ಕೃಷಿ ಉದ್ಯಮಿ ತರಬೇತಿಗೆ ಗ್ರಾಮೀಣ ಯುವಕರಿಂದ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 13:ಗ್ರಾಮೀಣ ಪ್ರದೇಶದ ಯುವಕರಿಗೆ ಕೃಷಿಯನ್ನೇ ಉದ್ಯೋಗವನ್ನಾಗಿ ರೂಪಿಸಿಕೊಂಡು ಸ್ವಾವಲಂಬಿಗಳಾಗಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ವಿಜಯಪುರದ ರುಡ್‌ಸೆಟ್ ಸಂಸ್ಥೆ ವತಿಯಿಂದ 13 ದಿನಗಳ ಉಚಿತ ಕೃಷಿ ಉದ್ಯಮಿ ತರಬೇತಿ ಆಯೋಜಿಸಲಾಗಿದೆ.ರುಡ್‌ಸೆಟ್ ಸಂಸ್ಥೆ ಹಾಗೂ ಕೆನರಾ ಬ್ಯಾಂಕ್‌ನ ಪ್ರಾಯೋಜಕತ್ವದಲ್ಲಿ ನಡೆಯಲಿರುವ ಈ ತರಬೇತಿಯು ಆ.17ರಿಂದ 13 ದಿನಗಳ ಕಾಲ ನಡೆಯಲಿದೆ. ಸ್ವಯಂ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ಗ್ರಾಮೀಣ ಯುವಕರಿಗೆ ತರಬೇತಿ ನೀಡುವ ಉದ್ದೇಶದಿಂದ ಕಾರ್ಯಕ್ರಮ ರೂಪಿಸಲಾಗಿದೆ.ತರಬೇತಿಯಲ್ಲಿ ಹೈನುಗಾರಿಕೆ, ಕುರಿ ಸಾಕಾಣಿಕೆ, ಆಡು ಸಾಕಾಣಿಕೆ, ಕೋಳಿ…

Read More