ಕ್ಯಾಂಪಸ್ ಸಂದರ್ಶನ:ಬಿಎಲ್ಡಿಇ ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಆಯ್ಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 18:ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ನಲ್ಲಿ ಜೂನ್ 16 ಮಂಗಳವಾರ ಮತ್ತು ಜೂನ್ 17 ಬುಧವಾರ ಎರಡು ದಿನ ನಡೆದ ಕ್ಯಾಂಪಸ್ ಸಂದರ್ಶನದಲ್ಲಿ 46 ಡಿಪ್ಲೋಮಾ ಮತ್ತು 48 ಐಟಿಐ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.ಧಾರವಾಡದ ನಿಡೆಕ್(NIDEK) ಸಂಸ್ಥೆ ಮತ್ತು ಬಿ.ಎಲ್.ಡಿ.ಇ ಪಾಲಿಟೆಕ್ನಿಕ್ ಹಾಗೂ ಐಟಿಐ ವತಿಯಿಂದ ಆಯೋಜಿಸಲಾದ ಈ ಕ್ಯಾಂಪಸ್ ಸಂದರ್ಶನದಲ್ಲಿ ನಿಡೆಕ್ ಮುಖ್ಯ ವ್ಯವಸ್ಥಾಪಕ ಸೋಮಶೇಖರ, ವ್ಯವಸ್ಥಾಪಕ ಮಂಜುನಾಥ, ಮಾನವ ಸಂಪನ್ಮೂಲ ವಿಭಾಗದ ಚಂದನಾ ಹಾಗೂ ನಿಶ್ಮಿತಾ ಸಂದರ್ಶನ…

Read More

ಕ್ರೀಡಾ ವಸತಿ ಶಾಲೆಗೆ ಅಬುಜಿರ್ ಮಕಾನದಾರ ಆಯ್ಕೆ

ಸಪ್ತಸಾಗರ ವಾರ್ತೆ,ಇಂಡಿ, ಜೂ. 16 : ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಸರ್ಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆಯ 7ನೇ ವರ್ಗದ ವಿದ್ಯಾರ್ಥಿ ಅಬುಜಿರ್ ಮಕಾನದಾರ ಈತನು ಹಾವೇರಿ ಜಿಲ್ಲೆಯ ಕ್ರೀಡಾ ವಸತಿ ಶಾಲೆಗೆ ಆಯ್ಕೆಯಾಗಿದ್ದಾನೆ ಎಂದು ಶಾಲೆಯ ಮುಖ್ಯೋಪಾಧ್ಯಾಯ ವೈ. ಬಿ. ಗಿರಣಿವಡ್ಡರ ತಿಳಿಸಿದ್ದಾರೆ.ತಾಲೂಕು ಮಟ್ಟ, ಜಿಲ್ಲಾ ಮಟ್ಟ, ಬೆಳಗಾವಿ ವಿಭಾಗಮಟ್ಟದಲ್ಲಿ ಯುವ ಜನ ಸೇವಾ ಇಲಾಖೆಯ ವತಿಯಿಂದನಡೆದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವಿಜೇತನಾದಬಳಿಕ ಕ್ರೀಡಾ ವಸತಿ ಶಾಲೆಗೆ ಆಯ್ಕೆಯಾಗಿದ್ದಾನೆ.ಈತನ ಸಾಧನೆಗೆ ಶಾಲೆಯ ಸಹ ಶಿಕ್ಷಕ…

Read More

ಕೋ.ಚನ್ನಬಸಪ್ಪ ರಾಜ್ಯ ದತ್ತಿಪ್ರಶಸ್ತಿಗೆ ಸಾಹಿತಿ ರೂಪಾ ರಜಪೂತ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಜೂ. 11:ಕೋ.ಚನ್ನಬಸಪ್ಪನವರ 2026ರ ರಾಜ್ಯಮಟ್ಟದ ದತ್ತಿ ಪ್ರಶಸ್ತಿಯನ್ನು ಗ್ರಾಮೀಣ ಮಹಿಳೆ ಕವಿ, ಲೇಖಕಿರೂಪಾ ರಜಪೂತ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ತಿಳಿಸಿದ್ದಾರೆ.ಗೌರವ ಕಾರ್ಯದರ್ಶಿಗಳಾದ ಡಾ.ಮಾಧವ ಗುಡಿ, ಶಿಲ್ಪಾ ಭಸ್ಮೆ ಗೌರವ ಕೋಶಾಧ್ಯಕ್ಷರಾದಅಭಿಷೇಕ ಚಕ್ರವರ್ತಿ, ಮಹಾದೇವಿ ತೆಲಗಿ ಆಯ್ಕೆ ಸಮಿತಿಯಲ್ಲಿಉಪಸ್ಥಿತರಿದ್ದರು.ಜೂ. 14ರಂದು ಜಿಲ್ಲಾ ಕನ್ನಡ ಸಾಹಿತ್ಯಪರಿಷತ್ತಿನ ಸಭಾಂಗಣದಲ್ಲಿ ರಾಜ್ಯಮಟ್ಟದ ದತ್ತಿ ನಿಧಿ ಪ್ರಶಸ್ತಿಕಾರ್ಯಕ್ರಮ ಜರುಗಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಸಿಂಪೀರ ವಾಲೀಕಾರ…

Read More

ಡಾ.ಸುಜಾತಾ ಚಲವಾದಿ ಸ್ವಾಭಿಮಾನಿಪುಸ್ತಕ ಪ್ರಶಸ್ತಿಗೆ ಆಯ್ಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 9 :ಸ್ವಾಭಿಮಾನಿ ಕರ್ನಾಟಕ ವೇದಿಕೆಯುಡಾ. ಸುಜಾತಾ.ಚಲವಾದಿ ಸೇರಿದಂತೆ ಹಲವರಿಗೆ 2025ನೇ ಸಾಲಿನ ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಯನ್ನು ಪ್ರಕಟಿಸಿದೆ.ಡಾ. ಸಿ. ಸೋಮಶೇಖರ್ಸರ್ವಮಂಗಳ ದತ್ತಿ ಪ್ರಶಸ್ತಿಗೆ ಡಾ. ಸುಜಾತಾ ಚಲವಾದಿ ಅವರ‘ಮನುಷ್ಯ ಮತ್ತು ಪ್ರೀತಿ’ ಪ್ರಬಂಧ ಸಂಕಲನವನ್ನು ಆಯ್ಕೆಮಾಡಲಾಗಿದೆ.ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷಡಾ. ಆರ್.ಸುನಂದಮ್ಮ, ವೇದಿಕೆಯ ಅಧ್ಯಕ್ಷ ಡಾ. ದ್ವಾರನಕುಂಟೆಪಾತಣ್ಣ ಹಾಗೂ ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದ ಅಧ್ಯಕ್ಷಎಚ್.ಆರ್ ಸುಜಾತ ಅವರ ನೇತೃತ್ವದ ಸಮಿತಿಯುಪುರಸ್ಕೃತರನ್ನು ಆಯ್ಕೆ ಮಾಡಿದೆ. ಜೂ.13ರಂದು ಸಂಜೆ 5ಗಂಟೆಗೆ ಶೇಷಾದ್ರಿಪುರಂ ಕಾಲೇಜಿನಲ್ಲಿ ಪ್ರೊ. ಎಸ್.ಜಿ.ಸಿದ್ದರಾಮಯ್ಯಅವರು…

Read More

ಗಾನಗಂಗೋತ್ರಿ ಗಾಯನ: ವಿದ್ಯಾಶ್ರೀ ನಡುಗಡ್ಡಿ ಆಯ್ಕೆ

ಸಪ್ತಸಾಗರ ವಾರ್ತೆ, ಇಂಡಿ, ಮೇ 15: ಬೆಂಗಳೂರಿನ ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ 11 ನೇ ರಾಷ್ಟ್ರೀಯ ನೃತ್ಯ ಕಲಾ ಮೇಳ ಹಾಗೂ 75 ನೇ ರಾಜ್ಯ ಮಟ್ಟದ ಸಾಂಸ್ಕೃತಿಕ ಕಲಾ ಪ್ರತಿಭೋತ್ಸವ ಕಾರ್ಯಕ್ರಮವನ್ನು ಇದೇ ಮೇ 23,24 ರಂದು ಬೆಂಗಳೂರಿನ ಸಂಸ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.ಈ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕವನ ವಾಚನ, ನೃತ್ಯಾoಜಲಿ, ಸಮೂಹ ನೃತ್ಯ ಪ್ರದರ್ಶನ ಹಾಗೂ…

Read More

ಎಕ್ಸಲಂಟ್ ಸಂಸ್ಥೆಯಿಂದ 29 ವಿದ್ಯಾರ್ಥಿಗಳು ನವೋದಯ ಶಾಲೆಗಳಿಗೆ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 21:ಪ್ರತಿ ವರ್ಷವೂ ಉತ್ತಮ ಫಲಿತಾಂಶ ನೀಡುವ ಮೂಲಕ ಮನೆ ಮಾತಾಗಿರುವ ಎಕ್ಸಲಂಟ್ ಸಂಸ್ಥೆಯು 2025-26ನೇ ಸಾಲಿನ ಜವಾಹರ ನವೋದಯ ಶಾಲೆಗಳ ಪ್ರವೇಶ ಪರೀಕ್ಷೆಯಲ್ಲಿ ತನ್ನ ಫಲಿತಾಂಶದ ಹೆಜ್ಜೆ ಗುರುತನ್ನು ಮತ್ತಷ್ಟು ಗಟ್ಟಿಗೊಳಿಸಿದೆ. 29 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಎಕ್ಸಲಂಟ್ ತನ್ನ ಗುಣಮಟ್ಟಕ್ಕೆ ಮತ್ತೊಮ್ಮೆ ಕನ್ನಡಿ ಹಿಡಿದಿದೆ.ಗಣೇಶ ಪಾಟೀಲ್(ಶೇ.98.75), ಸಮರ್ಥ ಚವ್ಹಾಣ(97.50), ಶ್ರೀಕರ ಗಗನಮಾಳಿ(97.50), ಕಾರ್ತಿಕ ಸತ್ಯಪ್ಪನವರ(97.50), ಸೃಜನ್ ಗೊರೆ(97.50), ಕೃತಿಕೇಶ ಹೊಂಗಲ್(97.50), ಕರುಣಸಾಗರ ಬಾದವಾಡಗಿ (96.25),…

Read More

ಪ್ರಧಾನಮಂತ್ರಿ ರಾಷ್ಟೀಯ‌ ಶಿಶಿಕ್ಷು ಮೇಳ: 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 26:ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ‌ ಸಂಸ್ಥೆಯ ಕೈಗಾರಿಕೆ ತರಬೇತಿ ಸಂಸ್ಥೆಯಲ್ಲಿ ನಡೆದ ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶಿಕ್ಷು(ಅಂಪ್ರೆಂಟಿಸ್) ಮೇಳದಲ್ಲಿ 350ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ನಾನಾ ಕಂಪನಿಗಳ ಕಂಪನಿಗಳಿಗೆ ಆಯ್ಕೆಯಾಗಿದ್ದಾರೆ.ಮಂಗಳವಾರ ಬಿ.ಎಲ್.ಡಿ.ಇ ಕೈಗಾರಿಕೆ ತರಬೇತಿ ಸಂಸ್ಥೆ, ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆಯ ಸರಕಾರಿ, ಅನುದಾನಿತ ಮತ್ತು ಖಾಸಗಿ ಐಟಿಐ ಹಾಗೂ ಉದ್ಯೋಗ ವಿನಿಮಯ ಕಚೇರಿ, ಕೌಶಾಲ್ಯಾಭಿವ್ಯದ್ಧಿ ಇಲಾಖೆ ಇವರ ಸಹಯೋಗದಲ್ಲಿ ನಡೆದ ಈ ಪ್ರಧಾನಮಂತ್ರಿ ರಾಷ್ಟೀಯ‌ ಶಿಶಿಕ್ಷು ಮೇಳವನ್ನು ವಿಜಯಪುರ ಸರಕಾರಿ ಐಟಿಐ…

Read More

ತನುಶ್ರೀ ಇಜೇರಿ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 11: ಸಂತ ಜೋಸೆಫ್ ವಿದ್ಯಾರ್ಥಿನಿ ತನುಶ್ರೀ ಇಜೇರಿ ತೆಲಂಗಾಣದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ೧೭ ವಯೋಮಿತಿಯ ಬಾಲಕಿಯರ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ.ಚಿನ್ನದ ನಾಡಿನಲ್ಲಿ ನಡೆದ ೨೦೨೫-೨೬ ನೇ ಸಾಲಿನ ೧೭ ವಯೋಮಿತಿಯ ಬಾಲಕಿಯರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಉಪನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಕೋಲಾರ ಜಿಲ್ಲೆ ಕೋಲಾರವರ ಆಶ್ರಯದಲ್ಲಿ ಜರುಗಿತು.ಈ ಪಂದ್ಯಾವಳಿಯಲ್ಲಿ ತನುಶ್ರೀ ಇಜೇರಿ ಭರ್ಜರಿ ಬ್ಯಾಟಿಂಗ್ ಹಾಗೂ ಮಾರಕ ಬೌಲಿಂಗ್ ನಿಂದ ಬೆಳಗಾವಿ ವಿಭಾಗದ ತಂಡ…

Read More

ಸೃಜನಾತ್ಮಕ ಬರವಣಿಗೆಯ ಸ್ಪರ್ಧೆಗಳಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ನ. 11 : ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ “2025-26ನೇ ಸಾಲಿನ ಮಕ್ಕಳ ದಿನಾಚರಣೆ” ನಿಮಿತ್ತ ನಗರದ ಜಿಲ್ಲಾ ಬಾಲಭವನದಲ್ಲಿ ಹಮ್ಮಿಕೊಂಡ 9-16 ವರ್ಷದೊಳಗಿನ ಜಿಲ್ಲಾಮಟ್ಟದ ಸೃಜನಾತ್ಮಕ ಬರವಣಿಗೆಯ ಸ್ಪರ್ಧೆಗಳಲ್ಲಿ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಸಮನ್ವಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಿದ್ದಾರೆ.ಕತೆ, ಕವನ ಮತ್ತು ಪ್ರಬಂಧ ಸ್ಪರ್ಧೆಗಳಲ್ಲಿ ಕುಮಾರಿ ಶ್ರದ್ಧಾ ದತ್ತೂರೆ (ಪ್ರಥಮ ಸ್ಥಾನ) ಹಾಗೂ ಕುಮಾರಿ ವೈಭವಿ ಪತ್ತಾರ…

Read More

ಕ್ಯಾಂಪಸ್ ಸಂದರ್ಶನ:11 ವಿದ್ಯಾರ್ಥಿಗಳ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 10: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಶೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಕಾಲೇಜ್ ಆಫ್ ಫಾರ್ಮಸಿ ಆ್ಯಂಡ್ ರಿಸರ್ಚ್ ಸೆಂಟರ್ ನ 11 ಜನ ವಿದ್ಯಾರ್ಥಿಗಳು ನವೆಂಬರ್ 8 ಮತ್ತು 9 ರಂದು ಕಾಲೇಜಿನಲ್ಲಿ ನಡೆದ ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾಗಿ ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ.ಕಾಲೇಜಿನ ಪ್ಲೇಸ್ಮೆಂಟ್ ಸೆಲ್, ತುಮಕೂರಿನ ವೆಕ್ಸಪೋರ್ಡ್ ಲ್ಯಾಬೋರೇಟರೀಸ್ ಸಹಯೋಗದಲ್ಲಿ ಕ್ಯಾಂಪಸ್ ಡ್ರೈವ್ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಬಿ. ಫಾರ್ಮಾ, ಎಂ. ಫಾರ್ಮಾ ಪದವೀಧರರು‌‌ ಮತ್ತು ಸ್ಕೂಲ್ ಆಪ್ಲೈಡ್ ಸಾಯಿನ್ಸ್ ಆ್ಯಂಡ್…

Read More