ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ಶಿವರಾಜ್ ಕೆಂಗನಾಳ್ ಆಗ್ರಹ
ಸಪ್ತಸಾಗರ ವಾರ್ತೆ,ವಿಜಯಪುರ, ಜು.12: ಜಿಲ್ಲೆಯಾದ್ಯಂತ ಮಳೆಯ ಅಭಾವದಿಂದ ಬೆಳೆಗಳು ಒಣಗುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ರೈತರನ್ನು ಸಂಕಷ್ಟದಿಂದ ಪಾರು ಮಾಡಬೇಕು ಎಂದು ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ವಿಜಯಪುರ ಜಿಲ್ಲೆಯ ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಕೃಷಿಗೆ ಅವಲಂಬಿತರಾಗಿರುವ ಸಾವಿರಾರು ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಸರ್ಕಾರ ಯಾವುದೇ ವಿಳಂಬ ಮಾಡದೆ ರೈತರ ಪರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಈ…


