
ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಶಿಕ್ಷಕರು ಹೊರ ತರಬೇಕು: ಬಿರಾದಾರ
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 6: ಸೃಷ್ಟಿಕರ್ತನು ಪ್ರತಿಯೊಬ್ಬ ಮಗುವಿಗೂ ವಿಶೇಷ ಸಾಮರ್ಥ್ಯವನ್ನು ಕೊಟ್ಟಿರುತ್ತಾನೆ. ಅದನ್ನು ಗುರುತಿಸಿ ಹೊರ ತೆಗೆಯುವ ಕಾರ್ಯವನ್ನು ಶಾಲಾ ಶಿಕ್ಷಕರು ಮಾಡಬೇಕಾಗಿದೆ ಎಂದು ಮಹಾನಗರ ಪಾಲಿಕೆಯ ಸದಸ್ಯ ಪ್ರೇಮಾನಂದ ಬಿರಾದಾರ ಹೇಳಿದರು.ನಗರದ ಕನಕದಾಸ ಬಡಾವಣೆಯ ಶ್ರೀ ಸಿದ್ದೇಶ್ವರ ಕೋಚಿಂಗ್ ಕ್ಲಾಸಿಸ್ ಮತ್ತು ನೀಲಾಂಬಿಕಾ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಗಣೇಶ ವಿಸರ್ಜನೆ ಹಾಗೂ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಡಿದರು. ದಿನಕ್ಕೊಂದು ಆವಿಷ್ಕಾರಗಳ ಮೂಲಕ ಶರವೇಗದಲ್ಲಿ ಸಾಗುತ್ತಿರುವ ಇಂದಿನ ದಿನಮಾನಗಳಲ್ಲಿ ಪಾಲಕರು ಹಾಗೂ…