ಭೃಷ್ಟಾಚಾರ: ಕಾರ್ಮಿಕ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 16:ವಿಜಯಪುರ ಜಿಲ್ಲೆಯಲ್ಲಿನ ಕಾರ್ಮಿಕ ಅಧಿಕಾರಿ ಕಛೇರಿಯಲ್ಲಿ ವ್ಯಾಪಕವಾಗಿ ಅವ್ಯವಹಾರ ಮತ್ತು ಭೃಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಜಿಲ್ಲೆಯ ಕಾರ್ಮಿಕ ಇಲಾಖೆ ಕಚೇರಿ ಮೇಲೆ ದಾಳಿ ನಡೆಸಿ ಶೋಧನಾ ಕಾರ್ಯ ಕೈಗೊಂಡಿದ್ದಾರೆ.ಕಾರ್ಮಿಕ ಇಲಾಖೆಯಲ್ಲಿ ಅವ್ಯವಹಾರ ಹಾಗೂ ವ್ಯಾಪಕ ಭ್ರಷ್ಟಾಚಾರ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಕಾರಣ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕಾರ್ಮಿಕ ಇಲಾಖೆಯನ್ನು ಶೋಧನೆ ಮಾಡಲು ಶೋಧನಾ ವಾರಂಟ್ ಹೊರಡಿಸಿದ್ದು, ಹೀಗಾಗಿ ವಿಜಯಪುರ ಜಿಲ್ಲೆಯ…

Read More