ಅಕ್ರಮ ಪಡಿತರ ಅಕ್ಕಿ ವಶ: ಪೊಲೀಸರ ದಾಳಿ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 14:ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ಯನ್ನು ಪೊಲೀಸರು ಲಾರಿ ಸಮೇತ ವಶಪಡಿಸಿಕೊಂಡಿದ್ದಾರೆ.ಖಚಿತ ಮಾಹಿತಿಯನ್ನು ಆಧರಿಸಿ ನಗರದ ವಿಜಯಾ ಟಾಯರ್ಸ್ ಮುಖ್ಯ ರಸ್ತೆಯಲ್ಲಿ ಪೊಲೀಸರು ಆಹಾರ ಇಲಾಖೆ ಜೊತೆಗೆ ಹಠಾತ್ ದಾಳಿ ನಡೆಸಿ 4,76,310 ಮೌಲ್ಯದ 210.43 ಕ್ವಿಂಟಲ್ ಅಕ್ಕಿ ಹಾಗೂ 5 ಲಕ್ಷ ಮೌಲ್ಯದ ಅಶೋಕ ಲೇಲ್ಯಾಂಡ್ ಲಾರಿ ವಶಪಡಿಸಿಕೊಳ್ಳಲಾಗಿದೆ. ಆರೋಪಿತರಾದ ಅಥಣಿ ತಾಲೂಕಿನ ಆಜೂರ ಗ್ರಾಮದ ಗಜಾನನ ಮಕಾಳೆ, ಅಥಣಿ ತಾಲೂಕಿನ ಗಣೇಶವಾಡಿ ನಿವಾಸಿ ಮಾರುತಿ ದೊಡಮನಿ, ಬೆಳಗಾವಿ ಆಝಾದ…

Read More

ಗೃಹ ಬಳಕೆ ಸಿಲಿಂಡರ್ ಅನಧಿಕೃತ ರಿಫಿಲಿಂಗ್ : ಆಹಾರ ಇಲಾಖೆ ದಾಳಿ, ಸಿಲಿಂಡರ್ ವಶಕ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.8: ಗೃಹ ಬಳಕೆಯ ಸಿಲಿಂಡರ್ ಗಳಿಂದ ಅನಧಿಕೃತವಾಗಿ ರಿಫಿಲಿಂಗ್ ಮಾಡುತ್ತಿರುವ ಸ್ಥಳಕ್ಕೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, 31920 ರೂ. ಮೌಲ್ಯದ ಒಟ್ಟು 10 ಹೆಚ್‍ಪಿ ಕಂಪನಿ ಸಿಲಿಂಡರ್ ಗಳನ್ನು ವಶಪಡಿಸಿಕೊಂಡಿದ್ದಾರೆ.ವಿಜಯಪುರ ನಗರದ ಇಬ್ರಾಹಿಂ ರೋಜಾ ಹತ್ತಿರದಲ್ಲಿ ಪತ್ರಾಸ ಶೆಡ್‍ನಲ್ಲಿ ಹಾಗೂ ನಗರದ ಬಾಗಲಕೋಟೆ ಕ್ರಾಸ್ ಹತ್ತಿರದ ಒಂದು ಪತ್ರಾಸ್ ಶೆಡ್‍ನಲ್ಲಿ ಅನಧಿಕೃತವಾಗಿ ಗೃಹ ಬಳಕೆ ಎಲ್‍ಪಿಜಿ ಸಿಲಿಂಡರ್ ಸಂಗ್ರಹಣೆ ಮಾಡಿ ರಿಫಿಲಿಂಗ್ ಮಾಡುತ್ತಿದ್ದ ಸ್ಥಳದಲ್ಲಿ ಅಧಿಕಾರಿಗಳು ದಾಳಿ ನಡೆಸಿ, ಸಿಲಿಂಡರ್…

Read More

ವಿಜಯಪುರ: ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಸಪ್ತಸಾಗರ ವಾರ್ತೆ, ಜು. 31:ಇಲ್ಲಿನ ಮಹಾನಗರ ಪಾಲಿಕೆಯ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.ಪಾಲಿಕೆ ಕಚೇರಿಯ ಮೂರು ವಲಯಗಳಲ್ಲಿ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.ಮಹಾನಗರ ಪಾಲಿಕೆಯ ನಿರ್ಲಕ್ಷ್ಯ , ಭ್ರಷ್ಟಾಚಾರದ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.ಲೋಕಾಯುಕ್ತ ಎಸ್ಪಿ ಟಿ. ಮಲ್ಲೇಶ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ.

Read More