ ವಿರುದ್ದ ಹೋರಾಟ ಮಾಡಬೇಕು ಎಂದು ಒಮ್ಮತದಿಂದ ನಿರ್ಧರಿಸಲಾಯಿತು.ಇದೇ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಸಂಘಟನೆಗಳನ್ನೊಳಗೊಂಡ ‘ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಹೋರಾಟ ಸಮಿತಿ, ವಿಜಯಪುರ’ ಸಮಿತಿಯನ್ನು ರಚಿಸಲಾಯಿತು….


