ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ಧರ್ಮ ಕಾರ್ಯ: ಪಟ್ಟಣಶೆಟ್ಟಿ
ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 27 :ಹಿಂದೂ ಧರ್ಮಕ್ಕೆ ಅನ್ಯಾಯವಾದರೆ ಅದರ ವಿರುದ್ಧ ಸ್ವಯಂಪ್ರೇರಿತವಾಗಿ ಧ್ವನಿ ಎತ್ತುವುದು ಪ್ರತಿಯೊಬ್ಬ ಹಿಂದೂಗಳ ಕರ್ತವ್ಯ, ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ಧರ್ಮ ಕಾರ್ಯ ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಹೇಳಿದರು.ಬಿಜೆಪಿ ಕಾರ್ಯಾಲಯದಲ್ಲಿ ಬಬಲೇಶ್ವರದಲ್ಲಿ ನಡೆಯಲಿರುವ ಬಸವಾದಿ ಶರಣರ ಹಿಂದೂ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹಿಂದೂಗಳು ನಾವೆಲ್ಲರೂ ಒಂದಾಗಬೇಕು. ಹಿಂದೂಗಳ ವಿರುದ್ಧ ಅನ್ಯಾಯವಾದರೆ ಅದನ್ನು ಪ್ರತಿಭಟಿಸಬೇಕು. ಉಳಿದ ಧರ್ಮೀಯರಿಗೆ ಅನ್ಯಾಯವಾದರೆ ಅದರಲ್ಲೂ ಬೇರೆ ದೇಶದಲ್ಲಿಯೂ ಅನ್ಯಾಯವಾದರೂ…


