ವಿಶ್ವ ಶ್ರೇಷ್ಠ ಸಾಹಿತ್ಯದ ಅನರ್ಘ್ಯ ಪ್ರತಿಭೆ ಮಧುರಚೆನ್ನರು: ಸಂತೋಷ ಬಂಡೆ
ಸಪ್ತಸಾಗರ ವಾರ್ತೆ,ಇಂಡಿ, ಜು. 31: ಹಳ್ಳಿಯೊಂದರಲ್ಲಿ ಹುಟ್ಟಿ, ಸರಳ ಬದುಕಿನಲ್ಲೇ ಕನ್ನಡ ಸಾಹಿತ್ಯಕ್ಕೆ ಅಪೂರ್ವ ಕೊಡುಗೆ ನೀಡಿದ ಮಧುರಚೆನ್ನರು ವಿಶ್ವ ಶ್ರೇಷ್ಠ ಸಾಹಿತ್ಯವನ್ನು ರಚಿಸಿದ ಅನರ್ಘ್ಯ ಪ್ರತಿಭೆ ಎಂದು ಶಿಕ್ಷಕ-ಸಾಹಿತಿ ಸಂತೋಷ ಬಂಡೆ ಹೇಳಿದರು.ತಾಲೂಕಿನ ಹಿರೇರೂಗಿ ಗ್ರಾಮದ ಅರಿವು ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಮಧುರಚೆನ್ನರ 123ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಹಲಸಂಗಿ ಗೆಳೆಯರ ಬಳಗವನ್ನು ಕಟ್ಟಿಕೊಂಡು, ಗ್ರಾಮೀಣ ಮಹಿಳೆಯರು ಹಾಡುತ್ತಿದ್ದ ಜಾನಪದ ಗೀತೆಗಳನ್ನು ಸಂಗ್ರಹಿಸಿ ಪ್ರಕಟಿಸುವ ಮೂಲಕ ಮಧುರಚೆನ್ನರು ಕನ್ನಡ ಜಾನಪದ ಸಾಹಿತ್ಯಕ್ಕೆ ಅಮೂಲ್ಯ ಸೇವೆ…


