ವಿಜಯಪುರದಲ್ಲಿ ತಾರಕಕ್ಕೇರಿದ ಸಚಿವ ಲಾಬಿ

ಎಂ.ಬಿ. ಪಾಟೀಲ್ ಬಳಿಕ ಮತ್ತೊಬ್ಬರಿಗೆ ಸಚಿವಗಿರಿಯ ಭಾಗ್ಯ? ಶಿವಾನಂದ ಪಾಟೀಲ, ಯಶವಂತರಾಯಗೌಡ ಪಾಟೀಲ, ಸಿ. ಎಸ್. ನಾಡಗೌಡ ನಡುವೆ ತೀವ್ರ ಪೈಪೋಟಿ ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ,ಬೆಂಗಳೂರು/ವಿಜಯಪುರ, ಜು. 31:ಕರ್ನಾಟಕ ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಅಂತಿಮ ಘಟ್ಟ ತಲುಪುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ತೆರೆಮರೆಯ ಚಟುವಟಿಕೆಗಳು ಚುರುಕುಗೊಂಡಿವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಂದಿರುವ ಸವಾಲು ಕೇವಲ ಖಾಲಿ ಸಚಿವ ಸ್ಥಾನಗಳನ್ನು ಭರ್ತಿ ಮಾಡುವುದಲ್ಲ; ಅಸಮಾಧಾನಗೊಂಡಿರುವ ಶಾಸಕರನ್ನು ಸಮಾಧಾನಪಡಿಸುವುದು, ಪ್ರಾದೇಶಿಕ ಮತ್ತು ಸಾಮಾಜಿಕ ಸಮತೋಲನ ಕಾಯ್ದುಕೊಳ್ಳುವುದು,…

Read More

ವಿಶ್ವ ಪರಂಪರೆ ಪಟ್ಟಿಗೆ ಯಾವಾಗ ಸೇರುತ್ತದೆ ವಿಜಯಪುರದ ಹೆಮ್ಮೆಯ ಗೋಳಗುಮ್ಮಟ?

ಇಚ್ಛಾಶಕ್ತಿ ಕೊರತೆಯಿಂದ ನೆನೆಗುದಿಗೆ ಬಿದ್ದ ವಿಶ್ವಮಾನ್ಯತೆಯ ಕನಸು ಚೇತನ ಆಸಂಗಿಸಪ್ತಸಾಗರ ವಾರ್ತೆ,ವಿಜಯಪುರ, ಜು. 5: ಆದಿಲ್‌ಶಾಹಿ ವಾಸ್ತುಶಿಲ್ಪದ ಶ್ರೇಷ್ಠ ಮಾದರಿ, ವಿಶ್ವದ ಅತಿದೊಡ್ಡ ಗುಮ್ಮಟಗಳಲ್ಲಿ ಒಂದಾದ ಗೋಳಗುಮ್ಮಟ ಇಂದು ದೇಶ-ವಿದೇಶದ ಪ್ರವಾಸಿಗರನ್ನು ಸೆಳೆಯುತ್ತಿರುವ ಐತಿಹಾಸಿಕ ಸ್ಮಾರಕ. ಆದರೆ, ಹಲವು ದಶಕಗಳಿಂದ ಕೇಳಿಬರುತ್ತಿರುವ ಯುನೆಸ್ಕೋ (UNESCO) ವಿಶ್ವ ಪರಂಪರೆ ಪಟ್ಟಿಗೆ ಸೇರಿಸುವ ಕನಸು ಮಾತ್ರ ಇನ್ನೂ ನನಸಾಗಿಲ್ಲ. ಅಧಿಕಾರಿಗಳ ನಿರಾಸಕ್ತಿ, ರಾಜಕೀಯ ಇಚ್ಛಾಶಕ್ತಿಯ ಕೊರತೆ ಹಾಗೂ ಸಮನ್ವಯದ ಅಭಾವದಿಂದ ಈ ಮಹತ್ವಾಕಾಂಕ್ಷೆಯ ಯೋಜನೆ ವರ್ಷದಿಂದ ವರ್ಷಕ್ಕೆ ಮುಂದೂಡಲ್ಪಡುತ್ತಲೇ ಬಂದಿದೆ.ಗೋಳಗುಮ್ಮಟ…

Read More

ಶಿವಾನಂದ ಪಾಟೀಲರಿಗೆ ಸಚಿವ ಸ್ಥಾನ ನೀಡಲು ಆಗ್ರಹ

ಸಪ್ತಸಾಗರ ವಾರ್ತೆ ವಿಜಯಪುರ, ಜೂ. 2 :ಮಾಜಿ ಸಚಿವರು ಹಾಗೂ ಬಸವನ ಬಾಗೇವಾಡಿ ಕ್ಷೇತ್ರದ ಜನಪ್ರಿಯ ಶಾಸಕ ಶಿವಾನಂದ ಪಾಟೀಲ ಅವರಿಗೆನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಿ ವೈದ್ಯಕೀಯ ಶಿಕ್ಷಣಖಾತೆಯನ್ನು ನೀಡಬೇಕು ಎಂದು ಕನ್ನಡದ ಕಟ್ಟಾಳು ಗಂಗಾಧರ ಕೋರಳ್ಳಿ ಪ್ರತಿಷ್ಠಾನ ಸಂಚಾಲಕ ಅನಿಲ ಹೊಸಮನಿ ಹಾಗೂ ಕಾರ್ಯದರ್ಶಿ ಲಾಯಪ್ಪ ಇಂಗಳೆ ಆಗ್ರಹಿಸಿದ್ದಾರೆ.ಈ ಹಿಂದೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ರಾಜ್ಯದಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ಸಲ್ಲಿಸಿದ್ದಾರೆ.ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ತಾಯಿ -ಮಕ್ಕಳ ಆಸ್ಪತ್ರೆ,ಟ್ರಾಮಾ ಸೆಂಟರ್…

Read More

ಜ.14ರಂದು ಶಿವಯೋಗಿ ಸಿದ್ದರಾಮೇಶ್ವರ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ,ಜ.14: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮವನ್ನು ಜ.14ರಂದು ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.ಅಂದು ಬೆಳಿಗ್ಗೆ 9-30ಕ್ಕೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಭಾವಚಿತ್ರ ಮೆರವಣಿಗೆಗೆ ಚಾಲನೆ ನಡೆಯಲಿದ್ದು, ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಅವರು ಉದ್ಘಾಟಿಸುವರು.ಜವಳಿ,ಕಬ್ಬು ಅಭಿವೃದ್ಧಿ ಮತ್ತು…

Read More

ಅಗ್ನಿ ದುರಂತ ಹಾನಿಗೆ ಪರಿಹಾರ:ದುಷ್ಕೃತ್ಯದ ಬಗ್ಗೆ ತನಿಖೆಗೆ ಆದೇಶ- ಸಚಿವ ಶಿವಾನಂದ ಪಾಟೀಲ ಹೇಳಿಕೆ

ಸಪ್ತಸಾಗರ ವಾರ್ತೆ, ಬಾಗಲಕೋಟೆ, ನ. 14: ಮುಧೋಳ ತಾಲೂಕಿನ ಸಮೀರವಾಡಿಯ ಗೋದಾವರಿ ಬಯೋ ರಿಫೈನರೀಸ್‌ ಲಿಮಿಟೆಡ್‌ ಬಳಿ ಗುರುವಾರ ಸಂಭವಿಸಿದ ಅಹಿತಕರ ಘಟನೆಯಲ್ಲಿ ಸಂಭವಿಸಿದ ಹಾನಿಗೆ ಸಾಧ್ಯವಿರುವ ಪರಿಹಾರ ನೀಡಲಾಗುವುದು ಹಾಗೂ ದುರಂತದ ಬಗ್ಗೆ ತನಿಖೆಗೆ ಆದೇಶ ಮಾಡಲಾಗುವುದು ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ ಪ್ರಕಟಿಸಿದರು.ದುರಂತದ ಸ್ಥಳಕ್ಕೆ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಆರ್.‌ಬಿ. ತಿಮ್ಮಾಪುರ ಅವರೊಂದಿಗೆ ಭೇಟಿ ನೀಡಿ ದುರಂತದಲ್ಲಿ ಹಾನಿಗೀಡಾದ ಕಬ್ಬು, ಟ್ರ್ಯಾಕ್ಟರ್‌ಗಳು, ಬೈಕ್‌ಗಳನ್ನು ವೀಕ್ಷಣೆ ಮಾಡಿ ರೈತರ…

Read More