ಕೊಕಟನೂರ ಶ್ರೀ ಯಲ್ಲಮ್ಮದೇವಿ ಜಾತ್ರೆಗೆ ವಿಶೇಷ ಸಾರಿಗೆ
ಸಪ್ತಸಾಗರ ವಾರ್ತೆ, ವಿಜಯಪುರ, ಡಿ.12:ಅಥಣಿ ತಾಲೂಕಿನ ಕೊಕಟನೂರದಲ್ಲಿ ನಡೆಯಲಿರುವ ಶ್ರೀ ಯಲ್ಲಮ್ಮದೇವಿ ಜಾತ್ರೆ ಅಂಗವಾಗಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಿಜಯಪುರ ವಿಭಾಗದಿಂದ ಡಿಸೆಂಬರ್ 15 ರಿಂದ ಡಿಸೆಂಬರ್ 21ರವರೆಗೆ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.ವಿಜಯಪುರ, ಇಂಡಿ, ಸಿಂದಗಿ, ಮುದ್ದೇಬಿಹಾಳ, ತಾಳಿಕೋಟಿ ಹಾಗೂ ಬಸವನ ಬಾಗೇವಾಡಿ ಘಟಕದ ಕೇಂದ್ರ ಬಸ್ ನಿಲ್ದಾಣಗಳಿಂದ ಕೊಕಟನೂರಕ್ಕೆ ವಿಶೇಷ ಸಾರಿಗೆ ವ್ಯವಸ್ಥೆ ಇರಲಿವೆ.ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಘಟಕ ವ್ಯವಸ್ಥಾಪಕರ ಸಂಖ್ಯೆ ವಿಜಯಪುರ-1: 7760992263, ವಿಜಯಪುರ-2: 7760992264,…


