ರಾಜ್ಯ ಸರ್ಕಾರದ ವಿಶೇಷಾಧಿಕಾರಿ ಡಾ. ರಾಜಶೇಖರ ದ್ಯಾಬೇರಿ ಜಿಲ್ಲಾ ಆಸ್ಪತ್ರೆಗೆ ಭೇಟಿ, ಪರಿಶೀಲನೆ
ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 13:ಜಿಲ್ಲೆಯ ಜನರ ಬಹುಕಾಲದ ಕನಸಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ರಾಜ್ಯ ಸರ್ಕಾರದ ವಿಶೇಷಾಧಿಕಾರಿ ಡಾ. ರಾಜಶೇಖರ್ ದ್ಯಾಬೇರಿ ಅವರು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅಗತ್ಯವಿರುವ ಮೂಲ ಸೌಕರ್ಯ, ಆಸ್ಪತ್ರೆಯ ಸೌಲಭ್ಯಗಳು ಹಾಗೂ ಲಭ್ಯವಿರುವ ಸಂಪನ್ಮೂಲಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿದರು.ಪರಿಶೀಲನೆ ವೇಳೆ ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿಯ ಸದಸ್ಯರು ವಿಶೇಷಾಧಿಕಾರಿಗಳನ್ನು ಭೇಟಿ ಮಾಡಿ ಜಿಲ್ಲೆಯ…


