ವೈದ್ಯರು ಕಣ್ಣಿಗೆ ಕಾಣುವ ದೇವರು: ಜನರ ನಂಬಿಕೆ ಉಳಿಸಿಕೊಳ್ಳಿ-ಸಿಎಂ ಡಿ.ಕೆ. ಶಿವಕುಮಾರ್
ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ.16:“ವೈದ್ಯರು ಕಣ್ಣಿಗೆ ಕಾಣುವ ದೇವರು. ಜನ ಎಷ್ಟೇ ಕಷ್ಟ ಇದ್ದರೂ ಬಹಳ ನಂಬಿಕೆ ಹಾಗೂ ವಿಶ್ವಾಸದಿಂದ ವೈದ್ಯರ ಬಳಿ ಹೋಗುತ್ತಾರೆ. ನೀವು ಅವರ ನಂಬಿಕೆ ಉಳಿಸಿಕೊಂಡು ಸೇವೆ ಮಾಡಬೇಕು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ವೈದ್ಯ ಪದವೀಧರರಿಗೆ ಕಿವಿಮಾತು ಹೇಳಿದರು.ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಮಂಗಳವಾರ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ವಾರ್ಷಿಕ ಘಟಿಕೋತ್ಸವದಲ್ಲಿ ಶಿವಕುಮಾರ್ ಅವರು ಮಾತನಾಡಿದರು.ಇದೇ ಸಂದರ್ಭದಲ್ಲಿ ರಾಜ್ಯಪಾಲರ ಜತೆ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು.“ಈ ವೃತ್ತಿಯಲ್ಲಿ…


