ನಿವೃತ್ತ ಶಿಕ್ಷಕನ ಬರ್ಬರ ಹತ್ಯೆ
ಸಪ್ತಸಾಗರ ವಾರ್ತೆ,ವಿಜಯಪುರ, ಆ. 16: ಅಕ್ರಮ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದ ನಿವೃತ್ತ ಶಿಕ್ಷಕರೊಬ್ಬರನ್ನು ತಲೆಗೆ ಹಾಗೂ ಎದೆಗೆ ಮಾರಣಾಂತಿಕವಾಗಿ ಹೊಡೆದು ಕೊಲೆ ಮಾಡಿದ ಬರ್ಬರ ಘಟನೆ ಇಂಡಿಯಲ್ಲಿ ನಡೆದಿದ್ದು, ಮೃತದೇಹ ರಸ್ತೆ ಪಕ್ಕದಲ್ಲಿ ಪತ್ತೆಯಾಗಿದೆ.ಮೃತರನ್ನು ಸಿದ್ದಪ್ಪ ಬಸಪ್ಪ ಅಂಜುಟಗಿ (62) ಎಂದು ಗುರುತಿಸಲಾಗಿದೆ. ಶಿಕ್ಷಕರಾಗಿ ಸೇವೆ ಸಲ್ಲಿಸಿ ಸುಮಾರು ಎರಡು ವರ್ಷಗಳ ಹಿಂದೆ ನಿವೃತ್ತರಾಗಿದ್ದ ಸಿದ್ದಪ್ಪ ಅವರ ಹತ್ಯೆ ಪ್ರಕರಣ ಇದೀಗ ಹಲವು ಅನುಮಾನಗಳಿಗೆ ಕಾರಣವಾಗಿದೆ. ಪುತ್ರಿಯ ಸಂಬಂಧಕ್ಕೆ ತಂದೆಯ ವಿರೋಧ ಪೊಲೀಸರಿಗೆ ನೀಡಿರುವ ದೂರಿನ ಪ್ರಕಾರ,…


