ಸಿದ್ದರಾಮಯ್ಯ ಪದತ್ಯಾಗ: ಅಹಿಂದ ವರ್ಗ ಆಕ್ರೋಶ
ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 28 :ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುತ್ತಿರುವುದನ್ನು ಅಹಿಂದ ವರ್ಗ ಹಾಗೂ ಜಿಲ್ಲಾ ಕುರುಬ ಸಂಘವು ಖಂಡಿಸುತ್ತದೆ ಎಂದು ಜಿಲ್ಲಾ ಕುರುಬ ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜ ಕಾತ್ರಾಳ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಿದ್ದರಾಮಯ್ಯ ಬಡವರ ಮುಖ್ಯಮಂತ್ರಿ, ಅನ್ನಭಾಗ್ಯ, ಕ್ಷೀರ ಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆಯಂತಹ ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸಿ ಜನಪರ ಆಡಳಿತ ನೀಡಿದ ಧೀಮಂತ ನಾಯಕ. ಸಮಾಜದ ಎಲ್ಲ ವರ್ಗಗಳನ್ನು ಒಗ್ಗೂಡಿಸಿ ಹಸಿವು…


