ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ
Minister Shivanand Patil felicitated national award winner Sanjay.
Minister Shivanand Patil felicitated national award winner Sanjay.
ಸಪ್ತಸಾಗರ ವಾರ್ತೆ ವಿಜಯಪುರ, ಅ. 17: ಜಿಲ್ಲೆಯಲ್ಲಿ ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.ಶುಕ್ರವಾರ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಧಾನ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ಮೊನ್ನೆ ಕರೆದಿದ್ದ ಸಚಿವರ ಸಭೆಯಲ್ಲಿ ನಮ್ಮ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಮಾತನಾಡಿದ್ದೇನೆ. ಸಿದ್ಧರಾಮಯ್ಯ ಅವರು…
ಸಪ್ತಸಾಗರ ವಾರ್ತೆ, ವಿಜಯಪುರ, ಅ. 12 : ತಮ್ಮ ತವರು ಕ್ಷೇತ್ರ ಬಸವನಬಾಗೇವಾಡಿ ವಿಧಾನಸಭೆ ವ್ಯಾಪ್ತಿಯ ವಿವಿಧ ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಯೋಜನೆ ಅಡಿಯಲ್ಲಿ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ವಾಹನಗಳನ್ನು ವಿತರಿಸಿದರು.ನಗರದಲ್ಲಿರುವ ಗೃಹ ಕಛೇರಿಯಲ್ಲಿ ಭಾನುವಾರ ಮೀನುಗಾರಿಕೆ ಇಲಾಖೆಯಿಂದ ನಿಡಗುಂದಿ ತಾಲೂಕಿನ ಅರಳದಿನ್ನಿ ಗ್ರಾಮದ ಮಹಾಂತೇಶ ವಿಠ್ಠಲ ಧನವೆ ಇವರಿಗೆ ಮಾರುಕಟ್ಟೆಗೆ ಮೀನು ಸಾಗಾಟಕ್ಕೆ ಸಚಿವರಾದ ಶಿವಾನಂದ ಪಾಟೀಲ ವಾಹನ ವಿತರಿಸಿದರು.2025-26 ನೇ ಸಾಲಿನಲ್ಲಿ ಮೀನು ಮಾರುಕಟ್ಟೆ…
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 22 : ರೈತರು ಕೃಷಿ ಆಧಾರಿತ ವ್ಯವಸ್ಥೆಯಲ್ಲಿ ಲಾಭ ಗಳಿಸಿ, ಆರ್ಥಿಕವಾಗಿ ಸುಭದ್ರವಾಗಬೇಕಿದೆ. ಆದರೆ ತೋಟಗಾರಿಕೆ ಬೆಳೆಯಲ್ಲಿ ಏಕ ಬೆಳೆಯಾಗಿ ದ್ರಾಕ್ಷಿ ಬೆಳೆಯದೇ ಮಿಶ್ರ ಬೆಳೆ ಹಾಗೂ ಸಮಗ್ರ ಕೃಷಿಯಲ್ಲಿ ಮಾಡಿದಲ್ಲಿ ಯಶಸ್ಸು ಸಾಧ್ಯ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಸಲಹೆ ನೀಡಿದರು.ಭಾನುವಾರ ತಿಕೋಟಾ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳೆಗಾರರ ಸಂಘದಿಂದ ಹಮ್ಮಿಕೊಂಡಿದ್ದ ದ್ರಾಕ್ಷಿ ಬೆಳೆಗಾರರ ರಾಷ್ಟ್ರೀಯ ವಿಚಾರ ಸಂಕಿರಣ…
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 17 : ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಯೋಜನೆ ಅನುಷ್ಠಾನಗಾಗಿ ಸಂತ್ರಸ್ತರಾಗುವ ರೈತರಿಗೆ ಸರ್ಕಾರ ನ್ಯಾಯಸಮ್ಮತ ಪರಿಹಾರ ಘೋಷಿಸಿದೆ. ಇದಕ್ಕಾಗಿ ಮಾಜಿ ಸಚಿವ ಎಸ್.ಆರ್. ಪಾಟೀಲ ಅವರು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರನ್ನು ಅಭಿನಂದಿಸಿದ್ದಾರೆ.ಬುಧವಾರ ಬೆಂಗಳೂರಿನಲ್ಲಿ ಸಚಿವರಾದ ಶಿವಾನಂದ ಪಾಟೀಲ ಅವರನ್ನು ಭೇಟಿ ಮಾಡಿದ ಮಾಜಿ ಸಚಿವರಾದ ಎಸ್.ಆರ್.ಪಾಟೀಲ ಅವರು, ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತದ ಯೋಜನೆ ಅನುಷ್ಠಾನಕ್ಕೆ…
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 8 : ಐತಿಹಾಸಿಕ ವಿಜಯಪುರ ಮಹಾನಗರದಲ್ಲಿತೆಲಂಗಾಣದ ವಾರಂಗಲ್ ಮೂಲದ ಮಾಂಗಳ್ಯ ಶಾಪಿಂಗ್ ಮಾಲ್ ತನ್ನ ಶಾಖೆಯನ್ನು ಆರಂಭಿಸಿದ್ದು ಅದ್ಧೂರಿ ಚಾಲನೆ ಪಡೆದಿದೆ. ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ, ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹಾಗೂ ಕನ್ನಡ ಚಲನಚಿತ್ರದ ಪ್ರಖ್ಯಾತ ನಟಿ ಆಶಿಕಾ ರಂಗನಾಥ ಜ್ಯೊತಿ ಬೆಳಗಿಸಿ ಚಾಲನೆ ನೀಡಿದರು.ತೆಲಂಗಾಣ ರಾಜ್ಯದ ವಾರಂಗಲ್ ಮೂಲದ ಮಾಂಗಳ್ಯ ಶಾಪಿಂಗ್ ಮಾಲ್ 2012 ರಲ್ಲಿ ಆರಂಭಗೊಂಡು ವಿವಿಧ ಮಹಾನಗರದಲ್ಲಿ ತನ್ನ 24 ಶಾಖೆಗಳನ್ನು ತೆರೆದಿದೆ….
ಸಪ್ತಸಾಗರ ವಾರ್ತೆ, ವಿಜಯಪುರ,ಸೆ. 7: ಕೃಷಿ ಆಧಾರಿತ ಗ್ರಾಮೀಣ ಜೀವನ ಉನ್ನತೀಕರಣದಲ್ಲಿ ಸಹಕಾರಿ ರಂಗದ ಕೊಡುಗೆ ಅನುಪಮ. ಸಿದ್ಧನಗೌಡ ಪಾಟೀಲ ಅವರಿಂದ ಅಖಂಡ ಧಾರವಾಡ ಜಿಲ್ಲೆಯಲ್ಲಿ ಜನ್ಮ ಪಡೆದರೂ ಸಹಕಾರಿ ಚಳುವಳಿ ಅಭ್ಯದಯ ಸಾಧಿಸಿರುವುದು ಬಸವನಾಡಿನಲ್ಲಿ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಬಣ್ಣಿಸಿದರು.ಭಾನುವಾರ ನಗರದಲ್ಲಿ ಹೊರ್ತಿ ಶ್ರೀಶಾಂತೇಶ್ವರ ವಿವಿಧೋದ್ದೇಶ ಸಹಕಾರಿ ಸಂಘದ ರಜತ ಮಹೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ವಿಜಯಪುರ ಬಾಗಲಕೋಟೆ ಸೇರಿದಂತೆ ಅಖಂಡ…
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 2:ಪ್ರಾಥಮಿಕ ಶಾಲಾ ಮಕ್ಕಳಿಗೆ 21 ದಿನಗಳ ಓದುವ ಅಭಿಯಾನದಲ್ಲಿ ಈದ್ ಮಿಲಾದ್ ಹಬ್ಬ ಪ್ರಸ್ತಾಪ ಕೈ ಬಿಡುವಂತೆ ಸರ್ಕಾರಕ್ಕೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಆಗ್ರಹಿಸಿದ್ದಾರೆ.ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಒಂದೇ ಕೋಮಿನ ಹಬ್ಬದ ಬಗ್ಗೆ ಓದಿ ಎಂದು ಮಕ್ಕಳಿಗೆ ಹೇಳುವುದು ತಪ್ಪು ಎಂದು ಹೇಳಿದರು.ಸರ್ಕಾರ ತಕ್ಷಣವೇ ಓದು ಅಭಿಯಾನದಿಂದ ಈದ್ ಮಿಲಾದ್ ಹಬ್ಬದ ವಿಷಯ ತೆಗೆದು ಹಾಕುವಂತೆ ಒತ್ತಾಯ ಮಾಡಿದರು.ಹಿಂದೂ ಹಬ್ಬಗಳಾದ ದೀಪಾವಳಿ, ದಸರೆ,ಕ್ರಿಶ್ಚಿಯನ್, ಬೌದ್ಧ, ಜೈನ…
ಸಪ್ತಸಾಗರ ವಾರ್ತೆ ವಿಜಯಪುರ, ಆ. 31:ವಿಜಯಪುರ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್ ಬೇಕು ಎನ್ನುವ ಇರಾದೆ ನನ್ನದೂ ಇದೆ. ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್ ಬರುವುದನ್ನು ನಾನು ವಿರೋಧಿಸುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟಪಡಿಸಿದರು.ಭಾನುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ವಿಜಯಪುರ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್ ಬರುವುದಕ್ಕೆ ನಾನು ವಿರೋಧಿಯಾಗಿದ್ದೇನೆ ಎಂಬ ಅರ್ಥ ಬರುವಂತೆ ಕೆಲವರು ಬಿಂಬಿಸುತ್ತಿದ್ದಾರೆ. ಆದರೆ ಇದರಲ್ಲಿ ನನ್ನ ಯಾವುದೇ ಪಾತ್ರ ಇಲ್ಲ. ನಾನು ಕೂಡಾ ವಿಜಯಪುರ ಜಿಲ್ಲೆಗೆ…
ಸಪ್ತಸಾಗರ ವಾರ್ತೆ ವಿಜಯಪುರ, ಆ. 30:ವಿಜಯಪುರ ನಗರದಲ್ಲಿ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಬೇಡ. ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪಿಸಬೇಕು ಎಂದು ಹೋರಾಟ ಸಮಿತಿ ಪದಾಧಿಕಾರಿಗಳು ಶನಿವಾರ ಜವಳಿ, ಕಬ್ಬು, ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.ಸರಕಾರದಿಂದ ಉದ್ದೇಶಿತ ಪಿಪಿಪಿ ಮಾದರಿಯಡಿ ಖಾಸಗಿ ಸಹಭಾಗಿತ್ವದಡಿ ವೈದ್ಯಕೀಯ ಕಾಲೇಜು ಆರಂಭಿಸುವ ಹುನ್ನಾರವನ್ನು ಕೈ ಬಿಡಬೇಕು ಎಂದು ಮನವಿ ಸಲ್ಲಿಸಲಾಯಿತು. ಜೊತೆಗೆ ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸಲು ಮುಖ್ಯಂತ್ರಿ ಮೇಲೆ…