ಭೂಮಾಪಕರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಶಾಸಕ ಯತ್ನಾಳ ಒತ್ತಾಯ
ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 26:ಭೂ ಮಾಪಕರ ಧರಣಿಯಿಂದ ಜಮೀನು ಸರ್ವೆ ವಿವಾದಗಳು ನಿರ್ಧಾರವಾಗದೆ, ರೈತರು ಸರ್ವೇ ಆಗದ ದಾಖಲಾತಿ ಪಡೆಯದ ಕಾರಣ ಅವರಿಗೆ ಬೆಳೆ ಸಾಲ ಸಿಗುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಹಿಂದೆ ಪ್ರತಿಪಕ್ಷ ನಾಯಕರಾಗಿದ್ದಾಗ ಭೂ ಮಾಪಕರ ಪರ ಧ್ವನಿ ಎತ್ತಿದ್ದರು. ಈಗ ‘ಜಾಣ ಕಿವುಡು’ ಪ್ರದರ್ಶಿಸುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಕಿಡಿಕಾರಿದ್ದಾರೆ.ಭೂಮಾಪಕರ ಧರಣಿಯಿಂದ ರೈತರಿಗೆ ಬೇಕಾದ ಅಗತ್ಯ ಸೇವೆ ಸಿಗದೇ ಪರದಾಡುತ್ತಿದ್ದು, ಇತ್ತ ಸರ್ಕಾರ ಅವರ ಸಮಸ್ಯೆಗಳನ್ನು ಆಲಿಸಲು ಯಾವುದೇ…


