ರೋಮಿಯೋಗಳ ಕಾಟ, ಲವ್ ಜಿಹಾದ್ ನಂತಹ ಪ್ರಕರಣಗಳನ್ನು ತಡೆಯಲು ಪೊಲೀಸ್ ಇಲಾಖೆಗೆ ಆಗ್ರಹ
ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 20:ರೌಡಿ ರೋಡ್ ರೋಮಿಯೋಗಳ ಕಾಟ, ಲವ್ ಜಿಹಾದ್ ನಂತಹ ಪ್ರಕರಣಗಳನ್ನು ತಡೆಯಲು ಪೊಲೀಸ್ ಇಲಾಖೆಗೆ ಸ್ವಾಮಿ ವಿವೇಕಾನಂದ ಸೇನೆಯ ರಾಜ್ಯಾಧ್ಯಕ್ಷ ರಾಘವ ಅಣ್ಣಿಗೇರಿ ಅವರು ಆಗ್ರಹಿಸಿದ್ದಾರೆ.ಜಿಲ್ಲಾ ಪೊಲೀಸ್ ಇಲಾಖೆ ಅತ್ಯುತ್ತಮ ಕಾರ್ಯ ಮಾಡುತ್ತಿದ್ದು, ಈಗಾಗಲೇ ದರೋಡೆಕೋರರು, ಕಳ್ಳರು, ಸಮಾಜಘಾತಕರು ಮೇಲೆ ಕ್ರಮ ಕೈಗೊಳ್ಳುವದರ ಜೊತೆಗೆ ಜನತೆಗೆ ಕಿರಿಕಿರಿ ಉಂಟುಮಾಡಿ ಶಬ್ದ ಮಾಲಿನ್ಯ ಮಾಡುತ್ತಿರುವ ವಾಹನಗಳ ಸೈಲೆನ್ಸರ್ ಗಳನ್ನು ವಶಪಡಿಸಿಕೊಂಡು, ನಾಶಪಡಿಸಿ ಕೇಸ್ ದಾಖಲಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಅನೈತಿಕ ಚಟುವಟಿಕೆ ಮಾಡುವವರು, ಮದ್ಯಪಾನ…


