ರಾಷ್ಟ್ರೀಯ ಆರೋಗ್ಯ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಶ್ರಮಿಸಿ : ಜಿಪಂ ಸಿಇಒ ರಿಷಿ ಆನಂದ
ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 6:ಜಿಲ್ಲೆಯಲ್ಲಿರುವ ಎಲ್ಲ ಗರ್ಭಿಣಿ ಮಹಿಳೆಯರ ಮಾಹಿತಿಯನ್ನು ಆರ್.ಸಿ.ಹೆಚ್. ತಂತ್ರಾಂಶದಲ್ಲಿ ಕಡ್ಡಾಯವಾಗಿ ನಿಗದಿತ ಸಮಯದಲ್ಲಿ ನೋಂದಣಿ ಮಾಡಬೇಕು ಹಾಗೂ ನಿಯಮಿತವಾಗಿ ಆರೋಗ್ಯ ತಪಾಸಣೆಯನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಸೂಚನೆ ನೀಡಿದರು.ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಆರೋಗ್ಯ ಸಂಘದ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ, ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಯಾವುದೇ…


