ಮಳೆ, ಗಾಳಿಗೆ ಅಪಾರ ಬಾಳೆ ಗಿಡ ನಾಶ

ಸಪ್ತಸಾಗರ ವಾರ್ತೆ, ಇಂಡಿ, ಮೇ24: ತಾಲೂಕಿನ ಸಾಲೋಟಗಿ ಗ್ರಾಮದಲ್ಲಿ ಶನಿವಾರ ರಾತ್ರಿ ಸುರಿದ ಮಳೆಗಾಳಿಗೆ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಬಾಳೆ ಗಿಡಗಳು ಸಂಪೂರ್ಣ ನೆಲಕ್ಕುರುಳಿ ಲಕ್ಷಾಂತರ ರೂ. ಹಾನಿಯಾಗಿದೆ.ಗ್ರಾಮದ ರೈತ ಧರ್ಮರಾಯ ನರಳೆ ಅವರ 2055 ಬಾಳೆಗಿಡ ಹಾಗೂ ಧರೆಪ್ಪ ನರಳೆ ಅವರಿಗೆ ಸೇರಿದ 1950 ಬಾಳೆ ಗಿಡಗಳು ಮಳೆ ಹಾಗೂ ಗಾಳಿಗೆ ಸಂಪೂರ್ಣ ನೆಲಕ್ಕುರುಳಿ ಹಾಳಾಗಿವೆ. ಅಂದಾಜು 35ಲಕ್ಷದ ಫಸಲು ಹಾಳಾಗಿದೆ‌ ಎಂದು ಅಂದಾಜಿಸಲಾಗಿದೆ.ಜೆಡಿಎಸ್ ಮುಖಂಡ ಬಿ.ಡಿ. ಪಾಟೀಲ ಹಂಜಗಿ ಅವರು ಭೇಟಿ ನೀಡಿ…

Read More

ಬಿರುಗಾಳಿ ಸಹಿತ ಮಳೆಗೆ ನೆಲಕ್ಕೆ ಬಿದ್ದ ಬಾಳೆ:15 ಲಕ್ಷಕ್ಕೂ ಅಧಿಕ ಹಾನಿ

ಸಪ್ತಸಾಗರ ವಾರ್ತೆ,ತಾಳಿಕೋಟೆ, ಮೇ. 23 :ಕಳೆದ ಎರಡು ದಿನಗಳ ಹಿಂದಷ್ಟೇ ಭೀಕರ ಬಿರುಗಾಳಿ ಸಹಿತ ಮಳೆಗೆ ತಾಲೂಕಿನ ಹೊಸಳ್ಳಿ ಗ್ರಾಮದ ರೈತ ಶಾಂತಗೌಡ ಬಿರಾದಾರ ಎಂಬವರ ಸರ್ವೆ ನಂ. 33ರ ಜಮೀನಿನಲ್ಲಿ ಬೆಳೆದಿದ್ದ 5 ಏಕರೆ ಪ್ರದೇಶದಲ್ಲಿಯ ಸಾವಿರಾರು ಬಾಳೆ ಗಿಡಗಳು, ಮುರಿದು ನೆಲಕ್ಕೆ ಬಿದ್ದ ಘಟನೆ ನಡೆದಿದೆ.ಇನ್ನೇನು ವಾರ ಕಳೆಯುವಷ್ಟರಲ್ಲಿ ಬಾಳೆ ಗೊನೆಗಳನ್ನು ಕಟಾವಿಗೆ ಬಂದಿದ್ದವು. ಒಟ್ಟು 5 ಎಕರೆ ಪ್ರದೇಶದಲ್ಲಿ ಸುಮಾರು 1200 ಕ್ಕೂ ಅಧಿಕ ಬಾಳೆಗಿಡಗಳನ್ನು ಬೆಳೆದಿದ್ದರು. ಆದರೆ ಬಿರುಗಾಳಿ ಸಹಿತ ಸುರಿದ…

Read More