ದ್ವೇಷ ಭಾಷಣ ವಿಧೇಯಕ ಮಂಡನೆ: ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ-ಯತ್ನಾಳ
ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 20:ಸುಪ್ರೀಂ ಕೋರ್ಟ್ ನಲ್ಲಿ ದ್ವೇಷ ಭಾಷಣ ವಿಧೇಯಕ ಮಂಡನೆ ವಿರುದ್ಧ ಪ್ರಶ್ನೆ ಮಾಡುತ್ತೇವೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜ್ಯಪಾಲರಿಗೂ ಈ ಕುರಿತು ಮನವಿ ಸಲ್ಲಿಸುತ್ತೇವೆ ಎಂದು ಹೇಳಿದರು.ಈಗಾಗಲೇ ಸಂವಿಧಾನದಲ್ಲಿ ಮಾತನಾಡುವ ಹಕ್ಕನ್ನು ನೀಡಲಾಗಿದೆ.19/ A ಕಲಂನಲ್ಲಿ ಅಭಿವ್ಯಕ್ತಿ ಸ್ವಾತಂತ್ಯ ಹಕ್ಕು ನೀಡಲಾಗಿದೆ. ದ್ವೇಷ ಭಾಷಣ ವಿಧೇಯಕ ಇದಕ್ಕೆ ತದ್ವಿರುದ್ಧವಾಗಿದೆ. ಹೀಗಾಗಿ ನಾವು ಇದನ್ನು ಸುಪ್ರೀಂ ಕೋರ್ಟ್ ನಲ್ಲಿ…


