ಅಕ್ಕಮಹಾದೇವಿ ಕನ್ನಡ ಸಾಹಿತ್ಯದ ದೃವತಾರೆ-ಸಂತೋಷ ಬಂಡೆ
ಸಪ್ತಸಾಗರ ವಾರ್ತೆ, ವಿಜಯಪುರ, ಏ. 2: ಅಕ್ಕಮಹಾದೇವಿ ಅಧ್ಯಾತ್ಮಿಕ ಸ್ವಾತಂತ್ರ್ಯದ ಸಂಕೇತ. ಅವರ ವಚನಗಳು ಕನ್ನಡ ಸಾಹಿತ್ಯದ ಅತ್ಯುನ್ನತ ಅನುಭಾವ ಕಾವ್ಯವಾಗಿದ್ದು, ಅವು ವೈರಾಗ್ಯ, ಭಕ್ತಿ ಮತ್ತು ಸ್ತ್ರೀವಾದದ ಮಿಶ್ರಣವಾಗಿವೆ.ಆಕೆಯ ವಚನಗಳು ಇಂದಿಗೂ ಪ್ರಸ್ತುತವಾಗಿದ್ದು, ವ್ಯಕ್ತಿತ್ವ ವಿಕಸನಕ್ಕೆ ದಾರಿದೀಪವಾಗಿವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ನಗರದ ಬಂಜಾರಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಅಕ್ಕಮಹಾದೇವಿ ಜಯಂತಿ ಆಚರಣೆಯಲ್ಲಿ ‘ಅಕ್ಕಮಹಾದೇವಿಯ ವಚನಗಳ ಪ್ರಸ್ತುತತೆ’ ಕುರಿತು ಅವರು ಮಾತನಾಡಿದರು.ಅಕ್ಕಳು ತನ್ನ ವಚನಗಳಲ್ಲಿ ಬುದ್ದಿಗಿಂತ ಭಾವಕ್ಕೆ,ಮಾತಿಗಿಂತ ಕ್ರಿಯೆಗೆ, ಅಧಿಕಾರಕ್ಕಿಂತ ಅಂತಃಕರಣಕ್ಕೆ ಹೆಚ್ಚಿನ…


