ಅಕ್ರಮ ಅಕ್ಕಿ ಸಾಗಾಟ: ಅಕ್ಕಿ ವಶ

ಸಪ್ತಸಾಗರ ವಾರ್ತೆ, ವಿಜಯಪುರ,ಸೆ.7:ನಗರ ಹೊರ ವಲಯದ ಭೂತನಾಳ ಕೆರೆಯ ಹತ್ತಿರ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ,ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ ವಶಕ್ಕೆ ಪಡೆದಿದ್ದಾರೆ.ಭೂತನಾಳ ಕೆರೆ ಹತ್ತಿರ ಲಾರಿಯಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿರುವ ಸಂದರ್ಭದಲ್ಲಿ ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ರೂ.7,83,760‌ ಮೌಲ್ಯದ 346 ಕ್ವಿಂಟಲ್ 26 ಕೆಜಿ ಅಕ್ಕಿ‌ ಹಾಗೂ ಲಾರಿ ವಶಕ್ಕೆ ಪಡೆದು ಶೇಖರ ಮದ್ಯೆಯನ್ ಎಂಬುವವರ ಮೇಲೆ ಆದರ್ಶ…

Read More

ಸಾರಿಗೆ ನೌಕರರ ಅನಿರ್ದಿಷ್ಟ ಮುಷ್ಕರ: ಪ್ರಯಾಣಿಕರ ಪರದಾಟ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 5:ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಸಾರಿಗೆ ನೌಕರರು ಇಂದಿನಿಂದ ಅನಿರ್ದಿಷ್ಟ ಮುಷ್ಕರ ಆರಂಭಿಸಿದ್ದರಿಂದ ರಾಜ್ಯದ ಎಲ್ಲೆಡೆಯಂತೆ ವಿಜಯಪುರ ಜಿಲ್ಲೆಯಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು ಪ್ರಯಾಣಿಕರು ಪರದಾಡುವಂತಾಗಿದೆ.ನಿನ್ನೆಯಷ್ಟೇ ಸಾರಿಗೆ ನೌಕರರ ಮುಖಂಡರ ಜೊತೆಗೆ ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಮಾತುಕತೆಗಳು ವಿಫಲವಾಗಿದ್ದರಿಂದ ಸಾರಿಗೆ ಮುಷ್ಕರ ಇಂದಿನಿಂದ ಆರಂಭಗೊಂಡಿದೆ.ಬೆಳಿಗ್ಗೆ 6 ಗಂಟೆಯಿಂದಲೇ ಸಾರಿಗೆ ಮುಷ್ಕರ ಆರಂಭವಾಗಿದ್ದರಿಂದ ವಿಜಯಪುರ ಜಿಲ್ಲೆಯ ಯಾವುದೇ ಬಸ್ ನಿಲ್ದಾಣದಲ್ಲಿ ಬಸ್ ಓಡಾಟ ಕಂಡು ಬರಲಿಲ್ಲ. ವಿಜಯಪುರ…

Read More