ಸಮಾಜದಲ್ಲಿ ಸತ್ಪ್ರಜೆಗಳನ್ನು ರೂಪಿಸುವಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಹಿರಿದು- ಶ್ರೀನಿವಾಸ ಬಿದರಿ
ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 17: ತಲೆತಲಾಂತರದಿಂದ ಬಂದ ಆಸ್ತಿಗಳನ್ನು ನಮ್ಮ ಹಿರಿಯರು ದಾನ ನೀಡಿದ್ದರ ಫಲವಾಗಿ ಆರಂಭಗೊಂಡ ಶಿಕ್ಷಣ ಸಂಸ್ಥೆಗಳು ಸಮಾಜದಲ್ಲಿ ಸತ್ಪ್ರಜೆಗಳನ್ನು ರೂಪಿಸಿವೆ ಎಂದು ಪಶ್ಚಿಮ ಬಂಗಾಳ ರಾಜ್ಯದಲ್ಲಿ ಆದಾಯ ತೆರಿಗೆ ಇಲಾಖೆ ಮುಖ್ಯ ಪ್ರಧಾನ ಆಯುಕ್ತರಾಗಿರುವ ವಿಜಯಪುರದ ಶ್ರೀನಿವಾಸ ಬಿದರಿ ಹೇಳಿದರು.ಆದಾಯ ತೆರಿಗೆ ಇಲಾಖೆಯಲ್ಲಿ ಪ್ರಧಾನ ಆಯುಕ್ತರಿಂದ ಮುಖ್ಯ ಪ್ರಧಾನ ಆಯುಕ್ತರೆಂದು ಬಡ್ತಿ ಪಡೆದಿರುವ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಅವರ ಸ್ನೇಹಿತರು, ಶಾಲಾ-ಕಾಲೇಜು ಸಹಪಾಠಿಗಳು ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ವಿಜಯಪುರದ ದರ್ಬಾರ್, ಪಿಡಿಜೆ,…


