15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ 5 ವರ್ಷ ವಯೋಮಿತಿ ಸಡಿಲಿಕೆಗೆ ಆಗ್ರಹ
ಗಣಿತ, ಹಿಂದಿ, ಉರ್ದು ಸೇರಿದಂತೆ ವಿಷಯ ಶಿಕ್ಷಕರ ನೇಮಕಕ್ಕೆ ಒತ್ತಾಯ ಸಪ್ತಸಾಗರ ವಾರ್ತೆ, ಬೆಂಗಳೂರು, ಆ. 19:ರಾಜ್ಯ ಸರ್ಕಾರದ 15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಐದು ವರ್ಷಗಳ ವಯೋಮಿತಿ ಸಡಿಲಿಕೆ ನೀಡಬೇಕು ಹಾಗೂ ಪ್ರೌಢಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಗಣಿತ, ಹಿಂದಿ, ಉರ್ದು ಸೇರಿದಂತೆ ವಿವಿಧ ವಿಷಯಗಳ ಶಿಕ್ಷಕರನ್ನು ಸೇರ್ಪಡೆಗೊಳಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಹಾಗೂ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನಾಕಾರರು ಮುಖ್ಯಮಂತ್ರಿ ಹಾಗೂ…


