ಗ್ರಾಮೀಣ ಜನತೆಗೆ ತ್ವರಿತವಾಗಿ ಸ್ಪಂದಿಸಿ:ಜಿಪಂ ಸಿಇಒ ರಿಷಿ ಆನಂದ ಕಿವಿಮಾತು
ಸಪ್ತಸಾಗರ ವಾರ್ತೆ,ವಿಜಯಪುರ, ಮೇ 14:ಸಮಸ್ಯೆ ಹೊತ್ತು ಬರುವ ಗ್ರಾಮೀಣ ಜನತೆಗೆ ತ್ವರಿತವಾಗಿ ಪರಿಹಾರ ಕಲ್ಪಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಕಾಧಿರಿ ರಿಷಿ ಆನಂದ ಹೇಳಿದರು.ಜಿಲ್ಲೆಯ ತಿಕೋಟಾ ತಾಲೂಕು ಪಂಚಾಯತಿ ಕಾರ್ಯಾಲಯದ ನವೀಕರಣಗೊಂಡ ಪಿಠೋಪಕರಣ ಉದ್ಘಾಟಿಸಿ ಅವರು ಮಾತನಾಡಿದರು.ಕಾರ್ಯಾಲಯವು ಎಷ್ಟು ನಿಟ್ಟಾಗಿ ಅಚ್ಚುಕಟ್ಟಾಗಿ ಹಾಗೂ ಸ್ವಚ್ಚತೆಯಿಂದ ಇರುತ್ತದೇಯೋ ಅಷ್ಟು ಸಿಬ್ಬಂದಿಗಳಿಗೆ ಕೆಲಸ ನಿರ್ವಹಿಸಲು ಪ್ರೇರಣೆ ಸಿಗುತ್ತದೆ. ಇಂತಹ ಒಂದು ಉತ್ತಮ ಯೋಜನೆಯನ್ನು ಹಾಕಿಕೊಂಡು ಹಳೆಯ ಕಟ್ಟಡದಲ್ಲಿಯೇ ಸಿಬ್ಬಂದಿಗೆ ಅವಶ್ಯಕವಾಗಿ ಬೇಕಾಗಿರುವ ಟೇಬಲ್, ಕುರ್ಚಿ, ಗಣಕಯಂತ್ರ,ಪ್ರಿಂಟರ್ಸ್, ಶೌಚಾಲಯ, ಕುಡಿಯುವ…


