ಶಾಲಾ ದಶಮಾನೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದ ಶ್ರೀಗಳು
ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 19: ಯಶಸ್ವಿ ಹತ್ತು ವರ್ಷಗಳನ್ನು ಪೂರೈಸಿರುವ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ದಶಮಾನೋತ್ಸವ ಸಮಾರಂಭ ಡಿ.26 ಮತ್ತು ಡಿ.27 ರಂದು ನಡೆಯಲಿದ್ದು,ಗುರುವಾರ ಸಂಜೆ ಗ್ರಾಮದ ಶ್ರೀ ಉದಯಲಿಂಗೇಶ್ವರ ಹಿರೇಮಠದಲ್ಲಿ ನಡೆದ ಸಮಾರಂಭದಲ್ಲಿ ಪರಮಪೂಜ್ಯ ಶ್ರೀ ಮ ಘ ಚ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು.ಶ್ರೀಗಳು ಮಾತನಾಡಿ, ಶಾಲೆಯು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅಕ್ಷರ ಜ್ಞಾನ ನೀಡುವ ಜತೆಗೆ ಸಂಸ್ಕಾರ ಕಲಿಸಿ…


