ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಕ್ರೀಡೆಗಳು ಪೂರಕ:ಜಯರಾಜ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 29: ಕ್ರೀಡೆಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಮತ್ತು ಶೈಕ್ಷಣಿಕ ಜೀವನದ ಸಮೃದ್ಧಿಗೆ ಪೂರಕವಾಗಿವೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಹೇಳಿದ್ದಾರೆ. ಶುಕ್ರವಾರ ಡೀಮ್ಡ್ ವಿಶ್ವವಿದ್ಯಾಲಯದ ಒಳಾಂಗಣ ಕ್ರೀಡಾಂಗಣದಲ್ಲಿ ವಿಶ್ವಪ್ರಸಿದ್ಧ ಹಾಕಿ ಕ್ರೀಡಾಪಟು ಮೇಜರ್ ಧ್ಯಾನಚಂದ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯಲ್ಲಿ ಮಾತನಾಡಿದರು.ಇದೇ ವೇಳೆ ವಿದ್ಯಾರ್ಥಿಗಳಿಗಾಗಿ ಬ್ಯಾಸ್ಕೆಟ್‌ಬಾಲ್ ಮತ್ತು ಚೆಸ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಸುಭಗಾ ಅವರು ಫಿಟ್ ಇಂಡಿಯಾ…

Read More

ಅಸ್ಮಿತ ಖೇಲೋ ಇಂಡಿಯಾ ಯೋಗಸನ ಕ್ರೀಡಾಕೂಟದಲ್ಲಿ ಜಿಲ್ಲೆಗೆ ಬಂಗಾರ ಪದಕ

ಸಪ್ತಸಾಗರ ವಾರ್ತೆ ವಿಜಯಪುರ, ಆ. 27:ಚಿತ್ರದುರ್ಗದ ಮುರುಘಾಮಠದ ಅನುಭವ ಮಂಟಪದಲ್ಲಿ ಆ.22 ಮತ್ತು 23 ರಂದು ನಡೆದ ಅಸ್ಮಿತ ಖೇಲೋ ಇಂಡಿಯಾ ಮಹಿಳಾ ಯೋಗಾಸನ ಕ್ರೀಡಾಕೂಟದಲ್ಲಿ ಜಿಲ್ಲೆಯ ಬಾಲಿಕೆಯರು ಚಿನ್ನದ ಪದಕ ಪಡೆದುಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.18 ವರ್ಷದ ಒಳಗಿನ ಬಾಲಕಿಯರ ಆಟಿಸ್ಟಿಕ್ಕ ವಿಭಾದಲ್ಲಿ ಬಂಗಾರ ಪದಕ ಪಡೆದಿದ್ದು, ಕುಮಾರಿಯರಾದ ಶ್ರೀ ಲಕ್ಷ್ಮಿ ಮ್ಯಾಗೇರಿ, ಮರಿಯಮ್ಮ ಹರಿಜನ, ಪ್ರಿಯಾ ಚವ್ಹಾಣ, ಸುಮನ ಪೋಹಿಟೆ, ಹರ್ಷಿತಾ ಹರಿಜನ ತಂಡದೊಂದಿಗೆ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಾ….

Read More

ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ಸಹಕಾರಿ -ಅಶೋಕ ದಳವಾಯಿ

ಸಪ್ತಸಾಗರ ವಾರ್ತೆ ವಿಜಯಪುರ, ಆ. 25:ಅರಣ್ಯ ರಕ್ಷಣೆ ಮಾಡುವ ಮಹತ್ತರ ಜವಾಬ್ದಾರಿಯನ್ನು ನಿಭಾಯಿಸುವ ಅರಣ್ಯ ಇಲಾಖೆಯ ಅಧಿಕಾರಿ-ಸಿಬ್ಬಂದಿಗಳು ತಮ್ಮ ಕರ್ತವ್ಯದೊಂದಿಗೆ ಸಾಂಸ್ಕೃತಿಕ ಹಾಗೂ ಕ್ರೀಡೆಗಳಲ್ಲಿ ಭಾಗವಹಿಸುವುದು ಅಗತ್ಯವಾಗಿದೆ. ಎಲ್ಲರೂ ಆಟೋಟಗಳಲ್ಲಿ ಪಾಲ್ಗೊಳ್ಳುವ ಮೂಲಕ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಂಡು ಕ್ರೀಡಾ ಸ್ಪೂರ್ತಿ ಮೆರೆಯಬೇಕು. ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ಸಹಕಾರಿಯಾಗಿವೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಅಶೋಕ ದಳವಾಯಿ ಅವರು ಹೇಳಿದರು.ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಬೆಳಗಾವಿ ವೃತ್ತ ಮಟ್ಟದ ಅರಣ್ಯ ಕ್ರೀಡಾಕೂಟಕ್ಕೆ ಚಾಲನೆ…

Read More

ಏಷಿಯನ್ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ವಿಜೇತ ಕ್ರೀಡಾಪಟುಗಳಿಗೆ ಸಿಎಂ ಅಭಿನಂದನೆ

ಸಪ್ತಸಾಗರ ವಾರ್ತೆ, ಬೆಂಗಳೂರು, ಆ. 21:ಕೊರಿಯಾದಲ್ಲಿ ನಡೆದ 20ನೇ ಏಷ್ಯನ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ವೇಗವಾದ ಸ್ಕೇಟರ್ ಹಾಗೂ ಡಬಲ್ ಸಿಲ್ವರ್ ಪದಕ ವಿಜೇತ ಕ್ರೀಡಾಪಟುಗಳಿಗೆಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಕಚೇರಿಯಲ್ಲಿ ಅಭಿನಂದಿಸಿದರು.ಕ್ರೀಡಾಪಟುಗಳಾದ ವೇಗವಾದ ಸ್ಕೇಟರ್ ಧನುಷ್ ಬಾಬು ಮತ್ತು ಸಿಲ್ವರ್ ಪದಕ ವಿಜೇತೆ ಕು. ಪೂರ್ವಿ ಮಠೆ ಅವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಸಾಧನೆಯನ್ನು ಪ್ರಶಂಶಿಸಿ ಅಭಿನಂದಿಸಿದ್ದಾರೆ.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರೂ, ರಾಜ್ಯ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಗೋವಿಂದರಾಜು ಅವರು ಉಪಸ್ಥಿತರಿದ್ದರು.

Read More

ಅಸ್ಮಿತಾ ಖೇಲೋ ಇಂಡಿಯಾಗೆ ಯೋಗ ತಂಡ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. ರಾಜ್ಯ ಮಟ್ಟದ ಅಸ್ಮಿತಾ ಖೋಲೋ ಇಂಡಿಯಾ ಯೋಗಾ ಕ್ರೀಡಾಕೂಟಕ್ಕೆ ತಿಡಗುಂದಿ ಮಾನಸ ಗಂಗೋತ್ರಿ ವಸತಿ ಶಾಲೆ ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ.ಆ.22ರಂದು ಚಿತ್ರದುರ್ಗದ ಮುರಘಾಮಠದಲ್ಲಿ ನಡೆಯಲಿರುವ ಈ ಕ್ರೀಡಾಕೂಟಕ್ಕೆ ಮಾರಿಯಮ್ಮ ಹರಿಜನ, ಭೂಮಿಕಾ ಛಲವಾದಿ, ಕಾವೇರಿ ಢವಳಗಿ, ಹರ್ಷಿತಾ ಹರಿಜನ, ಪ್ರಿಯಾ ಚವ್ಹಾಣ, ವೈಷ್ಣವಿ ರಾಠೋಡ ಆಯ್ಕೆ ಆಗಿದ್ದಾರೆ.ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಬಸನಗೌಡ ಹರಾನಾಳ, ಬಸವರಾಜ ಬಾಗೇವಾಡಿ ಉತ್ನಾಳ, ಕೃಷ್ಣ ಭಜಂತ್ರಿ,ಮತ್ತು ಭಾಗ್ಯಶ್ರೀ ಚಲವಾದಿ ಅಭಿನಂದಿಸಿದ್ದಾರೆ.

Read More

ಆ. 18ರಿಂದ ಜಿಲ್ಲೆಯಾದ್ಯಂತ ತಾಲೂಕಾ ಮಟ್ಟದ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 16: ಜಿಲ್ಲೆಯಾದ್ಯಂತ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟವನ್ನು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಆಗಸ್ಟ್ 18 ರಿಂದ ಹಮ್ಮಿಕೊಳ್ಳಲಾಗಿದೆ.ಆ.18ರಂದು ಸಿಂದಗಿ ತಾಲೂಕಾ ಕ್ರೀಡಾಕೂಟ ಸಿಂದಗಿ ತಾಲೂಕಾ ಕ್ರಿಡಾಂಗಣದಲ್ಲಿ, ಆಗಸ್ಟ್ 19ರಂದು ಮುದ್ದೇಬಿಹಾಳ ತಾಲೂಕಿನ ಕ್ರೀಡಾಕೂಟವನ್ನು ಮುದ್ದೇಬಿಹಾಳದ ಎಂಜಿವಿಸಿ ಕಾಲೇಜ್ ಮುದ್ದೇಬಿಹಾಳದಲ್ಲಿ ಹಾಗೂ ದೇವರ ಹಿಪ್ಪರಗಿಯ ಶ್ರೀ ಸಿದ್ಧೇಶ್ವರ ಪ್ರೌಢಶಾಲೆ ಮೈದಾನದಲ್ಲಿ, ಆಗಸ್ಟ್ 21ರಂದು ತಾಳಿಕೋಟೆ ತಾಲೂಕಿನ ಕ್ರೀಡಾಕೂಟವನ್ನು ಬ್ರಿಲಿಯಂಟ್ ಹೈಸ್ಕೂಲಿನಲ್ಲಿ ಹಾಗೂ ಆಲಮೇಲ ತಾಲೂಕಿನ ಕ್ರೀಡಾಕೂಟವನ್ನು ಸರಕಾರಿ ಹಿರಿಯ ಮಾದರಿ ಶಾಲೆಯ ಆವರಣದಲ್ಲಿ,…

Read More

ಬೆಂಗಳೂರಿನಲ್ಲಿ ಆ. 17ರಂದು ರಾಜ್ಯಮಟ್ಟದ ರೋಲ್ ಬಾಲ್ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 15: ಪ್ರಸಕ್ತ ಸಾಲಿನ 8 ನೇ ರಾಜ್ಯಮಟ್ಟದ ರೋಲ್ ಕ್ರೀಡಾಕೂಟವು ಆ. 17 ರಂದು ಸ್ಕೆಟಿಂಗ್ ಅಕಾಡೆಮಿ ಮಲ್ಲಸಂದ್ರ ವತಿಯಿಂದ ಬೆಂಗಳೂರಿನಲ್ಲಿ ನಡೆಯಲಿದೆ. ಸುಪರ ಮಿನಿ 9 ವರ್ಷದ ಒಳಗಡೆ, ಮಿನಿ, 11 ವರ್ಷದ ಒಳಗಡೆ ಮತ್ತು 14 ವರ್ಷದ ಒಳಗಡೆ ಬಾಲಕ, ಬಾಲಕಿಯರು ಈ ಕ್ರೀಡಾಕೂಟದಲ್ಲಿ ವಿಜಯಪುರ ಜಿಲ್ಲಾ ರೊಲ ಬಾಲ ಕ್ರೀಡಾಪಟುಗಳು ಭಾಗವಹಿಸಬೇಕೆಂದು ವಿಜಯಪುರ ಜಿಲ್ಲಾ ರೋಲ್ ಬಾಲ ಸಂಸ್ಥೆ ಯ, ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಬಸವರಾಜ ಬಾಗೇವಾಡಿ…

Read More

ಜಿಲ್ಲಾ ಮಟ್ಟದ ಯೋಗಾಸನ ಕ್ರೀಡಾಕೂಟ ಉದ್ಘಾಟನೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 4:ವಿಜಯಪುರ ಜಿಲ್ಲಾ ಮಟ್ಟದ ಪ್ರಪ್ರಥಮ ಯೋಗಾಸನ ಕ್ರೀಡಾಕೂಟ ತಿಡಗುಂದಿ ಪತಂಜಲಿ ಯೋಗ ಕ್ರೀಡಾ ಮತ್ತು ಸಾಂಸ್ಕೃತಿಕ ಭವನದಲ್ಲಿ ಭಾನುವಾರ ನಡೆಯಿತು.ಸಸಿಗೆ ನೀರೆಯುವ ಮೂಲಕ ಕ್ರೀಡಾಕೂಟ ಉದ್ಘಾಟಿಸಲಾಯಿತು.ಅರಕೇರಿ ಐಆರ್ ಬಿ ಸಿಪಿಐ ಕಲ್ಲನಗೌಡ ಪಾಟೀಲ ಕ್ರೀಡಾಕೂಟ ಉದ್ಘಾಟಿಸಿದರು.ದಿವ್ಯ ಸಾನ್ನಿಧ್ಯವನ್ನು ಶಾಂತವ್ವ ಹರನಾಳ ವಹಿಸಿದ್ದರು.ತಿಡಗುಂದಿ ಕೆಜಿಎಸ್ ಎ ಅಧ್ಯಕ್ಷ ಬಸನಗೌಡ ಹರನಾಳ ಅಧ್ಯಕ್ಷತೆ ವಹಿಸಿದ್ದರು.ಆಡಳಿತಾಧಿಕಾರಿ ಕುಮಾರಗೌಡ ಹರನಾಳ, ಶ್ವೇತಾ ಹರನಾಳ, ಮುಖ್ಯ ಪರಿವೀಕ್ಷಕರಾಗಿ, ಮಲ್ಲಮ್ಮ ಭೋಜಣ್ಣವರ, ಬಸವರಾಜ ಬಾಗೇವಾಡಿ ಉತ್ನಾಳ, ಪುಷ್ಪಾವತಿ ಮೇಟಿ, ರಮೇಶ ಮಾದರ,…

Read More

ಎತ್ತಿನಬಂಡಿ ಓಟ ಕ್ರೀಡೆ ಆಯೋಜನೆ : ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 31:ಜಿಲ್ಲೆಯಲ್ಲಿ ಎತ್ತಿನಬಂಡಿ ಓಟ ಕ್ರೀಡೆಯನ್ನು ಆಯೋಜಿಸಲಾಗುತ್ತಿದ್ದು, ಎತ್ತಿನಬಂಡಿ ಓಟ ಕ್ರೀಡೆಯಲ್ಲಿ ಆಸಕ್ತ ಹೊಂದಿರುವ ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಎತ್ತಿನಬಂಡೆ ಕ್ರೀಡೆಗೆ ಪ್ರೋತ್ಸಾಹ ಮತ್ತು ಉತ್ತೇಜನ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿರುತ್ತಾರೆ. ಎತ್ತಿನ ಬಂಡೆ ಕ್ರೀಡೆಗೆ ಪ್ರೋತ್ಸಾಹ ಹಾಗೂ ಉತ್ತೇಜನ ನೀಡಲು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಯೋಜಿಸುವ 15 ಸಂಘ-ಸಂಸ್ಥೆಗಳಿಗೆ ತಲಾ 2 ಲಕ್ಷ ರೂ.ಗಳನ್ನು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆಯ್ಕೆ ಮಾಡುವ ಸಂಘ-ಸಂಸ್ಥೆಗಳಿಗೆ ಅನುದಾನ ಒದಗಿಸಲಾಗುತ್ತದೆ.ಜಿಲ್ಲೆಯಲ್ಲಿಯೂ ಸಹ ಜಿಲ್ಲಾಧಿಕಾರಿಗಳ…

Read More

ಆಗಸ್ಟ್ 2,3 ರಂದು ದಾವಣಗೆರೆಯಲ್ಲಿ ರಾಜ್ಯ ಮಟ್ಟದ ಅಸ್ಮಿತಾ ವುಶು ಲೀಗ್ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 16:ಆಗಸ್ಟ್ 2 ಹಾಗೂ 3ರಂದು ಕರ್ನಾಟಕ ರಾಜ್ಯ ವುಶು ಸಂಸ್ಥೆಯ ವತಿಯಿಂದ, ದಾವಣಗೆರೆಯಲ್ಲಿ ಸಬ್ ಜ್ಯೂನಿಯರ್, ಜೂನಿಯರ್, ಬಾಲಕಿಯರ ಮತ್ತು ಮಹಿಳೆಯರ ವುಶು ಕ್ರೀಡಾಕೂಟ ನಡೆಯಲಿದೆ.ಕರ್ನಾಟಕ ರಾಜ್ಯ ವುಶು ಸಂಸ್ಥೆಯು ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಓಲಂಪಿಕ್ ಸಂಸ್ಥೆ, ಭಾರತೀಯ ವುಶು ಒಕ್ಕೂಟದಿಂದ ಮಾನ್ಯತೆ ಪಡೆದ ವುಶು ಕ್ರೀಡೆಯಾಗಿದೆ. ವುಶು ಕ್ರೀಡೆಯು ದಸರಾ ಕ್ರೀಡಾಕೂಟದಲ್ಲಿ, ಮಿನಿ ಓಲಂಪಿಕ್ ಕ್ರೀಡಾಕೂಟದಲ್ಲಿ, ವಿಶ್ವ ವಿದ್ಯಾಲಯ ಕ್ರೀಡಾಕೂಟದಲ್ಲಿ,…

Read More