ಟೊಯೊಟಾ ಕಿರ್ಲೋಸ್ಕರ್ ಕಂಪನಿ ಅನುದಾನ ದಾನದಷ್ಟೇ ಶ್ರೇಷ್ಠ:ಸಚಿವ ಎಂ. ಬಿ. ಪಾಟೀಲ
ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 8: ಜಾಗತಿಕ ಖ್ಯಾತಿಯ ಟೊಯೊಟಾ ಕಿರ್ಲೋಸ್ಕರ್ ಕಂಪನಿ ಸಿ.ಎಸ್.ಆರ್. ಅನುದಾನದಡಿ ಸರಕಾರಿ ಶಾಲಾ, ಕಾಲೇಜುಗಳ ಅಭಿವೃದ್ಧಿಗೆ ಅನುದಾನ ಒದಗಿಸಿರುವುದು ದಾನಗಳಲ್ಲಿಯೇ ಶ್ರೇಷ್ಠವಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ರವಿವಾರ ಬಬಲೇಶ್ವರ ತಾಲೂಕಿನ ಮಮದಾಪುರ ಸರಕಾರಿ ಪದವಿ ಕಾಲೇಜು ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.ನಗರದ ಖಾಸಗಿ ಶಾಲೆ ಕಾಲೇಜುಗಳನ್ನು ಮೀರಿಸುವ ಕಟ್ಟಡಗಳನ್ಬು ಮಮದಾಪುರ ಭಾಗದಲ್ಲಿ ನಿರ್ಮಿಸಲಾಗಿದೆ. ಶಾಲೆಯೇ ದೇವಾಲಯ, ಮಕ್ಕಳೇ ದೇವರು…


