ತಿಕೋಟ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆ ಗೊಂದಲ:ಪರೀಕ್ಷಾ ಮಂಡಳಿಗೆ ವರದಿ ಸಲ್ಲಿಕೆ-ಡಿಸಿ ಆನಂದ ಕೆ.
ಸಪ್ತಸಾಗರ ವಾರ್ತೆ,ವಿಜಯಪುರ, ಆ.2:ವಿಜಯಪುರ ಜಿಲ್ಲೆಯ ತಿಕೋಟ ಪಟ್ಟಣದ ಶಾರದಾಂಬಾ ಶಿಕ್ಷಣ ಸಂಸ್ಥೆಯಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷಾ ಕೇಂದ್ರದಲ್ಲಿ ಭಾನುವಾರ ಕೆಲಕಾಲ ಗೊಂದಲ ಉಂಟಾಯಿತು. ಪ್ರಶ್ನೆ ಪತ್ರಿಕೆ ಹಾಗೂ ಒಎಂಆರ್ ಶೀಟ್ನ ಕ್ರಮಸಂಖ್ಯೆ ಹೊಂದಿಕೆಯಾಗಿಲ್ಲ ಎಂದು ಆರೋಪಿಸಿ ಕೆಲ ಪರೀಕ್ಷಾರ್ಥಿಗಳು ಪರೀಕ್ಷೆಯನ್ನು ಬಹಿಷ್ಕರಿಸಿ ಒಎಂಆರ್ ಶೀಟ್ ಮತ್ತು ಪ್ರಶ್ನೆ ಪತ್ರಿಕೆಗಳೊಂದಿಗೆ ಕೇಂದ್ರದ ಹೊರಗೆ ಬಂದು ಪ್ರತಿಭಟನೆ ನಡೆಸಿದರು.ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸ್ಪಷ್ಟನೆ ನೀಡಿ, ಪ್ರಶ್ನೆ ಪತ್ರಿಕೆ ಹಾಗೂ ಒಎಂಆರ್ ಶೀಟ್ಗಳನ್ನು ನಿಗದಿತ…


